ಹೊಸ ಬಿಪಿಎಲ್‌, ಎಪಿಎಲ್‌ ಕಾರ್ಡ್​ ವಿತರಣೆಗೆ ಸೂಚನೆ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ

Date:

  • ‘ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು’
  • ಪಡಿತರ ಕಾರ್ಡ್​ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ

ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಾಗಿದ್ದ ಹಿನ್ನೆಲೆ ರೇಷನ್​​ ಕಾರ್ಡ್​ ವಿತರಣೆ ಸ್ಥಗಿತ ಮಾಡಲಾಗಿತ್ತು. ಈಗ ಹೊಸ ಪಡಿತರ ಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹೊಸ ಪಡಿತರ ಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪಡಿತರ ಕಾರ್ಡ್​ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಕಾರ್ಡ್​ನಲ್ಲಿರುವ ಮೃತರ ಹೆಸರನ್ನು ತೆರವುಗೊಳಿಸಲು ಸೂಚಿಸಲಾಗಿದೆ” ಎಂದು ಹೇಳಿದರು.

556 ಕೋಟಿ ರೂ. ಹಣ ಹಂಚಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಅಂತ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಈವರೆಗೆ ಒಂದು ಕೋಟಿಗೂ ಹೆಚ್ಚು ಕುಟುಂಬಗಳಿಗೆ ಸುಮಾರು 556 ಕೋಟಿ ರೂ. ಹಣ ಹಾಕಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲ ಆಗಿದೆ” ಎಂದರು.

ಬಜೆಟ್‌ನಲ್ಲಿ 10 ಸಾವಿರ ಕೋಟಿ ರೂ. ಹಣ ನಿಗದಿ

ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗದ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿ ಬದಲಾಗಿ ಪ್ರತಿ ಫಲಾನುಭವಿಗಳಿಗೆ 170 ರೂಪಾಯಿ ಹಣ ನೀಡಲಾಗುತ್ತದೆ. ಇದರಿಂದ 44.80 ಲಕ್ಷ ಅಂತ್ಯೋದಯ ಹಾಗೂ 3.97 ಕೋಟಿ ಬಿಪಿಎಲ್‌ ಪಡಿತರ ಚೀಟಿದಾರರಿಗೆ ಪ್ರಯೋಜನ ಆಗಲಿದೆ. ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ಪ್ರಸ್ತುತ ಬಜೆಟ್‌ನಲ್ಲಿ 10 ಸಾವಿರ ಕೋಟಿ ರೂ. ಹಣ ನಿಗದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ವರ್ಗಾವಣೆ ದಂಧೆ, ಪೊಲೀಸ್‌ ಅಧಿಕಾರಿಗಳ ನಡೆ ಬಗ್ಗೆ ಬಿ ಸಿ ನಾಗೇಶ್‌, ಶ್ರೀನಿವಾಸ ಪೂಜಾರಿ ಆಕ್ರೋಶ

ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರ ಅಕ್ಕಿ ನೀಡಲು ಮುಂದೆ ಬಂದಿವೆ. ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡುತ್ತೇವೆ. 34 ರೂ.ಗೆ ಅಕ್ಕಿ ಕೊಡುತ್ತೇವೆ ಅಂದರೆ ನಾವು ತೆಗೆದುಕೊಳ್ಳಲು ಸಿದ್ದರಿದ್ದೇವೆ. ಒಂದು ವಾರದಲ್ಲಿ ಅಲ್ಲಿನ ಅಧಿಕಾರಿಗಳು ನಿರ್ಧಾರ ಪ್ರಕಟಿಸುವ ವಿಶ್ವಾಸವಿದೆ. ಸೆಪ್ಟೆಂಬರ್​ ತಿಂಗಳಿನಲ್ಲಿ ಹಣದ ಬದಲು 10 ಕೆಜಿ ಅಕ್ಕಿ ವಿತರಿಸುವ ಚಿಂತನೆ ಇದೆ ಎಂದು ವಿವರಿಸಿದರು.

ವೈಟ್​ಬೋರ್ಡ್​ ಕಾರು ಇದ್ದವರಿಗೆ ಬಿಪಿಎಲ್​ ​​ಕಾರ್ಡ್​ ಇಲ್ಲ

ವೈಟ್​ಬೋರ್ಡ್​ ಕಾರು ಹೊಂದಿರುವವರಿಗೆ ಬಿಪಿಎಲ್​ ​​ಕಾರ್ಡ್​ ಇಲ್ಲ. ಹಳದಿ ಬೋರ್ಡ್ ಕಾರು ಇದ್ದರೆ ಬಿಪಿಎಲ್‌ ಕಾರ್ಡ್ ವಿತರಿಸಲಾಗುವುದು. ಈ ಬಗ್ಗೆ ಚರ್ಚೆ ಮಾಡಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.

22 ಲಕ್ಷ ಬಿಪಿಎಲ್‌ ಕುಟುಂಬಕ್ಕೆ ಹಣ ತತ್‌ಕ್ಷಣ ಸಿಗಲ್ಲ

ಕರ್ನಾಟಕದಲ್ಲಿ 22 ಲಕ್ಷ ಬಿಪಿಎಲ್‌ ಕುಟುಂಬಗಳು ಬ್ಯಾಂಕ್‌ ಖಾತೆಗಳನ್ನು ಹೊಂದಿಲ್ಲ. ಹೀಗಾಗಿ ಅವರಿಗೆ ಈ ಹಣವನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡುವುದಕ್ಕೆ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...