ಗ್ರಾಮ ಪಂ.ಗಳಲ್ಲಿ ಅಧಿಕಾರಿಗಳ ಹಸ್ತಕ್ಷೇಪ; ಚುನಾಯಿತ ಸದಸ್ಯರ ಬೃಹತ್ ಪ್ರತಿಭಟನೆ

Date:

ಸ್ಥಳೀಯ ಸರ್ಕಾರಗಳಾಗಿರುವ ಗ್ರಾಮ ಪಂಚಾಯತಿಗಳಲ್ಲಿ ಚುನಾಯಿತ ಸದಸ್ಯರನ್ನು ಪಿಡಿಒಗಳು ಮತ್ತು ಮೇಲಿನ ಹಂತದ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಜನಪ್ರತಿನಿಧಿಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯದ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ನೇತೃತ್ವದಲ್ಲಿ ಗ್ರಾಮ ಪಂಚಾಯತಿಗಳ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. “ಅಧಿಕಾರಿಗಳು ಗ್ರಾಮ ಪಂಚಾಯತಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದು, ಗ್ರಾಮ ಪಂಚಾಯತಿಗಳನ್ನು ತಮ್ಮ ಕೈಕೆಳಗಿನ ಶಾಖಾ ಕಚೇರಿಗಳನ್ನಾಗಿ ಮಾಡಿಕೊಂಡಿದ್ದಾರೆ. ಹೀಗಾಗಿ, ಗ್ರಾಮ ಪಂಚಾಯಿತಿಗಳಿಗೆ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಕೇವಲ ಮೂಕ ಪ್ರೇಕ್ಷಕರಾಗಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅಧಿಕಾರಿಗಳ ಹಸ್ತಕ್ಷೇಪದಿಂದ ಪಂಚಾಯತ್ ರಾಜ್ ವ್ಯವಸ್ಥೆಯ ಮೂಲಕ ಭಾರತದ ಕಟ್ಟಕಡೆಯ ವ್ಯಕ್ತಿಯನ್ನು ಪ್ರಭುವನ್ನಾಗಿಸಬೇಕೆಂಬ ಗಾಂಧಿ ಆಶಯ ಮಣ್ಣು ಪಾಲಾಗಿದೆ.  ದೇಶದ ಅಭಿವೃದ್ಧಿಯಲ್ಲಿ ಎಲ್ಲರೂ ಭಾಗಿಯಾಗಬೇಕು ಎಂಬ ಆಶಯದಿಂದ ಅಂಬೇಡ್ಕರ್ ಒದಗಿಸಿದ ಮೀಸಲಾತಿಯ ಉದ್ದೇಶ ವಿಫಲವಾಗಿದೆ. ಗ್ರಾಮ ಪಂಚಾಯತಿ ಸದಸ್ಯರು ಅಧಿಕಾರವಿದ್ದರೂ ಚಲಾಯಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವತಂತ್ರ್ಯ ಸ್ಥಳೀಯ ಸರ್ಕಾರಗಳಾಗಿ ಕಾರ್ಯನಿರ್ವಹಿಸಬೇಕಿದ್ದ ಗ್ರಾಮ ಪಂಚಾಯತಿಗಳು ತಮ್ಮ ಸ್ವತಂತ್ರ್ಯವನ್ನು ಕಳೆದುಕೊಂಡಿವೆ. ಸಂವಿಧಾನದ ಮತ್ತು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಯ ಆಶಯದಂತೆ ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುವಂತಾಬೇಕು. ಅದಕ್ಕಾಗಿ, ಗ್ರಾಮ ಪಂಚಾಯತಿ ಆಡಳಿತದಲ್ಲಿ ಪಿಡಿಒ ಮತ್ತು ಅಧಿಕಾರಿಗಳ ಹಸ್ತಕ್ಷೇಪ ಮತ್ತು ಪ್ರಭಾವನ್ನು ನಿಯಂತ್ರಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಕೇರಳದಲ್ಲಿ ಗ್ರಾಮ ಪಂಚಾಯತಿಗಳ ಅಧ್ಯಕ್ಷರಿಗೆ 15,000 ರೂ. ಉಪಾಧ್ಯಕ್ಷರಿಗೆ 12,500 ರೂ. ಹಾಗೂ ಸದಸ್ಯರಿಗೆ 7,000 ರೂ. ಗೌರವಧನ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಗೌರವಧನ ಹೆಚ್ಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  1. ಗ್ರಾಮ ಪಂಚಾಯತಿಗಳಿಗೆ ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಲು ಬೇಕಾಗುವ ಜವಾಬ್ದಾರಿ ನಕ್ಷೆ ರಚನೆ ಮಾಡಬೇಕು.
  2. ಪ್ರಜಾಪ್ರಭುತ್ವದ ಮೂಲಘಟಕಗಳಾದ ಪ್ರಜೆಗಳಿಗೆ ಅಧಿಕಾರ ನೀಡಲು ಗ್ರಾಮಸಭಾಗಳಿಗೆ ನಿಯಮಗಳನ್ನು ರಚಿಸಬೇಕು.
  3. ಸರ್ಕಾರದ ವಿವಿಧ ಯೋಜನೆಗಳ ಸೇವೆಯನ್ನು ಜನರ ಬಳಿಗೆ ಕೊಂಡೊಯ್ಯುವ ದೃಷ್ಟಿಯಿಂದ ಬಾಪುಜಿ ಸೇವಾ ಕೇಂದ್ರಗಳ ಬಲವರ್ಧನೆ, ಮುಂಚೂಣಿ ಕಾರ್ಯಾಲಯಗಳ ಸ್ಥಾಪನೆ ಮಾಡಬೇಕು.
  4. 29 ವಿಷಯಗಳಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಪಂಚಾಯತ್ ರಾಜ್ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಸುವಂತಾಗಲು ಅಧಿಕಾರ ವಿಕೇಂದ್ರೀಕರಣ ಕಾಯ್ದೆ ರಚನೆ ಮಾಡಬೇಕು.
  5. ಗ್ರಾಮ ಪಂಚಾಯತಿಯ ಆಡಳಿತ ವ್ಯವಸ್ಥಿತವಾಗಿ ನಡೆಯಲು ಕಚೇರಿ ನಿರ್ವಹಣ ಕೈಪಿಡಿ ರಚಿಸಬೇಕು.
  6. ಇ-ಸ್ವತ್ತು ಆಂದೋಲನದ ಮೂಲಕ ಗ್ರಾಮ ಪಂಚಾಯತಿಯ ತೆರಿಗೆಗೆ ಒಳಪಟ್ಟಿರುವ ಎಲ್ಲ ಆಸ್ತಿಗಳಿಗೆ ಈ ಸ್ವತ್ತು ದಾಖಲೆ ಸೃಜನೆ ಮಾಡಿ ಹಂಚಬೇಕು.
  7. ಪಂಚಾಯತಿ ಸದಸ್ಯರನ್ನು ರಾಜ್ಯ ಶಿಷ್ಟಾಚಾರಕ್ಕೆ ಒಳಪಡಿಸಬೇಕು.
  8. ಕೇರಳ ಮಾದರಿಯ ಗೌರವಧನ ಹೆಚ್ಚಳ ಮಾಡಬೇಕು.
  9. ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನದಲ್ಲಿರುವ ತೊಡಕುಗಳ ನಿವಾರಣೆ ಮಾಡಬೇಕು.
  10. ಅಧಿಕಾರಿಗಳ ಹಸ್ತಕ್ಷೇಪವನ್ನು ತಡೆಯಬೇಕು. ಚುನಾಯಿತ ಸದಸ್ಯರಿಗೆ ಅಧಿಕಾರ ನೀಡಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...