ವಿಜಯಪುರ | ನಾಲ್ಕು ತಿಂಗಳಿಂದ ವೇತನ ನೀಡದ ಗುತ್ತಿಗೆದಾರರು; ಪೌರ ಕಾರ್ಮಿಕರ ಧರಣಿ

Date:

ವಿಜಯಪುರ ಮಹಾನಗರ ಪಾಳಿಕೆಯಲ್ಲಿ ಕೆಲಸಮಾಡುತ್ತಿರುವ ಕಾರ್ಮಿಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನವನ್ನೇ ನೀಡಲಾಗಿಲ್ಲ. ವೇತನ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ವಿಜಯಪುರ ಮಹಾನಗರ ಪಾಲಿಕೆಯ ವಾಹನ ಚಾಲಕರು ಮತ್ತು ನಿರ್ವಾಹಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ಮುನ್ಸಿಪಲ್ ಕಾರ್ಮಿಕರ ಸಂಘ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ಲಕ್ಷ್ಮಣ್ ಹಾಂದ್ರಳಾ, “ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಸುಮಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಚಾಲಕ, ನಿರ್ವಾಹಕ, ಕಸ ಸಂಗ್ರಹಕಾರರು, ಲೋಡರ್ಸ್ ಯುಜಿಡಿ ಕಾರ್ಮಿಕರು ಹಾಗೂ ಸೂಪರ್ವೈಸರ್‌ಗಳು ಹಾಗೂ ನೇರ ಪಾವತಿ ಪೌರ ಕಾರ್ಮಿಕರಾಗಿ, ನೂರಾರು ಜನ ದುಡಿಯುತ್ತಿದ್ದಾರೆ. ಇವರಿಗೆ, ನಾಲ್ಕು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇಲ್ಲಿಯವರೆಗೆ ಇ.ಎಸ್.ಐ ಮತ್ತು ಪಿಎಫ್ ಹಣವನ್ನು ಭರ್ತಿ ಮಾಡಿಲ್ಲ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಈಗಾಗಲೇ ಸಂಘದ ವತಿಯಿಂದ ಅನೇಕ ಬಾರಿ ಗುತ್ತಿಗೆದಾರರಿಗೆ ಮೌಖಿಕವಾಗಿ ಹೇಳಿದರು, ವೇತನ ಪಾವತಿ ಮಾಡದೆ ಉಡಾಫೆಯಾಗಿ, ನಿಮ್ಮ ಮೇಲಾಧಿಕಾರಿಗಳು ಚೆಕ್ ನೀಡಿರುವುದಿಲ್ಲ ಎಂದು ಜಾರಿಕೆಯ ಉತ್ತರ ನೀಡುತ್ತಿದ್ದಾರೆ. ನಾಲ್ಕು ತಿಂಗಳ ವೇತನ ಇಲ್ಲದೆ ಕಾರ್ಮಿಕರ ಮಕ್ಕಳ ಶಾಲಾ ಶುಲ್ಕ, ಮನೆ ಬಾಡಿಗೆ, ತಿನ್ನಲು ರೇಷನ್ ಇಲ್ಲದೆ ಪರದಾಡುವ ಸ್ಥಿತಿ ಉಂಟಾಗಿದೆ. ಆದ್ದರಿಂದ ಕೆಲಸ ನಿಲ್ಲಿಸಿ, ಅನಿರ್ಧಿಷ್ಟಾವಧಿ ಮುಷ್ಕರ ಮಾಡಲು ನಿರ್ಧರಿಸಿದ್ದಾರೆ” ಎಂದರು.

ಇನ್ನು, ವಾಹನ ಚಾಲಕರು ನಿರ್ವಾಹಕರ ಕ್ಷೇಮ ಅಭಿವೃದ್ಧಿ ಸಂಘದ ಜಿಲ್ಲಾ ಮುಖಂಡ, ಶಂಕರ್ ಚಲವಾದಿ ಮಾತನಾಡಿ, ಗುತ್ತಿಗೆದಾರರ ಹೆಸರು, ಕಲ್ಲಪ್ಪ ಜಂಬಗಿ ಮತ್ತು ಜಸ್ಕೋ ಪ್ರವೇಟ್ ಲಿಮಿಟೆಡ್ ಕಂಪನಿ ಬೆಂಗಳೂರು, ಗುತ್ತಿಗೆದಾರ ಗಣೇಶ್ ಶಂಕರ್ ಹಾಗೂ ಪರಿಸರ ಅಭಿಯಂತರರಾದ ಅಶೋಕ್ ಕುಮಾರ್ ಸಜ್ಜನ್ ಇವರು ಕೂಡಿ ಕಾರ್ಮಿಕರಿಗೆ, ನೀವು ಯಾವುದೇ ಸಂಘಟನೆ ಮಾಡಿ ವೇತನ ಹಾಗೂ ಬೇಡಿಕೆ ಮಾಡಿದರೆ, ನಿಮ್ಮನ್ನು ಕೆಲಸದಿಂದ ತೆಗೆದುಹಾಕುತ್ತೇವೆ ಎಂದು ಬೆದರಿಸುತ್ತಾರೆ. ಈಗಾಗಲೇ ಅನೇಕ ಕಾರ್ಮಿಕರನ್ನು, ಸುಳ್ಳು ಆಪಾದನೆ ಮಾಡಿ ಕೆಲಸದಿಂದ ತೆಗೆದು ಹಾಕಿದ್ದಾರೆ. ಕೆಲಸದಿಂದ ತೆಗೆದು ಹಾಕಿದ ಕಾರ್ಮಿಕರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಿ ಎಂದು ಸಂಘದಿಂದ ಮನವಿ ಮಾಡಿದರು, ಪರಿಸರ ಅಶೋಕ್ ಕುಮಾರ್ ಸಜ್ಜನ್ ರವರು, ಕೆಲಸಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಹೇಳಿ, ಅದೇ ಜಾಗದಲ್ಲಿ ಸುಮಾರು 40ರಿಂದ 50ಸಾವಿರ ತೆಗೆದುಕೊಂಡು, ಬೇರೆ ಕಾರ್ಮಿಕರನ್ನು ಬರ್ತಿ ಮಾಡಿಕೊಂಡಿದ್ದಾರೆ.

ಯಾಕೆ, ಕಾರ್ಮಿಕರು ನ್ಯಾಯಯುತವಾಗಿ ದುಡಿದಿರುವ ವೇತನ ಕೇಳಬಾರದೆ? ಎಷ್ಟು ದಿನ ಈ ಗುತ್ತಿಗೆದಾರರು ಹಾಗೂ ಅಧಿಕಾರಿಯಿಂದ ತೊಂದರೆ ಅನುಭವಿಸಬೇಕು? ನಾವು ಈಗಾಗಲೇ, ಆಯುಕ್ತರಿಗೆ ನಾಲ್ಕು ತಿಂಗಳ ವೇತನ ಆಗದೆ ಇರುವುದರ ಬಗ್ಗೆ ಮನವಿ ಮಾಡಿದ್ದಿವಿ. ಯಾವುದೇ ರೀತಿಯ ಸ್ಪಂದನೆ ಸಿಕ್ಕಿಲ್ಲ. ಅದಕ್ಕೆ, ಸಂಘದ ವತಿಯಿಂದ ಕಾರ್ಮಿಕರು ಕೆಲಸ ಬಂದ್ ಮಾಡಿ, ಅನಿರ್ದಿಷ್ಟವಾದಿ ಮುಷ್ಕರ ಮಾಡಲು ತಯಾರಾಗಬೇಕೆಂದು ಕರೆ ನೀಡಿದ್ದೇವೆ, ಎಂದು ತಮ್ಮ ಅಸಮಾಧಾನ ಹೊರ ಹಾಕಿದರು.

ಪ್ರತಿಭಟನೆಯಲ್ಲಿ, ಸಂಜು ಕಂಬಾಗಿ, ದಯಾನಂದ, ತನ್ವೀರ್ ಗೊಲ್ಸುರೋಸ್, ಮೋಸಿನ್ ಹಾಲ್ಮೆಲ್, ರಮೇಶ್ ರಾಥೋಡ್, ಸತೀಶ್ ಚಲವಾದಿ, ಜಾವೀದ್ ಅತ್ತಾರ್, ಮೋಹಿಸಿನ, ಹುಸೇನ್ ಮುಲ್ಲಾ, ಕಳ್ಳಿಮನಿ, ಸಾಗರ್ ಸೇರಿದಂತೆ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...