ಉಡುಪಿ | ನಾಗರಿಕ ಸಮಿತಿಯಿಂದ 505 ನೇ ಅನಾಥ‌ ಶವದ ಅಂತ್ಯಸಂಸ್ಕಾರ

Date:

ಉಡುಪಿ ಜಿಲ್ಲಾ ನಾಗರೀಕ ಸಮಿತಿ ಸಂಚಾಲಕ ನಿತ್ಯಾನಂದ‌ ಒಳಕಾಡು ಅವರ ನೇತ್ರತ್ವದಲ್ಲಿ ವಾರಸುದಾರರಿಲ್ಲದ ಶವದ, ಅಂತ್ಯಸಂಸ್ಕಾರವು ಬಹಳ ಗೌರಯುತವಾಗಿ ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ನಡೆಸಲಾಯಿತು. ಒಳಕಾಡುವರು ಕಳೆದ‌ 14 ವರ್ಷಗಳಿಂದ ಅನಾಥ ಶವಗಳ ಅಂತ್ಯಸಂಸ್ಕಾರವನ್ನು ಗೌರಯುತವಾಗಿ ನಡೆಸುತ್ತಲೇ ಬಂದಿದ್ದು, ಶನಿವಾರ ಒಳಕಾಡುವರು ನಡೆಸಿರುವ ಅಂತ್ಯಸಂಸ್ಕಾರವು 505 ನೇ ಅನಾಥ‌ ಶವದ ಅಂತ್ಯಸಂಸ್ಕಾರವಾಗಿತ್ತು.

ಶವದ ಚಟ್ಟವನ್ನು ಬೀಡಿನಗುಡ್ಡೆಯ ಸರ್ಕಲ್ ಬಳಿಯಿಂದ ರುದ್ರಭೂಮಿಯವರೆಗೆ ಹೊತ್ತು ಸಾಗಿಸಲಾಗಿತ್ತು. ಹಿರಿಯ ನ್ಯಾಯಧೀಶರು, ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ ಆರ್, ಹಾಗೂ ನಗರ ಪೋಲಿಸ್ ಠಾಣೆಯ ಪಿ ಎಸ್ ಐ ಭರತೇಶ್ ಚಟ್ಟಕ್ಕೆ ಹೆಗಲು ನೀಡಿ, ಬಂಧುತ್ವದ ಸಂದೇಶ ಸಾರಿದರು. ಶವಯಾತ್ರೆಯಲ್ಲಿ ಒಳಕಾಡುವರು ತಮಟೆ ಬಾರಿಸಿ ಅಂತಿಮ ಗೌರವ ಸಮರ್ಪಿಸಿದರು.

1006766085

ಜಿಲ್ಲಾ ಆಸ್ಪತ್ರೆಯ ಸರ್ಜನ್ ನಿತ್ಯಾನಂದ ನಾಯ್ಕ್, ನಿವಾಸಿ ವೈದ್ಯಧಿಕಾರಿ ಡಾ ವಾಸುದೇವ್, ವಿಧಿ ವಿಜ್ಞಾನ ತಜ್ಞ ಡಾ. ರಮೇಶ್ ಕುಂದರ್, ನಗರ ಸಭೆ ಆರೋಗ್ಯ ನಿರೀಕ್ಷಕ ಸತೀಶ್ ಮೃತ ವ್ಯಕ್ತಿಗೆ‌ ಹೂಹಾರ ಹಾಕಿ ಅಂತಿಮ ಗೌರವ ಸಮರ್ಪಿಸಿದರು. ನಗರ ಪೋಲಿಸ್ ಠಾಣೆಯ‌ ಠಾಣೆಯ ಪಿ ಎಸ್ ಐ ಭರತೇಶ್, ತನಿಖಾ ಸಹಾಯಕಿ ಜಾಸ್ವ ಕಾನೂನು ಪ್ರಕ್ರಿಯೆ ನಡೆಸಿದರು. ವಿಕಾಸ್ ಶೆಟ್ಟಿ, ಪ್ಲವರ್ ವಿಷ್ಣು, ಸತೀಶ್ ಕುಮಾರ್, ನೀತು ನಿಟ್ಟೂರು, ಪ್ರದೀಪ್, ಅಂತ್ಯಸಂಸ್ಕಾರ ಕಾರ್ಯದಲ್ಲಿ ಭಾಗಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಸಿದು ಬಿದ್ದು ಸಾವನಪ್ಪಿದ, ಸುಮಾರು ಅರವತ್ತು ವರ್ಷ ಪ್ರಾಯದ, ಅಪರಿಚಿತ ಗಂಡಸಿನ ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿತ್ತು. ಮೃತನ ವಾರಸುದಾರರ ಪತ್ತೆಗೊಳಿಸಲು ಮಾಧ್ಯಮಗಳಲ್ಲಿ ಪ್ರಕಟಣೆ‌ ಪ್ರಕಟಿಸಲಾಗಿತ್ತು. ನಗರ ಪೋಲಿಸ್ ಠಾಣೆಯ‌ ಪೋಲಿಸರು ಮೃತನ ಸಂಬಂಧಿಕರನ್ನು ಬಹಳವಾಗಿ ಹುಡುಕಾಟ ನಡೆಸಿದ್ದರು. ಮೃತ‌ ವ್ಯಕ್ತಿಯು ಜಯ ಪೂಜಾರಿ ಹೆಸರಿನಿಂದ ಕರೆಯಲ್ಪಡುತ್ತಿದ್ದ ಎನ್ನುವ ವಿಚಾರ ಬಿಟ್ಟರೆ, ಬೇರಾವ ಮಾಹಿತಿ ಮೃತ ವ್ಯಕ್ತಿಯ ಬಗ್ಗೆ ಇರಲಿಲ್ಲ. ವ್ಯಕ್ತಿ ಮೃತಪಟ್ಟು 45 ದಿನಗಳು ಕಳೆದರೂ ಸಂಬಂಧಿಕರು ಸಂಪರ್ಕರ್ಕಿಸದೆ ಇರುವುದರಿಂದ‌ ಕಾನೂನು ಪ್ರಕ್ರಿಯೆಗಳು ನಡೆದಾದ‌ ಬಳಿಕ, ದಫನ‌ರೂಪದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.

1006766088
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...