ಸಾಗರ | ಮಾರಿ ಜಾತ್ರೆಯಂತೆ ಫ್ಲೆಕ್ಸ್;‌ ಟೀಕೆಗೆ ಗುರಿಯಾದ ಶಾಸಕ

Date:

ನಮ್ಮ ತಾಲೂಕಿನ ಶಾಸಕರು ಮಾರಿ ಜಾತ್ರೆಗೆ ಫ್ಲೆಕ್ಸ್‌ ಹಾಕಿದ ಹಾಗೆ ಹಾಕಿಸಿಕೊಂಡು ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಂತಿಷ್ಟೇ ಫ್ಲೆಕ್ಸ್ ಹಾಕಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ ಎಂದು ಸಾಗರ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರತ್ನಾಕರ ಹೊನಗೋಡು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಯಾರೇ ಆಗಲಿ ಇತಿಮಿತಿಗಳನ್ನು ಇಟ್ಟುಕೊಂಡು ಹುಟ್ಟುಹಬ್ಬ ಆಚರಿಸಬೇಕು. ಆದರೆ ಶಾಸಕ ಗೋಪಾಲಕೃಷ್ಣ ಅವರು ಸರ್ಕಾರಿ ನೌಕರರಿಗೆ, ಗುತ್ತಿಗೆದಾರರಿಗೆ ವಾರ್ನಿಂಗ್ ಕೊಟ್ಟು ಫ್ಲೆಕ್ಸ್ ಹಾಕಿಸಿಕೊಂಡು ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಎಷ್ಟು ಸರಿ ಎಂದರು.

ಮುಂದುವರೆದು ಹೊಸನಗರದಲ್ಲಿ ಶಿಕ್ಷಣ ಸಚಿವರು ವೇದಿಕೆಯಲ್ಲಿ ಭಾಷಣ ಮಾಡುವಾಗ ಶಾಸಕ ಗೋಪಾಲಕೃಷ್ಣ ಅವರನ್ನು ಮಾಜಿ ಸಿಎಂ ಬಂಗಾರಪ್ಪನವರಿಗೆ ಹೋಲಿಸಿದ್ದಾರೆ. ಇದು ಅನೇಕ ಬಂಗಾರಪ್ಪನವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕಿನಾದ್ಯಂತ ದುರಾಡಳಿತ ಹಾಗೂ ಅಧಿಕಾರದ ದಬ್ಬಾಳಿಕೆ ತಾಂಡವವಾಡುತ್ತಿದೆ. ನಗರಸಭೆ ಚುನಾವಣೆಯ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳ ಎದುರಿಗೆ ಶಾಸಕರು ವಿರೋಧ ಪಕ್ಷದ ನಾಯಕರ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಇದನ್ನು ಗಮನಿಸಿದ ಪೊಲೀಸ್ ಅಧಿಕಾರಿಗಳು ನೇರವಾಗಿ ಎಫ್ ಐ ಆರ್ ಹಾಕಬೇಕಾಗಿತ್ತು, ಆದರೆ ಹಾಕಲಿಲ್ಲ ಎಂದು ಆರೋಪಿಸಿದರು. ಗೋಪಾಲಕೃಷ್ಣ ಬೇಳೂರು ತಮ್ಮ ಶೋಕಿಗಾಗಿ ಹೋಂ ಮಿನಿಸ್ಟರ್ ಸಹ ಉಪಯೋಗಿಸದ ಹಾಗೆ ಎಸ್ಕಾರ್ಟ್ ಸೇವೆಗಳನ್ನು ಬಳಸಿಕೊಂಡು ಸಾರ್ವಜನಿಕ ಹಣವನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಸಾಗರ | ಜನರಿಗೆ ಮೂಲ ಸೌಕರ್ಯ ಒದಗಿಸುವುದೇ ಗ್ರಾಮ ಪಂಚಾಯತಿಗಳ ಉದ್ದೇಶ

ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಗುರುರಾಜ್, ಉಪಾಧ್ಯಕ್ಷೆ ರೂಪ ನಾಗರಾಜ್, ಗೌತಮಪುರ ಗ್ರಾಂ.ಪಂ ಸದಸ್ಯ ಪರಮೇಶ್, ಶಕ್ತಿ ಕೇಂದ್ರ ಅಧ್ಯಕ್ಷ ಶಾಂತಪ್ಪ, ಮಾಮ್ ಕೋಸ್ ನಿರ್ದೇಶಕ ಭರ್ಮಪ್ಪ ಹಾಗೂ ದೇವು ಬೀಸನ ಗದ್ದೆ, ಶ್ರೀಧರ ಸಂಪಳ್ಳಿ ಹಾಗೂ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...