ವಿಜಯಪುರ ಬಿಸಿಎಂ ವಸತಿನಿಲಯಕ್ಕೆ ಅಧಿಕಾರಿಗಳ ಭೇಟಿ: ಸಮಸ್ಯೆ ಬಗೆಹರಿಸುವ ಭರವಸೆ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಬಿಸಿಎಂ ವಸತಿನಿಲಯಕ್ಕೆ ಉಪತಹಶೀಲ್ದಾರ್ ಎನ್ ಬಿ ದೊರೆ, ಕಂದಾಯ ನಿರೀಕ್ಷ ವಿ ವಿ ಅಂಬಿಗೇರ ಭೇಟಿ ನೀಡಿ ನಿಲಯದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.

ದಿಢೀರ್ ಭೇಟಿ ನೀಡಿದ ಅಧಿಕಾರಿಗಳು ಕಿಟ್, ತಿಂಡಿ, ಊಟ ಸ್ವಚ್ಛತೆ ಕುರಿತು ಮಕ್ಕಳಿಂದ ಮಾಹಿತಿ ಪಡೆದುಕೊಂಡರು. ಅಡುಗೆಯವರೊಂದಿಗೆ ಚರ್ಚಿಸಿದ ಅವರು, “ನಿಲಯದ ಮಕ್ಕಳ ಸುರಕ್ಷತೆ, ಮೆನು ಪಾಲನೆ ಮಾಡಿ ಊಟ, ತಿಂಡಿ ಒದಗಿಸಬೇಕು. ಮಕ್ಕಳನ್ನು ಯಾವುದೇ ಕಾರಣಕ್ಕೂ ನಿಲಯದಿಂದ ಅನಧಿಕೃತವಾಗಿ ಹೊರಗಡೆ ಬಿಡಬೇಡಿ. ಸ್ವಚ್ಛತೆಗೆ ಆದ್ಯತೆ ನೀಡಿ” ಎಂದು ಸೂಚಿಸಿದರು.

ದೂರು ನೀಡಿದ ಮಕ್ಕಳು: “ಆವರಣದಲ್ಲಿ ನಡೆದಾಡಲೂ ಬರದಂತ ಮಳೆಗಾಲದಲ್ಲಿ ನೀರು ನುಗ್ಗುತ್ತದೆ. ಕೆಸರು ಗದ್ದೆಯಲ್ಲೇ ಅಲೆಯಬೇಕಿದೆ. ಚರಂಡಿ ಶುಚಿಗೊಳಿಸಲು ಮುಂದಾಗುತ್ತಿಲ್ಲ” ಎಂದು ಮಕ್ಕಳು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದಕ್ಕೆ ಸ್ಪಂದಿಸಿದ ಅಧಿಕಾರಿಗಳು, “ಶೀಘ್ರ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮತ್ತು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳ ಗಮನಕ್ಕೆ ತಂದು ಶುಚಿಗೊಳಿಸಲು ತಿಳಿಸುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ-ಬಬಲೇಶ್ವರ ಆ.27ರಿಂದ ಎರಡು ಬಸ್ಸುಗಳ ಸೇವೆ ಪ್ರಾರಂಭ

ದಲಿತ ಮುಖಂಡ ಗುಂಡಪ್ಪ ಚಲವಾದಿ ಮಾತನಾಡಿ, “ವಸತಿ ನಿಲಯದ ವಿದ್ಯಾರ್ಥಿಗಳು ತಂದೆ ತಾಯಿಯನ್ನು ಬಿಟ್ಟು, ಓದಲು ಬಂದಿರುತ್ತಾರೆ. ಆದರೆ ವಸತಿ ನಿಲಯದಲ್ಲಿ ಅವರ ಮೂಲಭೂತ ಸಮಸ್ಯೆಗಳ ಆಗರವಾಗಿರುವುದರಿಂದ ಎಷ್ಟೋ ವಿದ್ಯಾರ್ಥಿಗಳು ವಸತಿನಿಲಯ ಬಿಟ್ಟು ಹೋಗಿದ್ದಾರೆ” ಎಂದು ಅಧಿಕಾರಿಗಳ ಗಮನ ಸೆಳೆದರು.

ಈ ವೇಳೆ ವಸತಿನಿಲಯದ ಸಿಬ್ಬಂದಿಗಳಾದ ಶರಣಮ್ಮ ಹುಗ್ಗಿ, ಲಕ್ಕಣ್ಣ ಬಿರಾದಾರ ಹಾಗೂ ಶಿವಪ್ಪ ದೊಡಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...