ತೆನೆ ಹೊತ್ತ ಮಹಿಳೆಗೆ ‘ಕಮಲ’ ಎಂಬ ಹೊಸ ನಾಮಕರಣ: ಪ್ರಜ್ವಲ್‌ ರೇವಣ್ಣ

Date:

“ಬಿಜೆಪಿ-ಜೆಡಿಎಸ್‌ ಮೈತ್ರಿಯಾದ ಬಳಿಕ ತೆನೆಹೊತ್ತ ಮಹಿಳೆ ಚಿಹ್ನೆ ಇರುತ್ತಾ ಅಥವಾ ಕಮಲದ ಚಿಹ್ನೆ ಇರುತ್ತಾ ಎಂದು ಕೇಳುತ್ತಿದ್ದಾರೆ. ಈ ಬಗ್ಗೆ ಜನರಿಗೆ ಅನುಮಾನ ಗೊಂದಲ ಬೇಡ. ತೆನೆಹೊತ್ತ ಮಹಿಳೆ ನಮ್ಮ ಚಿಹ್ನೆಗೆ ಕಮಲ ಎಂದು ಹೊಸದಾಗಿ ನಾಮಕರಣ ಮಾಡಿದ್ದೇವೆ” ಎಂದು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ತಿಳಿಸಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಂಚಿಗನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, “ದೇಶಕ್ಕಾಗಿ ನಡೆಯುತ್ತಿರುವ ಚುನಾವಣೆ ಲೋಕಸಭಾ ಚುನಾವಣೆ. ಅಭಿವೃದ್ಧಿ ವಿಚಾರದಲ್ಲಿ ನಮಗೆ ಯಾರೂ ಸರಿಸಾಟಿಯೇ ಇಲ್ಲ” ಎಂದಿದ್ದಾರೆ.

“ಕಾಂಗ್ರೆಸ್‌ ನಾಯಕರು ಮಾತು ಎತ್ತಿದರೇ, ಎಚ್‌.ಡಿ.ರೇವಣ್ಣ ದುರಹಂಕಾರಿ ಎಂದೆನ್ನುತ್ತಾರೆ. ಆದರೆ, ರೇವಣ್ಣನವರಿಗೆ ಸ್ವಲ್ಪ ಸಿಟ್ಟು ಜಾಸ್ತಿ ಇದೆ. ಆದರೆ, ಅವರ ಹೃದಯದಲ್ಲಿ ಪ್ರೀತಿ ಇದೆ. ರೇವಣ್ಣನವರು ಸ್ವಂತ ಕುಟುಂಬವನ್ನೂ ಮರೆತು ಜನರಿಗಾಗಿ ದುಡಿಯುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಬಕಾರಿ ಪ್ರಕರಣ | ಇಡಿ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ; ಏ.15ರಂದು ವಿಚಾರಣೆ

“ನನ್ನ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಎಚ್‌.ಡಿ ರೇವಣ್ಣ ಅವರ ಕಣ್ಣೀರು ಒರೆಸುವ ಕೆಲಸ ಮಾಡಿ. ರೇವಣ್ಣ ಅವರಿಗೆ ಬಲತುಂಬುವ ಕೆಲಸ ಮಾಡಿ. ನಾನು ಗೆದ್ದ ಬಳಿಕ ಈ ಭಾಗದಲ್ಲಿ ಇಲ್ಲಿಯವರೆಗೂ ಏನೇನೂ ಕೆಲಸ ಮಾಡಿದ್ದೇನೆಂದು ಅರ್ಧ ಗಂಟೆವರೆಗೂ ಹೇಳಬಲ್ಲೇ, ಮನೆ ಮನೆಗೆ ನೀರು ತರಿಸುವ ಕೆಲಸ ಮಾಡಿದ್ದೇನೆ. ₹4907 ಕೋಟಿ ರೂಪಾಯಿ ಅನುದಾನ ತಂದಿದ್ದೇನೆ. ರಸ್ತೆಗಳನ್ನ ಮಾಡಿಸಿದ್ದೀನಿ” ಎಂದಿದ್ದಾರೆ.

“ಆರ್‌ಎಸ್‌ಎಸ್‌ ಸ್ವಯಂ ಸೇವಕ ವಿಜಯಕುಮಾರ್ ಮೇಲೆ ಹಲ್ಲೆ ಪ್ರಕರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಮೀಲಾಗಿದ್ದಾರೆ. ಪೊಲೀಸರು ಒತ್ತಡಕ್ಕಡ ಸಿಲುಕಿದ್ದಾರೆ. ವಿಜಯಕುಮಾರ್ಗೆ ನ್ಯಾಯ ಸಿಗುವವರೆಗೂ ಹೋರಾಡುತ್ತೇನೆ” ಎಂದು ಹೇಳಿದರು.

“ವಿಜಿಯವರ ಮೇಲೆ ಮಾರಕಾಸ್ತ್ರ ಬಳಸಿ ಹಲ್ಲೆ ಮಾಡಿದ್ದಾರೆ. ತಲೆಗೆ ಕಲ್ಲಿನಿಂದ ಹೊಡೆದಿದ್ದಾರೆ. ಅಂಗಡಿ ನಾಶಪಡಿಸಿದ್ದಾರೆ. ವಿಜಿಯವರು ಹಿಂದುತ್ವಕ್ಕಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅವರಿಗಿನ್ನೂ ಮದುವೆಯಾಗಿಲ್ಲ. ಅವರ ಬಳಿ ಆಸ್ಪತ್ರೆಗೆ ಕಟ್ಟಲು ಹಣ ಸಹ ಇಲ್ಲ. ಅವರ ತುಂಬಾ ಒಳ್ಳೆಯ ವ್ಯಕ್ತಿ. ಅವರ ಮೇಲೆ ಹಲ್ಲೆ ಮಾಡುವಂತಹವರ ಮನಸ್ಥಿತಿ ಹೇಗಿರಬೇಕು. ವಿಜಿಯವರಿಗೆ ಏನಾದರೂ ಆಗಿದ್ದರೇ, ಅವರ ತಂದೆ-ತಾಯಿಯನ್ನ ಯಾರು ನೋಡಿಕೊಳ್ಳುತ್ತಿದ್ದರು” ಎಂದು ಹೇಳಿದರು.

“ವಿಜಿಯವರ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ಸಬ್ಕಾನ್ಷಿಯಸ್ ಲೆವೆಲ್ನಲ್ಲಿ ಇರಲಿಲ್ಲ. ರಾತ್ರಿ ಸ್ವಲ್ಪ ಚೇತರಿಸಿಕೊಂಡ ಮೇಲೆ ಹೇಳಿಕೆ ಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ಕೆಲವರು ರಾತ್ರೋರಾತ್ರಿ ಹಾಸನದಿಂದ ಪೊಲೀಸರಿಗೆ ಫೋನ್ ಮಾಡಿಸಿದ್ದಾರೆ. ಕಿಡಿಗೇಡಿಗಳ ಮೇಲೆ ಪೊಲೀಸರು ಕಠಿಣವಾದ ಕ್ರಮ ಜರುಗಿಸಬೇಕಿತ್ತು. ಆದರೆ ವಿಫಲರಾಗಿದ್ದಾರೆ. ರಾಜಕೀಯ ಒತ್ತಡಕ್ಕೆ ಮಣಿದು ರೌಡಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ಈ ಬಗ್ಗೆ ಸೂಕ್ತವಾದ ತನಿಖೆಯಾಗಬೇಕು. ಸಂತ್ರಸ್ತರಿಗೆ ನ್ಯಾಯ ಕೊಡಿಸುವುದು ಪೊಲೀಸರ ಜವಾಬ್ದಾರಿಯಾಗಿದೆ. ಜನಪರ ಕೆಲಸ ಮಾಡುವ ಖಾಕಿ ಯಾರೋ ಒಬ್ಬರ ಗುಲಾಮರಾಗಬಾರದುಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...