ಕಾರವಾರ-ಬೆಂಗಳೂರು ನಡುವೆ ನೂತನ ‘ಪಲ್ಲಕ್ಕಿ’ ಬಸ್ ಸಂಚಾರ ಆರಂಭ: ಶಾಸಕ ಸತೀಶ್ ಸೈಲ್ ಚಾಲನೆ

Date:

ಕಾರವಾರ: ಜಿಲ್ಲೆಯ ಜನತೆಯ ಬಹುದಿನಗಳ ನಿರೀಕ್ಷೆಯಾಗಿದ್ದ ಕಾರವಾರದಿಂದ ಬೆಂಗಳೂರಿಗೆ ಸುಸಜ್ಜಿತ ಸರ್ಕಾರಿ ಬಸ್ ಸೌಲಭ್ಯಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಕಾರವಾರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂ.ಸಿ.ಎ (MCA) ಅಧ್ಯಕ್ಷರು ಹಾಗೂ ಶಾಸಕರಾದ ಸತೀಶ್ ಸೈಲ್ ಅವರು ನೂತನ ‘ಪಲ್ಲಕ್ಕಿ’ ಬಸ್‌ಗಳಿಗೆ ಹಸಿರು ನಿಶಾನೆ ತೋರಿದರು.

ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕರು, “ಕಾರವಾರದ ಜನರಿಗೆ ಬೆಂಗಳೂರು ಪ್ರಯಾಣಕ್ಕಾಗಿ ಉತ್ತಮ ಸಾರಿಗೆ ವ್ಯವಸ್ಥೆಯ ಅಗತ್ಯವಿತ್ತು. ಸದ್ಯಕ್ಕೆ ಪಲ್ಲಕ್ಕಿ ಬಸ್ ಆರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು ಎರಡು ಹೆಚ್ಚುವರಿ ಪಲ್ಲಕ್ಕಿ ಬಸ್‌ಗಳು ಹಾಗೂ ಮಲ್ಟಿ ಆಕ್ಸೆಲ್ ವೋಲ್ವೋ ಬಸ್ ಸೌಲಭ್ಯವನ್ನು ಒದಗಿಸಲಾಗುವುದು,” ಎಂದು ಭರವಸೆ ನೀಡಿದರು.

ಅಲ್ಲದೆ, ಈ ನೂತನ ಬಸ್‌ಗಳು ಇತ್ತೀಚೆಗಷ್ಟೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಉದ್ಘಾಟಿಸಿದ ಹೊಸ ಸೇತುವೆಯ ಮುಖಾಂತರವೇ ಸಂಚರಿಸಲಿವೆ ಎಂದು ಅವರು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಿಂದ ಸಾರಿಗೆ ಸಂಸ್ಥೆಗಳು ನಷ್ಟ ಅನುಭವಿಸುತ್ತಿವೆ ಎಂಬ ಟೀಕೆಗಳನ್ನು ಶಾಸಕರು ಇದೇ ಸಂದರ್ಭದಲ್ಲಿ ತಳ್ಳಿಹಾಕಿದರು. “ಶಕ್ತಿ ಯೋಜನೆಯು ಸಾರಿಗೆ ಸಂಸ್ಥೆಗೆ ಆರ್ಥಿಕ ಬಲ ನೀಡಿದೆ. ವಾಯುವ್ಯ ಕರ್ನಾಟಕ ಸಾರಿಗೆಯ ಉತ್ತರ ಕನ್ನಡ ವಿಭಾಗವು ಈ ವರ್ಷ ಬರೊಬ್ಬರಿ 13 ಕೋಟಿ ರೂಪಾಯಿ ಲಾಭ ಗಳಿಸಿದೆ.

ಈ ಯಶಸ್ಸಿಗೆ ವಿಭಾಗೀಯ ಅಧಿಕಾರಿಗಳು, ಮ್ಯಾನೇಜರ್ ಹಾಗೂ ಮುಖ್ಯವಾಗಿ ಹಗಲಿರುಳು ಶ್ರಮಿಸುವ ಚಾಲಕರು ಮತ್ತು ನಿರ್ವಾಹಕರು ಕಾರಣ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ ? ಶಿರಸಿ | ರಾಜ್ಯದ ಜಿಎಸ್ಟಿ ಪಾಲು ಕೊಡಿಸಲು ಬಿಜೆಪಿ ನಾಯಕರು ತಮ್ಮ ತಾಕತ್ತು ತೋರಿಸಲಿ: ಭೀಮಣ್ಣ ನಾಯ್ಕ ವಾಗ್ದಾಳಿ

ಶಕ್ತಿ ಯೋಜನೆಯ ಉಚಿತ ಪ್ರಯಾಣದ ಬಗ್ಗೆ ಮಾತನಾಡಿದ ಅವರು, “ಸರ್ಕಾರವು ಬಡವರಿಗಾಗಿ ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಿದೆ. ಆದರೆ, ಆರ್ಥಿಕವಾಗಿ ಸಬಲರಾಗಿರುವ ಮಹಿಳೆಯರು ಅಥವಾ ಮಹಿಳಾ ಅಧಿಕಾರಿಗಳು ಇಚ್ಛಿಸಿದಲ್ಲಿ ಸ್ವಯಂಪ್ರೇರಿತರಾಗಿ ಟಿಕೆಟ್ ಖರೀದಿಸಿ ಪ್ರಯಾಣಿಸಬಹುದು. ಇದಕ್ಕೆ ಯಾವುದೇ ನಿರ್ಬಂಧವಿಲ್ಲ, ಆರ್ಥಿಕವಾಗಿ ಶಕ್ತರಾದವರು ಟಿಕೆಟ್ ಪಡೆಯಲು ಮುಕ್ತ ಅವಕಾಶವಿದೆ,” ಎಂದು ತಿಳಿಸಿದರು.

ಈ ಸುಸಜ್ಜಿತ ಬಸ್ ಸೌಲಭ್ಯ ಒದಗಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಶಾಸಕರು ಸರ್ಕಾರದ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷರಾದ ರಾಜೇಂದ್ರ ರಾಣೆ, ಡಿಪೋ ಮ್ಯಾನೇಜರ್ ಸೌಮ್ಯ ನಾಯ್ಕ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...