ಮಂಡ್ಯ | ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು: ನಿಖಿಲ್ ಕುಮಾರಸ್ವಾಮಿ

Date:

ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನ ಉಳ್ಳವರಾಗಿದ್ದಾರೆ. ಯಾರೇ ಕಿಡಿಗೇಡಿಗಳು ನೋವು ಕೊಟ್ಟರು ಅದಕ್ಕೆ ಪ್ರತಿಕ್ರಿಯೆ ಮಾಡಬೇಡಿ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್‌ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಮೈಸೂರು ಚಲೋ ಪಾದಯಾತ್ರೆಯು ಮಂಡ್ಯಕ್ಕೆ ಆಗಮನಿಸಿದಾಗ ಜನರನ್ನುದ್ದೇಶಿಸಿ ಮಾತನಾಡಿದ ಅವರು, “ಮಂಡ್ಯದಲ್ಲಿ ನಿನ್ನೆಯ ದಿನ ನಡೆದ ಸಂಗತಿ ಬೇಸರ ತರಿಸಿದೆ. ಯಾರೇ ಕಿಡಿಗೇಡಿಗಳು ಬಂದು ಏನೇ ಕುಚೇಷ್ಟೆ ಮಾಡಿದರೂ ಕಾರ್ಯಕರ್ತರು ತಾಳ್ಮೆ ಕಳೆದುಕೊಳ್ಳದೆ ಸಹನೆಯಿಂದ ಇರಬೇಕು. ನಮ್ಮ ಉದ್ದೇಶ ಪಾದಯಾತ್ರೆ, ನಮ್ಮ ಹೋರಾಟ ಮೂಡಾ ಹಾಗೂ ವಾಲ್ಮೀಕಿ ಹಗರಣಗಳ ವಿರುದ್ಧ” ಎಂದು ಹೇಳಿದರು.

ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಸಂಬಂಧ ತುಂಬಾ ಅತ್ಯುತ್ತಮವಾಗಿದೆ ಎಂದು ತಿಳಿಸಿದ್ದಾರೆ. ನಮ್ಮ ನಾಯಕರು ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಮಂಡ್ಯದ ಘಟನೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ತಾವುಗಳು ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಾರಣಕ್ಕೂ ಬೇರೆ ಬೇರೆ ರೀತಿಯ ಘಟನೆಗಳಿಗೆ ಅವಕಾಶ ಕೊಡಬಾರದು ಎಂದಿದ್ದಾರೆ. ಕಾರ್ಯಕರ್ತರು ತಾಳ್ಮೆಯಿಂದ ಸಮಾಧಾನಕರವಾಗಿ ವರ್ತನೆ ಮಾಡಬೇಕು ಎಂದು ತಮ್ಮ ಕಾರ್ಯಕರ್ತರಿಗೆ ಒಂದು ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡೂ ಪಕ್ಷದ ಸಮನ್ವಯ ಸಮಿತಿಯ ಸದಸ್ಯರು ಈ ಘಟನೆಯ ಬಗ್ಗೆ ಒಕ್ಕೂಟಕ್ಕೆ ಮಾಹಿತಿ ಕೊಟ್ಟಿದ್ದಾರೆ. ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡೊಣ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಹೊಸನಗರ | ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಇದೇ ವೇಳೆ, ಕಾಂಗ್ರೆಸ್‌ ಸರ್ಕಾರದ ಹಗರಣಗಳ ಬಗ್ಗೆ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡುತ್ತಿದ್ದೇವೆ. ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿ ಸಾಗುತ್ತಿದೆ. ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ರೈತರು ನಮ್ಮ ಜೊತೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...