ತುಮಕೂರು | ಭೂಮಿ, ವಸತಿ ಕೊಡದೆ ನಮ್ಮ ವೋಟು ಕೊಡೆವು; ಅಲೆಮಾರಿ ಕುಟುಂಬಗಳ ಎಚ್ಚರಿಕೆ

Date:

  • ಗುಡಿಸಲಿನ ಬಾಗಿಲಿಗೆ ಕರಪತ್ರ, ಗ್ರಾಮದಲ್ಲಿ ಫ್ಲೆಕ್ಸ್‌ ಅಳವಡಿಕೆ
  • ಭೂಮಿ ವಸತಿ ನೀಡುವ ಕರಾರಿನೊಂದಿಗೆ ಬಂದಲ್ಲಿ ಮತ

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಮತ್ತು ಇತರೆ ಗ್ರಾಮಗಳ ಅಲೆಮಾರಿ ಕುಟುಂಬಗಳು ತಮ್ಮ ಬೇಡಿಕೆ ಈಡೇರದೆ ಮತದಾನ ಮಾಡುವುದಿಲ್ಲವೆಂದು ಘೋಷಿಸಿವೆ. ಅಲ್ಲಿನ ಜನರು ತಮ್ಮ ಪ್ರತಿ ಗುಡಿಸಲಿನಲ್ಲೂ ‘ಭೂಮಿ, ವಸತಿ ಕೊಡದೇ ನಮ್ಮ ಓಟು ಕೊಡೆವು’ ಎಂಬ ಕರಪತ್ರ ಅಳವಡಿಸಿದ್ದಾರೆ.

ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹನುಮಂತನಗರದ ರೇಷ್ಮೆ ಇಲಾಖೆಯ ಕಟ್ಟಡದಲ್ಲಿ ತಾತ್ಕಾಲಿಕವಾಗಿ ನೆಲೆಸಿರುವ ಕೆರೆಕೋಡಿ, ನಾಗವಲ್ಲಿ ಗ್ರಾಮದ ಅಲೆ ಮಾರಿಗಳು, ಕೊರಟಗೆರೆ ತಾಲೂಕಿನ ಅಮಲಾಪುರ, ಹುಲಿಕುಂಟೆ ಗ್ರಾಮದ ಅಲೆಮಾರಿ ಕುಟುಂಬಗಳು, ಇರಕಸಂದ್ರ ಗ್ರಾಮದ ಎಲ್ಲ ಜಾತಿಯ ವಸತಿ ರಹಿತರು ತಮ್ಮ ವಾಸ ಸ್ಥಳದಲ್ಲಿ ಫ್ಲೆಕ್ಸ್‌ ಅಳವಡಿಸಿದ್ದಾರೆ.

ಅನೇಕ ವರ್ಷಗಳಿಂದ ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಅಲೆಮಾರಿ ಕುಟುಂಬಗಳು ಸೇರಿದಂತೆ ತಾಲೂಕಿನ ಇತರೆ ಹೋಬಳಿಯ ಅಲೆಮಾರಿ ಕುಟುಂಬಗಳು ನಿವೇಶನ ಮತ್ತು ವಸತಿಗಾಗಿ ಜನಪ್ರತಿನಿಧಿಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಅಲೆದು ಕಂಗಾಲಾಗಿದ್ದೇವೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Koratagere

ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಅಥವಾ ಮುಖಂಡರು ನಮ್ಮಲ್ಲಿ ಮತ ಕೇಳಲು ಬಂದಾಗ, ನಮ್ಮ ಮತಗಳನ್ನು ಹಣ, ಹೆಂಡಕ್ಕೆ ಮಾರಿಕೊಳ್ಳಬಾರದೆಂದು ತೀರ್ಮಾನಿಸಿದ್ದೇವೆ. ಜೊತೆಗೆ ಭೂಮಿ, ವಸತಿ ಕೊಡದೆ ನಮ್ಮ ಮತಗಳನ್ನು ನೀಡಬಾರದೆಂದು ನಿರ್ಧರಿಸಿದ್ದೇವೆ ಎಂದು ಘೋಷಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾಮಪತ್ರ ಸಲ್ಲಿಕೆವರೆಗೂ ಮತದಾರರ ಪಟ್ಟಿ ಪರಿಷ್ಕರಿಸಬಹುದು: ಹೈಕೋರ್ಟ್‌

ತಾವು ವಾಸವಿರುವ ಜಾಗಗಳಲ್ಲಿ ಫ್ಲೆಕ್ಸ್ ಮತ್ತು ಮನೆಗಳ ಬಾಗಿಲುಗಳಿಗೆ ಪ್ಲೇ ಕಾರ್ಡ್ ಗಳನ್ನು ಹಾಕಿ, “ಭೂಮಿ ವಸತಿ ಕೊಡದೆ ನಮ್ಮ ವೋಟು ಕೊಡೆವು” ಎಂಬ ಅಭಿಯಾನದೊಂದಿಗೆ ಹೋರಾಟ ಪ್ರಾರಂಭಿಸಿದ್ದಾರೆ. ನಮ್ಮ ಮತಗಳು ಬೇಕಾದವರು ಗೆದ್ದ ನಂತರ ಭೂಮಿ ವಸತಿ ನೀಡುತ್ತೇವೆಂದು ಕರಾರಿನೊಂದಿಗೆ ಬಂದಲ್ಲಿ ಹಣ, ಹೆಂಡ ಪಡೆಯದೆ ನಾವು ಮತ ನೀಡುತ್ತೇವೆ ಎಂದು ಹುಲಿಕುಂಟೆ ಗ್ರಾಮದ ನಿವೇಶನ ಮತ್ತು ವಸತಿ ರಹಿತ ಅಲೆಮಾರಿ ಕುಟುಂಬಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...