ಉಡುಪಿ | ವಿಶೇಷ ಮಕ್ಕಳ ಆರೈಕೆ ನಮ್ಮ ಸಾಮಾಜಿಕ ಜವಾಬ್ದಾರಿಯ ಅಂಗ : ರೋಹನ್ ಫ್ರಾಂಕೋ

Date:

ಉಡುಪಿಯ ನೇಜಾರಿನ ನೂರುಲ್ ಫುರ್ಕಾನ್ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೂರುಲ್ ಫುರ್ಕಾನ್ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶೇಷ ಅಗತ್ಯಗಳಿರುವ ಮಕ್ಕಳ ಪುನರ್ವಸತಿ ಹಾಗೂ ಶಾರೀರಿಕ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ ಫಿಸಿಯೊಥೆರಪಿ ಉಪಕರಣಗಳ ದಾನ ಹಸ್ತಾಂತರ ಕಾರ್ಯಕ್ರಮ ಶಾಲಾ ಆವರಣದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಆಸ್ಟರ್ ಡಿಎಂ ಹೆಲ್ತ್‌ಕೇರ್ ಸಂಸ್ಥೆಯ ವಲಯ ಮುಖ್ಯಸ್ಥರಾದ ರೋಹನ್ ಫ್ರಾಂಕೋ ವಿಶೇಷ ಅತಿಥಿಯಾಗಿ ಭಾಗವಹಿಸಿ. ಶಾಲೆಯ ಪುನರ್ವಸತಿ ಘಟಕಕ್ಕೆ ಬಳಕೆಯಾಗಲಿರುವ ಅತ್ಯಾಧುನಿಕ, ಮಕ್ಕಳಿಗೆ ಹೊಂದುವಂತಹ ಫಿಸಿಯೊಥೆರಪಿ ಉಪಕರಣಗಳನ್ನು ಅಧಿಕೃತವಾಗಿ ಹಸ್ತಾಂತರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

WhatsApp Image 2025 12 10 at 10.41.55 AM

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಹನ್ ಫ್ರಾಂಕೋ, ಸಮಾಜದ ಪ್ರತಿಯೊಬ್ಬ ಮಕ್ಕಳಿಗೂ ಸಮಾನ ಅವಕಾಶ ನೀಡಬೇಕಾದದ್ದು ನಮ್ಮ ನೈತಿಕ ಹೊಣೆ. ವಿಶೇಷ ಅಗತ್ಯಗಳಿರುವ ಮಕ್ಕಳಿಗೆ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಸೂಕ್ತ ಆರೈಕೆ, ಚಿಕಿತ್ಸೆ ಹಾಗೂ ಪುನರ್ವಸತಿ ಸೇವೆಯನ್ನು ತಲುಪಿಸುವುದು ಅತ್ಯಂತ ಮುಖ್ಯ. ಈ ದೃಷ್ಟಿಯಿಂದ ನೂರುಲ್ ಫುರ್ಕಾನ್ ಸ್ಪೆಷಲ್ ಶಾಲೆಯ ಸೇವಾಭಾವ ಮತ್ತು ಮಕ್ಕಳಿಗೆ ನೀಡುತ್ತಿರುವ ಸಹಾಯ ಶ್ಲಾಘನೀಯ ಎಂದು ಪ್ರಶಂಸಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂರುಲ್ ಫುರ್ಕಾನ್ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕಿ ಹಾಗೂ ಪ್ರಾಂಶುಪಾಲೆ ದಿಲ್ದಾರ್ ಫಜ್ಲುರ್ ರಹ್ಮಾನ್ ಮಾತನಾಡಿ, ವಿಶೇಷ ಅಗತ್ಯಗಳ ಮಕ್ಕಳಿಗೆ ಶಿಕ್ಷಣದ ಜೊತೆಗೆ ಶಾರೀರಿಕ ಪುನರ್ವಸತಿ ಅತ್ಯಗತ್ಯ. ಈ ಉಪಕರಣಗಳ ಸಹಾಯದಿಂದ ನಮ್ಮ ವಿದ್ಯಾರ್ಥಿಗಳ ಬೆನ್ನುಹುರಿ, ಸ್ನಾಯು ಬಲ, ಸಮತೋಲನ, ಸಂಯೋಜನೆ ಮತ್ತು ಸ್ವಯಂ ಚಲನವಲನ ಸಾಮರ್ಥ್ಯದಲ್ಲಿ ಹೆಚ್ಚಿನ ಬೆಳವಣಿಗೆ ಸಾಧ್ಯ. ಆಸ್ಟರ್ ಡಿಎಂ ಹೆಲ್ತ್‌ಕೇರ್ ನೀಡಿರುವ ಈ ದಾನ ನಮ್ಮ ಪುನರ್ವಸತಿ ವಿಭಾಗಕ್ಕೆ ಹೊಸ ಶಕ್ತಿ ನೀಡುತ್ತದೆ ಎಂದು ಹೇಳಿದರು.

ಟ್ರಸ್ಟ್‌ನ ಉಪಾಧ್ಯಕ್ಷ ಇಕ್ಬಾಲ್ ಮನ್ನ ಮಾತನಾಡಿ, ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸಿ ವಿಶೇಷ ಮಕ್ಕಳ ಅಭಿವೃದ್ಧಿಗಾಗಿ ಕೈಜೋಡಿಸಿರುವ ಆಸ್ಟರ್ ಸಂಸ್ಥೆಗೆ ಹೃತ್ಪೂರ್ವಕ ಧನ್ಯವಾದ ಸಲ್ಲಿಸಿದರು. ಈ ರೀತಿಯ ಸಹಕಾರದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಹಾಗೂ ಒಳಗೊಳ್ಳುವಿಕೆ ಬಲವಾಗುತ್ತದೆ ಎಂದು ಅವರು ಹೇಳಿದರು.

WhatsApp Image 2025 12 10 at 10.41.54 AM

ವೇದಿಕೆಯಲ್ಲಿ ಟ್ರಸ್ಟಿ ಅಶ್ರಫ್ ಬಂಗ್ರೆ ಉಪಸ್ಥಿತರಿದ್ದರು. ಕೌಸರ್‌ ಭಾನು ಕಾರ್ಯಕ್ರಮ ನಿರೂಪಿಸಿದರು, ರೇಷ್ಮಾ ನಾಸೀರ್‌ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಪೋಷಕರು ಮತ್ತು ಮಕ್ಕಳು ಭಾಗವಹಿಸಿದ್ದು, ಹೊಸ ಉಪಕರಣಗಳು ಮಕ್ಕಳಿಗೆ ಉತ್ತಮ ಚಿಕಿತ್ಸಾ ಅವಕಾಶ ಒದಗಿಸಲಿದೆ. ಫಿಸಿಯೊಥೆರಪಿ ಶಿಕ್ಷಕರು ಹೊಸ ಉಪಕರಣಗಳ ಬಳಕೆ ಕುರಿತ ಮಾಹಿತಿಯನ್ನು ಪೋಷಕರಿಗೆ ನೀಡಿದರು. ಒಟ್ಟಾರೆಯಾಗಿ, ನೂರುಲ್ ಫುರ್ಕಾನ್ ವಿಶೇಷ ಮಕ್ಕಳ ಶಾಲೆಯ ಈ ಕಾರ್ಯಕ್ರಮವು ವಿಶೇಷ ಅಗತ್ಯಗಳಿರುವ ಮಕ್ಕಳ ಬದುಕಿನಲ್ಲಿ ಬೆಳವಣಿಗೆ ಹಾಗೂ ಆತ್ಮವಿಶ್ವಾಸಕ್ಕೆ ಮತ್ತೊಂದು ಮೌಲ್ಯವಾದ ಹೆಜ್ಜೆಯಾಗಿದೆ.

WhatsApp Image 2025 12 10 at 4.29.39 PM 1
WhatsApp Image 2025 12 10 at 4.29.39 PM
WhatsApp Image 2025 12 10 at 4.29.39 PM 2
WhatsApp Image 2025 12 10 at 4.29.38 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...