ಡಿಕೆ ಶಿವಕುಮಾರ್-ಅಶ್ವತ್ಥನಾರಾಯಣ ಇಬ್ಬರಿಗೂ ಬುದ್ಧಿಮಾತು ಹೇಳಿದ ನಿರ್ಮಲಾನಂದ ಸ್ವಾಮೀಜಿ

Date:

  • ‘ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಾಮಾನ್ಯ’
  • ತಾಳ್ಮೆಯಿಂದ ಇಬ್ಬರೂ ವರ್ತಿಸಲು ಸ್ವಾಮೀಜಿ ಸಲಹೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಅಶ್ವತ್ಥನಾರಾಯಣ ನಡುವಿನ ಒಳಜಗಳಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಶ್ರೀಗಳು ಇಬ್ಬರು ನಾಯಕರಿಗೂ ಕಿವಿಮಾತು ಹೇಳಿದ್ದಾರೆ.

ಬೆಂಗಳೂರಿನ ಸದಾಶಿವ ನಗರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕೆಂಪೇಗೌಡರ ಜಯಂತಿಯಲ್ಲಿ ಇಬ್ಬರೂ ನಾಯಕರಿಗೆ ಅವರ ಸಮ್ಮುಖದಲ್ಲೇ ಬುದ್ಧಿ ಹೇಳಿದ ಸ್ವಾಮೀಜಿ, “ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಾಮಾನ್ಯ. ಆದರೂ, ಪರಸ್ಪರ ಕಿತ್ತಾಡಿಕೊಳ್ಳುವುದು, ಪರಸ್ಪರ ಕೆಸರೆರಚಾಡುವುದು ಮಾಡಬೇಡಿ. ತಾಳ್ಮೆಯಿಂದ ಇರಬೇಕು” ಎಂದು ಸಲಹೆ ನೀಡಿದ್ದಾರೆ.

“ಇಬ್ಬರೂ ನಾಯಕರು ಪರಸ್ಪರ ಬೈದಾಡಿಕೊಳ್ಳುವುದು ಸರಿಯಲ್ಲ. ರಾಜಕೀಯ ಭಿನ್ನಾಭಿಪ್ರಾಯಗಳ ಆಚೆಗೆ ಸಮಚಿತ್ತದಿಂದ, ತಾಳ್ಮೆಯಿಂದ ಇಬ್ಬರೂ ವರ್ತಿಸಬೇಕು” ಎಂದರು. ವೇದಿಕೆಯಲ್ಲಿ ಆಸೀನರಾಗಿದ್ದ ನಿರ್ಮಲಾನಂದ ಶ್ರೀಗಳ ಆಜುಬಾಜುವಿನಲ್ಲಿ ಇಬ್ಬರೂ ನಾಯಕರು ಕುಳಿತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಜೆಪಿ ಅಧ್ಯಕ್ಷ ಕಟೀಲ್‌ಗೆ ಹಿಂದುತ್ವವೇ ತಲೆನೋವು

ಸುದ್ದಿಯಲ್ಲಿರುವ ನಾಯಕರು

ಡಿಕೆ ಶಿವಕುಮಾರ್ ಮತ್ತು ಅಶ್ವತ್ಥನಾರಾಯಣ್ ನಡುವಿನ ವಾಕ್ಸಮರ ಇತ್ತೀಚೆಗೆ ಮತ್ತಷ್ಟು ತಾರಕಕ್ಕೇರಿದೆ. ಬೆಂಗಳೂರಿನ ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಡಿಕೆಶಿ ಅವರಿಗೆ ಅಶ್ವತ್ ನಾರಾಯಣ ಅವರು, “ಬೆಂಗಳೂರಿಗೂ ನಿಮಗೂ ಏನಪ್ಪಾ ಸಂಬಂಧ?” ಎಂದು ಪ್ರಶ್ನಿಸಿದ್ದರು.

ಈ ಹಿಂದೆ ಅಶ್ವತ್ಥನಾರಾಯಣ ಅವರು ರಾಮನಗರದ ಉಸ್ತುವಾರಿ ಸಚಿವರಾಗಿದ್ದಾಗ ಡಿಕೆ ಶಿವಕುಮಾರ್ ಅವರು “ರಾಮನಗರಕ್ಕೂ ನಿನಗೂ ಏನಪ್ಪಾ ಸಂಬಂಧ” ಎಂದು ಪ್ರಶ್ನಿಸಿದ್ದರು.

ಈ ವಿಚಾರವಾಗಿ ಕಳೆದೊಂದು ವಾರದಿಂದ ಮಾಧ್ಯಮಗಳಲ್ಲಿ ಈ ಇಬ್ಬರು ನಾಯಕರ ಪರಸ್ಪರ ವಾಕ್ಸಮರ ಬಗ್ಗೆ ಸುದ್ದಿ ಪ್ರಕಟವಾಗುತ್ತಲೇ ಇತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...