ಉಡುಪಿ | ನಮ್ಮ ನಾಡ ಒಕ್ಕೂಟದ ನೂತನ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Date:

ಉಡುಪಿ ನಗರದ ಆದಿ ಉಡುಪಿಯ ಮಸ್ಜಿದೆ ನೂರುಲ್ ಇಸ್ಲಾಮ್ ನ ಆವರಣದಲ್ಲಿ ಇಂದು ನಮ್ಮ ನಾಡ ಒಕ್ಕೂಟದ ನೂತನ ಕಮ್ಯೂನಿಟಿ ಸೆಂಟರ್ ಅನ್ನು ಆದಿ ಉಡುಪಿ ಮಸೀದಿಯ ಅಧ್ಯಕ್ಷರಾದ ಆಸಿಫ್ ಇಕ್ಬಾಲ್ ಉದ್ಘಾಟಿಸಿದರು.

ಕೇಂದ್ರ ಸಮಿತಿ ಅಧ್ಯಕ್ಷರಾದ ಮುಹಮ್ಮದ್ ಸಲೀಮ್ ಮೂಡುಬಿದಿರೆ ಮಾತನಾಡಿ, ಈಗಾಗಲೇ NNO ವತಿಯಿಂದ ಮೂರು ಸ್ಥಳಗಳಲ್ಲಿ ಕಮ್ಯೂನಿಟಿ ಸೆಂಟರ್ ಸ್ಥಾಪಿಸಲಾಗಿದೆ, ಒಂದು ಕುಂದಾಪುರದಲ್ಲಿ, ಎರಡನೇಯದು ಕಾರ್ಕಳದಲ್ಲಿ, ಮೂರನೇಯದು ಮಂಗಳೂರಿನ ತೊಕ್ಕಟ್ಟಿನಲ್ಲಿ, ಎಲ್ಲಾ ಕೇಂದ್ರಗಳಲ್ಲಿ ಸಂಸ್ಥೆಯ ಸಿಬ್ಬಂದಿಗಳು ಪೂರ್ಣ ಅವಧಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ದಿನ ಹಲವಾರು ಮಂದಿ ವಿವಿಧ ಸರ್ಕಾರಿ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲು ಭೇಟಿ ನೀಡುತ್ತಾರೆ. ಇದು ನಮ್ಮ ನಾಲ್ಕನೇ ಕಮ್ಯೂನಿಟಿ ಸೆಂಟರ್ ಆಗಿದೆ. ಶೀಘ್ರದಲ್ಲಿ ಪಡುಬಿದ್ರಿಯಲ್ಲಿ ಐದನೇ ಕಮ್ಯೂನಿಟಿ ಸೆಂಟರ್ ಆರಂಭವಾಗಲಿದೆ ಎಂದು ಹೇಳಿದರು.

ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ನಝೀರ್ ನೇಜಾರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಮುಹಮ್ಮದ್ ಮೌಲಾ, ಅನಿವಾಸಿ ಭಾರತೀಯರಾದ ಬಿ.ಎಮ್. ಜಾಫರ್ ದುಬೈ, ಜಿ. ಸಾದಿಕ್ ದುಬೈ, ನಝೀರ್ ಅಲ್ ಫಲಾಹ್ ಜುಬೈಲ್ ಶುಭಹಾರೈಸಿದರು. ನಮ್ಮ ನಾಡ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಮುಸ್ತಾಕ್ ಬೆಳ್ವೆ, ಕಮ್ಯೂನಿಟಿ ಸೆಂಟರ್ ಉಡುಪಿಯ ಅಧ್ಯಕ್ಷರಾದ ಇಬಾದುಲ್ಲಾಹ್ ಉಸ್ಮಾನ್ ಸಂದರ್ಭೂಚಿತವಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಸೀದಿಯ ಇಮಾಮರಾದ ಮೌಲಾನಾ ಮುಹಮ್ಮದ್ ಆದಿಲ್ ದುಆ ಮಾಡಿದರು. ಕುರ್ ಆನ್ ಪಠಣದೊಂದಿಗೆ ಸಭೆ ಆರಂಭವಾಯಿತು. ಕೇಂದ್ರ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ ಸ್ವಾಗತ ಭಾಷಣ ಮಾಡಿದರು. ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಮೌಲಾನಾ ಝಮೀರ್ ಅಹ್ಮದ್ ರಶಾದಿ ಪ್ರಾಸ್ತಾವಿಕ ಭಾಷಣ ಮಾಡಿದರು. ಕಮ್ಯೂನಿಟಿ ಸೆಂಟರ್ ಉಡುಪಿಯ ಪ್ರಧಾನ ಕಾರ್ಯದರ್ಶಿ ಟಿ.ಎಮ್. ಝಫರುಲ್ಲಾ ಹೊಡೆ ನಿರೂಪಿಸಿದರು. ಫಾಝಿಲ್ ಆದಿ ಉಡುಪಿ ವಂದಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಮಿತಿ ಕೋಶಾಧಿಕಾರಿ ಪೀರು ಸಾಹೇಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹೀರ್ ನಾಖುದಾ, ಜಿಲ್ಲಾ ಕೋಶಾಧಿಕಾರಿ ಜನಾಬ್ ನಕ್ವಾ ಯಾಹ್ಯ, NNO ಕುವೈತ್ ಅಧ್ಯಕ್ಷರಾದ ಅಶ್ರಫ್ ಹಂಗಾರಕಟ್ಟೆ, ಕಮ್ಯೂನಿಟಿ ಸೆಂಟರ್ ಕುಂದಾಪುರದ ಅಧ್ಯಕ್ಷರಾದ ಮುನಾಫ್ ಹಂಗಾರಕಟ್ಟೆ, ಉಡುಪಿ ತಾಲೂಕು ಕಾರ್ಯದರ್ಶಿ ಸಾದಿಕ್ ಉಸ್ತಾದ್, ಕಮ್ಯೂನಿಟಿ ಸೆಂಟರ್ ಉಡುಪಿಯ ಕೋಶಾಧಿಕಾರಿ ಬಿ. ಸುಲೈಮಾನ್, ಉಪಾಧ್ಯಕ್ಷರಾದ ಅನ್ಸಾರ್ ಉಡುಪಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...