ವಿಜಯಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ನೂತನ ವಸತಿ ನಿಲಯ ಆರಂಭ

Date:

ಸತತ ಎರಡು ವರ್ಷಗಳ ದಲಿತ ವಿದ್ಯಾರ್ಥಿ ಪರಿಷತ್‌ನ ಹೋರಾಟದ ಫಲವಾಗಿ ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ನೂತನ ವಸತಿ ನಿಲಯ ಆರಂಭವಾಗಿದೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪರಿಷತ್‌ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ, “ಸದರಿ ಮಹಿಳಾ ವಸತಿ ನಿಲಯಕ್ಕಾಗಿ ಸತತ ಎರಡು ವರ್ಷಗಳಿಂದ ಹೋರಾಟ ಮಾಡಿ, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಜೊತೆಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗೆ ಆಗ್ರಹಿಸಲಾಗಿತ್ತು. ಇಂದು ಬಹು ದಿನಗಳ ಬೇಡಿಕೆ ಈಡೇರಿದೆ. ಮುಂದಿನ ದಿನಗಳಲ್ಲಿ ವಸತಿ ನಿಲಯಕ್ಕೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಲು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಮತ್ತಷ್ಟು ಅಭಿವೃದ್ಧಿ ಪಡಿಸಲು ಎಲ್ಲರೂ ಜೊತೆಗೂಡಿ ಪ್ರಯತ್ನಿಸಿಸೋಣ” ಎಂದು ಹೇಳಿದರು.

ಈ ವೇಳೆ ಮಾತನಾಡಿದ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶಟ್ಟಿ, “ಸಾವಿತ್ರಿಬಾಯಿ ಫುಲೆ ಅವರ ವಿಚಾರಗಳನ್ನು ವಿದ್ಯಾರ್ಥಿನಿಯರು ಮೈಗೂಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಉನ್ನತ ಮಟ್ಟಕ್ಕೆ ಬೆಳೆಯಬೇಕು ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತೋರಿದ ಮಾರ್ಗದಲ್ಲಿ ಸಾಗಿದರೆ ಅವರು ಕಂಡ ಮಹಿಳಾ ಸಬಲೀಕರಣ ಕನಸು ನನಸಾಗಲು ಸಾಧ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಸ್ವಾತಂತ್ರ್ಯ ದಿನಾಚರಣೆ, ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಸೂಚನೆ

ಈ ವೇಳೆ ವಿಶ್ವ ವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಬಿ ಜೆ ಇಂಡಿ, ವಿಶ್ವವಿದ್ಯಾಲಯದ ಎಸ್‌ಸಿ/ಎಸ್‌ಟಿ ವಿಭಾಗದ ಡಾ. ಹಣಮಂತಯ್ಯ ಪೂಜಾರಿ, ಸಮಾಜ ಕಲ್ಯಾಣ ಇಲಾಖೆಯ ವಸತಿ ವಾರ್ಡನ್ ಶಕುಂತಲಾ ರಜಪೂತ, ಪರಿಷತ್ತಿನ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಜಿಲ್ಲಾ ಸಂಚಾಲಕ ಅಕ್ಷಯಕುಮಾರ ಅಜಮನಿ, ಸಹ ಸಂಚಾಲಕ ಮಹಾದೇವ ಚಲವಾದಿ, ಮುಖಂಡರಾದ ಸಂದೇಶ್ ಅಲ್ಲದೇ ವಸತಿ ನಿಲಯ ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...