ಈಗ ಅಜ್ಜಯ್ಯನ ಬಳಿ ಹೋಗಿ ಆಣೆ ಮಾಡಪ್ಪ ಡಿಕೆ ಶಿವಕುಮಾರ್: ಅಶ್ವತ್ಥನಾರಾಯಣ ಕಿಡಿ

Date:

  • ‘ರಾಜಕೀಯ ನಿವೃತ್ತಿಯಾದರೂ ಆಗು, ಇಲ್ಲ ಕಾಂಗ್ರೆಸ್‌ ನಿರ್ನಾಮ ಆದರೂ ಮಾಡು’
  • ರಾಜಕೀಯ ನಿವೃತ್ತಿ ಪಡೆಯುವೆ ಎಂದಿರುವ ಡಿಕೆ ಶಿವಕುಮಾರ್‌ಗೆ ತಿರುಗೇಟು

ಡಿಕೆ ಶಿವಕುಮಾರ್‌ಗೆ ತಾಕತ್‌, ಧಮ್‌ ಇದ್ದರೆ ಅಜ್ಜಯ್ಯನ ಮುಂದೆ ಆಣೆ ಮಾಡಲಿ, ಡಿಕೆಶಿ ಎಲ್ಲದಕ್ಕೂ ಅಜ್ಜಯ್ಯನ ಬಳಿ ಹೋಗುತ್ತಾರೆ ಅಲ್ವಾ? ಈಗ ಹೋಗಪ್ಪ ಅಜ್ಜಯ್ಯನ ಬಳಿ ಹೋಗಿ ಆಣೆ ಮಾಡಪ್ಪ ಎಂದು ಮಾಜಿ ಸಚಿವ ಅಶ್ವತ್ಥನಾರಾಯಣ ಏಕವಚನದಲ್ಲೇ ಕಿಡಿಕಾರಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಮಿಷನ್‌ ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ’ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ.

“ನೀನು ರಾಜಕೀಯ ನಿವೃತ್ತಿ ಆದರೂ ಆಗು, ಕಾಂಗ್ರೆಸ್‌ ಅನ್ನು ನಿರ್ನಾಮ ಆದರೂ ಮಾಡು. ಡಿಕೆ ಶಿವಕುಮಾರ್ ‌ಬೆಂಗಳೂರು ಅಭಿವೃದ್ಧಿ ಸಚಿವರಲ್ಲ, ‌ಅವರು ಬೆಂಗಳೂರು ನಿರ್ನಾಮ ಮಂತ್ರಿ, ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಡಿಕೆ‌ ಶಿವಕುಮಾರ್‌ ಕಳಂಕ‌ ತರೋದು‌ ಬೇಡ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರು ಅಭಿವೃದ್ಧಿ ಸಚಿವ, ಉಪ ಮುಖ್ಯಮಂತ್ರಿಗಳ ಮೇಲೆ ಗುತ್ತಿಗೆದಾರರು ಶೇ.10 ರಿಂದ 15ರಷ್ಟು ಕಮಿಷನ್ ಆರೋಪ ಮಾಡಿದ್ದಾರೆ. ಆಗ ನಿರಾಧಾರವಾಗಿ ಕ್ಯಾಂಪೇನ್ ಮಾಡಿದ್ದರು. ಈಗ ಏನು ಉತ್ತರ ನೀಡುತ್ತಾರೆ? ಇವರು ಇನ್ನೊಬ್ಬರ ಬಗ್ಗೆ, ಗುತ್ತಿಗೆದಾರರ ಕುರಿತು ಮಾತನಾಡುತ್ತಾರೆ. ಡಿಕೆ ಶಿವಕುಮಾರ್ ಟ್ರ್ಯಾಕ್ ರೆಕಾರ್ಡ್ ತೆಗೆದು ನೋಡಿದ್ರೆ ಎಲ್ಲವೂ ಗೊತ್ತಾಗುತ್ತದೆ” ಎಂದರು.

ಗುತ್ತಿಗೆದಾರರ ಪ್ರಕರಣ ಲೋಕಾಯುಕ್ತಕ್ಕೆ ನೀಡಬೇಕು

“ಗುತ್ತಿಗೆದಾರರು ಈಗಲೇ ಸುಸ್ತಾಗಿದ್ದಾರೆ. ಗುತ್ತಿಗೆದಾರರ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ಕೊಡಬೇಕು. ನಾವು ಸೋಮವಾರ ರಾಜ್ಯಪಾಲರನ್ನು ಭೇಟಿ ಮಾಡಿ ಒತ್ತಾಯ ಮಾಡುತ್ತೇವೆ. ಪ್ರಾಮಾಣಿಕತೆ ಕಿಂಚಿತ್ತಾದರೂ ಇದ್ದರೆ ಲೋಕಾಯುಕ್ತಕ್ಕೆ ತನಿಖೆಗೆ ವಹಿಸಿ. ನಮ್ಮ ಬಗ್ಗೆ ತನಿಖೆ ಯಾರಿಂದಲಾದರೂ ಮಾಡಿಸಲಿ. ವೆಲ್‍ಕಂ, ಬಹಳ ಸತ್ಯವಂತ, ಪ್ರಾಮಾಣಿಕ ಎನ್ನುವ ಸಿದ್ದರಾಮಯ್ಯನವರು ಲೋಕಾಯುಕ್ತದ ತನಿಖೆ ಮಾಡಿಸಲಿ” ಎಂದು ಅಶ್ವತ್ಥನಾರಾಯಣ ಆಗ್ರಹಿಸಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸುಡದಿರಲಿ ಬಿಲ್ ಬಾಕಿ ಬೆಂಕಿ ಕಿಡಿ

ಕಾಂಗ್ರೆಸ್ ಎಟಿಎಂ ಸರ್ಕಾರ

“ಕಾಂಗ್ರೆಸ್‌ನಲ್ಲಿ ಸಿಎಂ, ಸೂಪರ್‌ ಸಿಎಂ, ಶ್ಯಾಡೋ ಸಿಎಂ ಇದ್ದಾರೆ, ಕಾಂಗ್ರೆಸ್‌ ಸರ್ಕಾರ ಎಟಿಎಂ ಸರ್ಕಾರ. ಕಾಂಗ್ರೆಸ್‌ನಲ್ಲಿ ವೈಎಸ್‌ಟಿ, ಜಿಎಸ್‌ಟಿ ಇದೆ, ಸುರ್ಜೇವಾಲಾ ಬರ್ತಾರೆ, ಟಾರ್ಗೆಟ್‌ ಕೊಡುತ್ತಾರೆ. ಕಲೆಕ್ಷನ್‌ ಮಾಡುತ್ತಾರೆ. ಕಾಂಗ್ರೆಸ್‌ನವರು ಹವಾಲಾ ಮಾಡುತ್ತಾರೆ ಎಂಬ ಆರೋಪ ಇದೆ. ಲೋಕಸಭೆ ಚುನಾವಣೆಗೆ ಇಲ್ಲಿಂದ ಹಣ ಕ್ರೋಡೀಕರಣ ಮಾಡಲಾಗುತ್ತಿದೆ” ಎಂದು ದೂರಿದರು.

ಚಲುವರಾಯಸ್ವಾಮಿ ಅವರ ಮೇಲಿನ ಲಂಚ ಕೇಳಿದ ಆಪಾದನೆ ಆಧರಿತವಾಗಿ ರಾಜ್ಯಪಾಲರು ಪತ್ರವನ್ನು ಮುಖ್ಯ ಕಾರ್ಯದರ್ಶಿಗಳಿಗೆ ಕಳಿಸಿದ್ದಾರೆ. ಅಧಿಕಾರಿಗಳ ಮೂಲಕ ಹಣ ಸಂಗ್ರಹ ನಡೆದಿದೆ. ಪೇ ಸಿಎಂ, ಪೇ ಡಿಸಿಎಂ, ಪೇ ಚಲುವರಾಯಸ್ವಾಮಿ ಆಗಿದೆ. ಪೇ ಪೇ ಆಗಿದೆ. ಸಿಎಂ ಇದನ್ನು ನಕಲಿ ಎಂದಿದ್ದಾರೆ. ಇವರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಸಿಐಡಿಗೆ ತನಿಖೆ ವಹಿಸಿದರೆ ನ್ಯಾಯ ಸಿಗುವುದೇ? ಇವರಿಬ್ಬರನ್ನು ವಜಾ ಮಾಡಿ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಸಚಿವರಾದ ಕೆ ಗೋಪಾಲಯ್ಯ, ಬಿಡಿಎ ಮಾಜಿ ಅಧ್ಯಕ್ಷ ಮತ್ತು ಶಾಸಕ ಎಸ್.ಆರ್. ವಿಶ್ವನಾಥ್, ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...