ವಿಜಯಪುರ | ಪ್ರಾದೇಶಿಕ ಅಸಮಾನತೆಯಿಂದ ಉತ್ತರ ಕರ್ನಾಟಕ ಹಿಂದುಳಿದಿದೆ: ನ್ಯಾಯವಾದಿ ದಾನೇಶ ಅವಟಿ

Date:

ಹಲವಾರು ಮಹನೀಯರ ತ್ಯಾಗ, ಬಲಿದಾನ ಹಾಗೂ ಹೋರಾಟದ ಪ್ರತಿಫಲವಾಗಿ ಅಖಂಡ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು,ಕನ್ನಡನಾಡು,ನುಡಿ,ನೆಲ, ಜಲ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಆದರೆ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದು ಎಪ್ಪತ್ತು ವರ್ಷ ಗತಿಸುತ್ತಿದ್ದರೂ, ಪ್ರಾದೇಶಿಕ ಅಸಮಾನತೆಯಿಂದ ಉತ್ತರ ಕರ್ನಾಟಕ ಭಾಗ ಎಲ್ಲ ರಂಗದಲ್ಲೂ ಹಿಂದುಳಿದಿದೆ. ಇದು ದುರದೃಷ್ಟಕರ ಎಂದು ನ್ಯಾಯವಾದಿ ದಾನೇಶ ಅವಟಿ ತಿಳಿಸಿದರು.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಜಯಪುರ ನಗರದ ಸಿಂದಗಿ ರಸ್ತೆಯ ಜೈ ಕರ್ನಾಟಕ ಕಾಲೋನಿಯ ಇಮ್ಮಡಿ ಪುಲಿಕೇಶಿ ಯುವಕ ಸಂಘಟನೆಯ ಮಿತ್ರರೊಂದಿಗೆ ತಾಯಿ ಶ್ರೀ ಭುವನೇಶ್ವರಿ ವೃತ್ತದಲ್ಲಿ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಉತ್ತರ ಕರ್ನಾಟಕ ಭಾಗ ಎಲ್ಲ ರಂಗದಲ್ಲೂ ಹಿಂದುಳಿಯಲು ಕಾರಣ ಆಳುವ ಸರ್ಕಾರ ಮತ್ತು ಜನಪ್ರತಿನಿಧಿಗಳು. ಅಧಿಕಾರಿ ವರ್ಗ ಉತ್ತರ ಕರ್ನಾಟಕದ ಸಮಗ್ರ ಅಭಿವದ್ಧಿಗೆ ಆದ್ಯತೆ ನೀಡಬೇಕು ಎಂದು ಅವಟಿ ಇದೇ ವೇಳೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾದೇಶಿಕ ಅಸಮಾನತೆಯ ನಿವಾರಣೆಗೆ ಡಾ.ಡಿ.ಎಂ.ನಂಜುಂಡಪ್ಪ, ಮಹಾಜನ್, ಸರೋಜನಿ ಮಹಿಷಿ, ಬರಗೂರು ವರದಿಯಂತಹ ಮಹತ್ವದ ವರದಿಗಳ ಶಿಫಾರಸುಗಳು ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಆದರೂ, ಅವುಗಳನ್ನು ಇಷ್ಟು ದಿನ ರಾಜ್ಯಭಾರ ಮಾಡಿದ ಸರ್ಕಾರಗಳು, ಜನಪ್ರತಿನಿಧಿಗಳು ಅನುಷ್ಠಾನಕ್ಕೆ ತರಲು ಮನಸ್ಸು ಮಾಡಿಲ್ಲ ಎಂದು ದೂರಿದರು.

WhatsApp Image 2024 11 01 at 7.20.53 PM

ಕೇವಲ ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕ ಎಂದು ಘೋಷಣೆ ಮಾಡಿ ಕೆಲವೊಂದಿಷ್ಟು ಜಾತ್ರೆ ಉತ್ಸವ ಮಾಡಲು ಅನುದಾನ ಕೊಟ್ಟರಷ್ಟೇ ಸಾಲದು. ರಾಜ್ಯದ ಅತ್ಯಂತ ಹಿಂದುಳಿದ ಪ್ರದೇಶವಾದ ಉತ್ತರ ಕರ್ನಾಟಕದ ಪ್ರತಿಯೊಂದು ಹಳ್ಳಿ,ನಗರಗಳ ಜನರ ಜೀವನಮಟ್ಟ ಸುಧಾರಣೆಗೆ, ಸರ್ವರ ಏಳಿಗೆಗೆ ಪ್ರಾಮಾಣಿಕ ಪ್ರಯತ್ನ ಆಳುವ ಸರ್ಕಾರಗಳು ಮಾಡಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಹಿರಿಯರಾದ ಶರಣು ಜೋಗುರ, ಮೋಹನಕುಮಾರ ಬಣ್ಣದ, ಪರಶುರಾಮ ರಜಪೂತ, ಡಾ.ಸಂಜು ಸಿಳ್ಳಿನ., ಡಾ.ವಾಸು ಢಗೆ, ಶಿವಲಿಂಗಯ್ಯ ತೆಗ್ಗಳ್ಳಿ, ಕರಣ ಸಿಂಗ ಹಜೇರಿ, ಶಿವು ಲೋಗಾವೀ, ಅಪ್ಪು ಗುನ್ನಾಪುರ, ಪ್ರಭು ಮಠ, ರಾಚಯ್ಯ ಚೌಕಿಮಠ, ಶ್ರೀಶೈಲ ಯಾದವಾಡಮಠ, ನಾಗೇಶ ನಿರ್ವಾಣಶೆಟ್ಟಿ, ರುದ್ರು ಪಾಟೀಲ, ಸಂತೋಷ ನಾವಿ, ಮಹಾದೇವ ನಾವಿ, ಬಸವರಾಜ ಇಂಡಿ, ಹರೀಶ್ ಚೌಕಿಮಠ, ಗಿರೀಶ ಚೌಕಿಮಠ, ಅನಿಲ್ ಕುಮಾರ್ ಇಂಡಿ, ರಮೇಶ್ ಹಜೇರಿ, ಜೈ ಕರ್ನಾಟಕ ಕಾಲೋನಿ, ಅಲ್ಲಾಪುರ ಅಗಸಿ, ಸ್ಟೇಟ್ ಬ್ಯಾಂಕ್ ಕಾಲೋನಿ, ನಾಗೇಶ ಕಾಲೋನಿಯ ಅನೇಕ ಜನರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...