ಫಲಾನುಭವಿಗಳಿಂದ ಪಡಿತರ ಅಂಗಡಿಗಳು ಹಣ ವಸೂಲಿ ಶಿಸ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

Date:

ಕೋಲಾರ: ಪಡಿತರ ಪಡೆಯಬೇಕಾದರೆ ನ್ಯಾಯಬೆಲೆ ಅಂಗಡಿಯಲ್ಲಿ ಫಲಾನುಭವಿಗಳು 10 ರುಪಾಯಿ ಕೊಟ್ಟು ಹೆಬ್ಬೆಟ್ಟಿನ ಗುರುತು ನೀಡಬೇಕು ಜೊತೆಗೆ ಒಂದೆರಡು ಕೆ.ಜಿ ಅಕ್ಕಿ ಕಡಿತಗೊಳಿಸುವ ದೂರುಗಳು ಬಂದಿವೆ. ಅಂತಹ ಪ್ರಕರಣಗಳು ಮರುಕಳಿಸಬಾರದು ಮತ್ತೆ ದೂರು ಬಂದರೆ ಅಂತಹ ನ್ಯಾಯಬೆಲೆ ಅಂಗಂಡಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಸೂಚನೆ ನೀಡಿದರು.

ನಗರದ ತಾಪಂ ಸಭಾಂಗಣದಲ್ಲಿ ಶನಿವಾರ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಪ್ರತಿಯೊಂದು ನ್ಯಾಯಬೆಲೆ ಅಂಗಂಡಿಗಳ ಮುಂದೆ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಹಾಕಬೇಕು ಯಾವುದೇ ಕಾರಣಕ್ಕೂ ಹಣ ಪಡೆಯಬಾರದು ಸಾರ್ವಜನಿಕರು ನೇರವಾಗಿ ಕಛೇರಿಗೆ ದೂರು ನೀಡಬಹುದು ಮುಂದಿನ ದಿನಗಳಲ್ಲಿ ಎಲ್ಲಾ ಸೊಸೈಟಿಗಳ ಸಭೆ ಕರೆದು ಅವರ ಮೂಲಕ ಸೂಚನೆ ಸಹ ನೀಡಬೇಕು ಕೆಲವು ಕಡೆಯಲ್ಲಿ ಅಕ್ಕಿ ಪಡೆದು ಮಾರಾಟ ಮಾಡಿದ ಪ್ರಕರಣಗಳು ಇವೆ ಅಂತಹ ಫಲಾನುಭವಿಗಳನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದು ಮಾಡಿ ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಬೇಕು ಎಂದು ತಿಳಿಸಿದರು.

ಸರ್ಕಾರದ ಮಹತ್ವಾಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬರಿಗೆ ತಲುಪಿಸಲು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಯಾವುದೇ ಕಾರಣಕ್ಕೂ ಲೋಪಗಳು ಆಗದಂತೆ ನೋಡಿಕೊಳ್ಳಬೇಕು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯವನ್ನು ನಿರ್ವಹಿಸಬೇಕು ಆಗ ಮಾತ್ರ ಸರ್ಕಾರಕ್ಕೆ ಹಾಗೂ ಸಮಿತಿಗೆ ಗೌರವ ಸಿಗುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೇಮಗಲ್ ಭಾಗದಿಂದ ಬೆಂಗಳೂರಿಗೆ ನೇರವಾಗಿ ಹೋಗಲು ಬೆಳಗ್ಗೆ8 ಗಂಟೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ ನರಸಾಪುರ ಮಾರ್ಗದಲ್ಲಿ ಹೊಸಕೋಟೆ ಯಿಂದ ಬೆಂಗಳೂರಿಗೆ ಹೋಗಲಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಜೊತೆಗೆ ಫೆ‌ ೬ ರಂದು ನಡೆಯಲಿದೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸುವಂತೆ ಪ್ರತಿ ಪಂಚಾಯತಿ ಮಟ್ಟದಲ್ಲಿ ಗಮನ ಹರಿಸಬೇಕು ಜೊತೆಗೆ ಮುಂದಿನ ದಿನಗಳಲ್ಲಿ ಪ್ರತಿಯೊಂದು ಯೋಜನೆಗಳಿಗೆ ಸಂಬಂಧಿಸಿದಂತೆ ತಾಲೂಕು ಸಮಾವೇಶವನ್ನು ನಡೆಸಲು ಪೂರ್ವ ತಯಾರಿ ನಡೆಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನು ಓದಿದ್ದೀರಾ..? ವಿ.ಬಿ.ಜಿ ರಾಮ್​ ಜಿ ಯೋಜನೆ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರ ಪಾಲಿಗೆ ಮರಣ ಶಾಸನ : ಡಾ.ಅನಿಲ್ ಕುಮಾರ್

ಈ ಸಭೆಯಲ್ಲಿ ತಾಪಂ ಇಒ ಮಂಜುನಾಥ್, ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಸೇರಿದಂತೆ ಸಮಿತಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...