ಈ ದಿನ.ಕಾಮ್ ವರದಿ ಫಲಶೃತಿ | ಕೊನೆಗೂ ಶತಾಯುಷಿ ಅಜ್ಜಿಯ ಖಾತೆಗೆ ಜಮೆಯಾಯ್ತು ವೃದ್ದಾಪ್ಯ ವೇತನ

Date:

ಭಾಲ್ಕಿ ತಾಲೂಕಿನ ಕಪಲಾಪುರ ಗ್ರಾಮದ ಲಕ್ಷ್ಮೀಬಾಯಿ ಮಹಾಪುರೆ ಎಂಬ 110 ವರ್ಷದ ಅಜ್ಜಿಗೆ ಕೊನೆಗೂ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ದಾಪ್ಯ ವೇತನ ಪಿಂಚಣಿ ಯೋಜನೆಯಡಿ ಮಾಸಿಕ ಪಿಂಚಣಿ ಮಂಜೂರಾಗಿದೆ.

ಲಕ್ಷ್ಮೀಬಾಯಿ ಅಜ್ಜಿಗೆ ಸುಮಾರು 10 ವರ್ಷಗಳಿಂದ ವೃದ್ದಾಪ್ಯ ವೇತನ ಸ್ಥಗಿತವಾಗಿತ್ತು. ಆಧಾರ್ ಕಾರ್ಡ್ ದೇಶದಲ್ಲಿ ಜಾರಿಗೆ ಬರುವುದಕ್ಕೂ ಮುಂಚೆಯಿಂದ ವೃದ್ದಾಪ್ಯ ವೇತನ ಪಡೆಯುತ್ತಿದ್ದ ಅಜ್ಜಿಗೆ, ನೂರು ವರ್ಷ ಪೂರೈಸಿದ ನಂತರ ಅಧಿಕಾರಿಗಳು ವೇತನಕ್ಕೆ ಕತ್ತರಿ ಹಾಕಿದ್ದರು.

ಅಜ್ಜಿಗೆ 110 ವರ್ಷ ವಯಸ್ಸಾದರೂ ಅವರ ಹೆಸರಿಗೆ ಚುನಾವಣೆ ಮತದಾರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಬದುಕಿಗೆ ಯಾವುದೇ ದಾಖಲೆಗಳಿಲ್ಲದೇ, ಸಂಕಷ್ಟದಿಂದ ದಿನ ದೂಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಹಿತಿ ಅರಿತುಕೊಂಡ ʼಈ ದಿನ. ಕಾಮ್‌ʼ ನಲ್ಲಿ 2024ರ ಜನವರಿ 5ರಂದು ʼಶತಾಯುಷಿ ಅಜ್ಜಿಗೆ ಶಾಪವಾಯ್ತು ವಯಸ್ಸು?; ವೃದ್ದಾಪ್ಯ ವೇತನಕ್ಕೆ ಅಧಿಕಾರಿಗಳ ಕತ್ತರಿʼ ಎಂಬ ಶೀರ್ಷಿಕೆಯಡಿ ವಿಸ್ತೃತ ವರದಿ ಪ್ರಕಟವಾಗಿತ್ತು. ಅಲ್ಲದೇ, ವಿಡಿಯೋ ವರದಿ ಕೂಡ ಯೂಟ್ಯೂಬ್‌ನಲ್ಲಿ ಪ್ರಕಟಿಸಿತ್ತು.

ಲಕ್ಷ್ಮಿಬಾಯಿ ಕಪಲಾಪುರೆ
ʼಈದಿನ.ಕಾಮ್‌ʼ ವರದಿ ಪರಿಣಾಮ ಕಂದಾಯ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿದ ವೇಳೆ

ಇದಕ್ಕೆ ಸ್ಪಂದಿಸಿದ ಭಾಲ್ಕಿ ತಾಲೂಕು ಕಂದಾಯ ಇಲಾಖೆಯ ಅಧಿಕಾರಿಗಳು ಮರುದಿನವೇ (ಜ.6) ರಂದು ಕಪಲಾಪುರ ಗ್ರಾಮದ ಇಳಿವಯಸ್ಸಿನ ಲಕ್ಷ್ಮೀಬಾಯಿ ಅವರ ಮನೆಗೆ ದೌಡಾಯಿಸಿ, ಅಜ್ಜಿಯ ಬದುಕಿಗೆ ಯಾವುದೇ ದಾಖಲೆ ಇಲ್ಲ ಎಂಬುದು ಪರಿಶೀಲನೆ ಮೂಲಕ ಖಚಿತಪಡಿಸಿಕೊಂಡು ಹೊಸ ದಾಖಲೆ ಮಾಡಿಕೊಡಲು ನೋಂದಾಯಿಸಿಕೊಂಡಿದ್ದರು. ಆನಂತರ ಆಧಾರ್‌, ಮತದಾರರ ಚೀಟಿ, ಬ್ಯಾಂಕ್‌ ಪಾಸ್‌ ಬುಕ್‌ ಮಾಡಿಸಲು ಕುಟುಂಬಸ್ಥರಿಗೆ ಅಧಿಕಾರಿಗಳು ಸಹಕರಿಸಿ ಕೊನೆಗೆ ಫೆ.26 ರಂದು ವೃದ್ದಾಪ್ಯ ವೇತನ ಮಂಜೂರು ಮಾಡಿದರು.

ಶತಾಯುಷಿ ಅಜ್ಜಿ ಮತದಾನ ಮಾಡಿದರು.
ಲೋಕಸಭಾ ಚುನಾವಣೆಯಲ್ಲಿ ಶತಾಯುಷಿ ಲಕ್ಷ್ಮಿಬಾಯಿ ಮತದಾನ ಮಾಡಿದ ಸಂದರ್ಭ.

ಲಕ್ಷ್ಮೀಬಾಯಿ ಅಜ್ಜಿಗೆ ಚುನಾವಣೆ ಚೀಟಿ ಇಲ್ಲದ ಕಾರಣ ಕಳೆದ 10-15 ವರ್ಷಗಳಿಂದ ಮತದಾನವೇ ಮಾಡಿರಲಿಲ್ಲ. ʼಈ ದಿನ.ಕಾಮ್ʼ ವರದಿಯ ಪರಿಣಾಮ ಹೊಸ ಮತದಾರರ ಗುರುತಿನ ಚೀಟಿ ಬಂದಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಜ್ಜಿ ಗ್ರಾಮದ ಮತಗಟ್ಟೆಗೆ ತೆರಳಿ ಮತದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದರು. ಇದೀಗ ಜುಲೈ 12ರಂದು ಅಂಚೆ ಕಚೇರಿಯಲ್ಲಿರುವ ಲಕ್ಷ್ಮಿಬಾಯಿ ಅವರ ಖಾತೆಗೆ ವೃದ್ದಾಪ್ಯ ವೇತನದ ಒಂದು ತಿಂಗಳ ಹಣ ವರ್ಗಾವಣೆ ಆಗಿದೆ.

ʼನಮ್ಮ ಅಜ್ಜಿಗೆ ನೂರು ವಯಸ್ಸು ದಾಟಿದೆ, ಆದರೆ ಯಾವುದೇ ದಾಖಲೆ ಇಲ್ಲ, ವೃದ್ದಾಪ್ಯ ವೇತನ ಕೂಡ ಬಂದ್‌ ಆಗಿರುವ ಬಗ್ಗೆ ಈ ದಿನ.ಕಾಮ್‌ ಬೀದರ್‌ ಜಿಲ್ಲಾ ವರದಿಗಾರ ಬಾಲಾಜಿ ಕುಂಬಾರ್‌ ಅವರಿಗೆ ಕರೆ ಮೂಲಕ ಮಾಹಿತಿ ನೀಡಿದ್ದೆ. ಅವರು ಖುದ್ದು ಮನೆಗೆ ಭೇಟಿ ವಿಶೇಷ ಸುದ್ದಿ ಪ್ರಕಟಿಸಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರುʼ ಎಂದು ಅಜ್ಜಿಯ ಮೊಮ್ಮಗ ಅಂಬಾದಾಸ ಮಹಾಪುರೆ ಹೇಳುತ್ತಾರೆ.

ಈ ಸುದ್ದಿ ಓದಿದ್ದೀರಾ? ಶತಾಯುಷಿ ಅಜ್ಜಿಗೆ ಶಾಪವಾಯ್ತ ವಯಸ್ಸು?; ವೃದ್ದಾಪ್ಯ ವೇತನಕ್ಕೆ ಅಧಿಕಾರಿಗಳ ಕತ್ತರಿ

ಸುದ್ದಿ ಪ್ರಕಟವಾದ ಬಳಿಕ ಕಂದಾಯ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಎಲ್ಲ ದಾಖಲೆ ಮಾಡಿಸಿ ವೃದ್ದಾಪ್ಯ ವೇತನ ಮತ್ತೆ ಜಾರಿ ಮಾಡುವುದಾಗಿ ಭರವಸೆ ನೀಡಿದ್ದರು. ಇದೀಗ ಅಜ್ಜಿಗೆ ಮೊದಲ ಕಂತಿನ ಹಣ ಬಂದಿದೆ. ಇದರಿಂದ ಅಜ್ಜಿ ಹಾಗೂ ನಮಗೂ ತುಂಬಾ ಖುಷಿಯಾಗಿದೆ. ಇದಕ್ಕೆ ನಿರಂತರವಾಗಿ ನಮ್ಮೊಂದಿಗೆ ಸ್ಪಂದಿಸಿ ಈ ದಿನ.ಕಾಮ್‌ ಮಾಧ್ಯಮ ತಂಡ ಹಾಗೂ ಕಂದಾಯ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...