ಬಡ-ಮಧ್ಯಮ ವರ್ಗದವರ ಮೇಲೆ ತೆರಿಗೆ ಹೊರೆಯಾಗದಂತೆ ಗ್ಯಾರಂಟಿಗೆ ಸಂಪನ್ಮೂಲ ಕ್ರೋಡೀಕರಣ: ಸಿಎಂ

Date:

  • ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ: ಸಿಎಂ
  • ‘ವಿತ್ತೀಯ ಶಿಸ್ತು ಕಾಪಾಡಿಕೊಂಡು ಸವಾಲು ಗೆದ್ದಿದ್ದೇವೆ’

ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಡೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಶುಕ್ರವಾರ ತಮ್ಮ 14ನೇ ಆಯವ್ಯಯ ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಗ್ಯಾರಂಟಿ ಯೋಜನೆಗಳಿಗೆ 13,500 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹೆಚ್ಚಳ ಹಾಗೂ 8000 ಕೋಟಿ ರೂ. ಹೆಚ್ಚುವರಿ ಸಾಲದ ಮೂಲಕ ಮತ್ತು ಉಳಿದ ಸಂಪನ್ಮೂಲವನ್ನು ಯೋಜನೆಗಳ ಆದ್ಯತೆಯನ್ನು ನಿಗದಿಪಡಿಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ” ಎಂದರು.

“ಈ ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ-ಮಧ್ಯಮ ವರ್ಗದವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ, ಜನರಿಗೆ ಹೊರೆ ಆಗಬಾರದು ಎನ್ನುವ ಕಾರಣಕ್ಕೇ ಪೆಟ್ರೋಲ್ ಡೀಸೆಲ್ ಮೇಲೆ ತೆರಿಗೆ ಹಾಕಲಿಲ್ಲ, ಬೆಲೆ ಏರಿಕೆ ಮಾಡಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ಮೂರು ಮಾನದಂಡಗಳನ್ನು ಪಾಲಿಸಬೇಕಿದ್ದು, ಈ ಪೈಕಿ 2023-24 ರ ಬಜೆಟ್ ನಲ್ಲಿ 2 ಮಾನದಂಡಗಳನ್ನು ಕಾಯ್ದುಕೊಳ್ಳುವ ಮೂಲಕ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಲಾಗಿದೆ ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ವಿತ್ತೀಯ ಕೊರತೆ ಶೇ.3 ರಷ್ಟಿರಬೇಕು, ಸಾಲದ ಪ್ರಮಾಣ ಜಿಡಿಪಿಯ ಶೇ.25 %ರ ಒಳಗೆ ಇರಬೇಕು. ಉಳಿತಾಯ ಬಜೆಟ್ (revenue surplus) ಇರಬೇಕು ಎನ್ನುವ ಮಾನದಂಡಗಳಿವೆ. ವಿತ್ತೀಯ ಕೊರತೆ ಶೇ. 2.6 ರಷ್ಟಿದ್ದು, ಸಾಲ ಜಿಡಿಪಿಯ ಶೇ. 22.3% ರಷ್ಟಿದೆ. ಹೀಗೆ 2 ಮಾನದಂಡಗಳನ್ನು ಪಾಲಿಸಿ ವಿತ್ತೀಯ ಶಿಸ್ತನ್ನು ಕಾಯ್ದುಕೊಳ್ಳಲಾಗಿದೆ” ಎಂದು ವಿವರಿಸಿದರು.

“ಈ ಆಯವ್ಯಯಲ್ಲಿ 2,50,933 ಕೋಟಿ ರೂ. ರಾಜಸ್ವ ವೆಚ್ಚ, ಬಂಡವಾಳ ವೆಚ್ಚ 54374 ಕೋಟಿ ರೂ.ಗಳಾಗಿದ್ದು, 2022-23 ಹೋಲಿಸಿದರೆ ಶೇ.23 ರಷ್ಟು ರಾಜಸ್ವ ವೆಚ್ಚ ಹಾಗೂ ಶೇ.16 ರಷ್ಟು ಬಂಡವಾಳ ವೆಚ್ಚ ಹೆಚ್ಚಾಗುತ್ತದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021-22 ರಲ್ಲಿ ವಿತ್ತೀಯ ಕೊರತೆ 14,699.14 ಕೋಟಿ ರೂ.ಗಳಷ್ಟಿತ್ತು. ನಮ್ಮ ಸರ್ಕಾರದ ರಾಜಸ್ವ ಕೊರತೆ 12,523 ಕೋಟಿಯಷ್ಟಿದೆ, ವಿತ್ತೀಯ ಕೊರತೆ 66,646 ಕೋಟಿ ರೂ. ಇದು ಜಿಎಸ್ ಡಿಪಿಯ ಶೇ. 2.6 ರಷ್ಟಿದೆ. ರಾಜ್ಯದ ಹೊಣೆಗಾರಿಕೆ 5,71,665 ಕೋಟಿ ರೂ.ಗಳಷ್ಟಿದ್ದು, ಇದು ಜಿಎಸ್ ಡಿಪಿ ಶೇ. 22.3 ರಷ್ಟಿದೆ. 2023-24 ಕ್ಕೆ ರಾಜ್ಯವು ಪಡೆಯುವ ಸಾಲ 85,818 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ” ಎಂದರು

“ವಾಣಿಜ್ಯ ತೆರಿಗೆ ಫೆಬ್ರವರಿ ಆಯವ್ಯಯಕ್ಕಿಂತ 4000 ಕೋಟಿ ರೂ. ಹೆಚ್ಚುವರಿ ಗುರಿ ನಿಗದಿಪಡಿಸಲಾಗಿದೆ. ಅಬಕಾರಿ ಸುಂಕ ಗುರಿ 1000 ಕೋಟಿ ರೂ. ಹೆಚ್ಚಳ ಮಾಡಿದೆ. ಇದನ್ನು ಸೇರಿದಂತೆ ತೆರಿಗೆ ಸಂಗ್ರಹದ ಒಟ್ಟಾರೆ ಗುರಿಯನ್ನು 13,500 ಕೋಟಿ ರೂ.ಗಳಷ್ಟು ಹೆಚ್ಚಳ ಮಾಡಿದೆ” ಎಂದು ಹೇಳಿದರು.

ಗಂಡಸ್ರು ಮಾತ್ರ ಕುಡಿಯೋದಾ?

ವಿಸ್ಕಿ ಮತ್ತು ಬಿಯರ್ ಮೇಲೆ ತೆರಿಗೆ ಹೆಚ್ಚಿಸಿದ್ದಕ್ಕೆ ಪತ್ರಕರ್ತರು “ನೀವು ಮಹಿಳಾ ಪರ ಬಜೆಟ್ ಮಂಡಿಸಿ ಪುರುಷ ವಿರೋಧಿ ಆಗ್ತಿದ್ದೀರಿ” ಎಂದು ಹಾಸ್ಯ ಮಾಡಿದರು. ಹಾಸ್ಯದ ಧಾಟಿಯಲ್ಲೇ ಉತ್ತರಿಸಿದ ಮುಖ್ಯಮಂತ್ರಿಗಳು ”ಗಂಡುಸ್ರು ಮಾತ್ರ ಕುಡಿಯೋದಾ ಎನ್ನುತ್ತಾ, ರಾಜ್ಯದ ಕಲ್ಯಾಣಕ್ಕಾಗಿ ಕುಡಿಯುವವರು ತಮ್ಮ ಪಾಲನ್ನೂ ಕೊಡಲಿ ಬಿಡಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...