ಶಾಸಕ ಪ್ರದೀಪ್ ಈಶ್ವರ್ ಸಹಾಯ ಅರಸಿ ಬಂದ ವೃದ್ಧೆ; ಬರಿಗೈನಲ್ಲೇ ವಾಪಸ್

Date:

ಸದ್ಯ ರಾಜ್ಯ ರಾಜಕಾರಣದಲ್ಲಿ ತೆಲುಗು-ಕನ್ನಡ ಮಿಶ್ರಿತ ಡೈಲಾಗ್‌ಗಳಿಂದ ಅಬ್ಬರಿಸಿ ಬೊಬ್ಬಿರಿಯುತ್ತಿರುವವರು ಶಾಸಕ ಪ್ರದೀಪ್ ಈಶ್ವರ್. ಹಳ್ಳಿಗಳನ್ನು ಸುತ್ತುತ್ತ, ಹಲವು ಜನರನ್ನು ಮಾತನಾಡಿಸುತ್ತ, ಅದೆಲ್ಲವಲ್ಲೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಜನಪ್ರಿಯತೆ ಗಳಿಸುತ್ತಿದ್ದಾರೆ. ಅವರು ಇತ್ತೀಚೆಗೆ, ‘ನಮಸ್ತೆ ಚಿಕ್ಕಬಳ್ಳಾಪುರ’ ಕಾರ್ಯಕ್ರಮ ಮಾಡಿ, ಅಸಹಾಯಕರಿಗೆ ಹಣಕಾಸಿನ ನೆರವು ನೀಡುವುದಾಗಿ ಘೋಷಿಸಿದ್ದರು. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದನ್ನು ಗಮನಿಸಿದ್ದ ಕಲಬುರಗಿಯ ಬಡ ವೃದ್ಧೆಯೊಬ್ಬರು ಚಿಕ್ಕಬಳ್ಳಾಪುರಕ್ಕೆ ಬಂದಿದ್ದರು. ಆದರೆ, ಶಾಸಕ ಪ್ರದೀಪ್‌ ಈಶ್ವರ್‌ ಅವರನ್ನು ಭೇಟಿ ಮಾಡಲಾಗದೆ ಬರಿಗೈನಲ್ಲಿ ವಾಪಸ್‌ ಹೋಗಿದ್ದಾರೆ.

ಕಲಬುರಗಿಯ ವೃದ್ಧೆ ಕಮಲಾಬಾಯಿ ಅವರ ಮಗ ಮಂಜುನಾಥ್‌ ಅವರಿಗೆ ಕಳೆದ ವರ್ಷ ಮೆದುಳಿನ ಶಸ್ತ್ರಚಿಕಿತ್ಸೆ ನಡೆದಿತ್ತು. ಶಸ್ತ್ರಚಿಕಿತ್ಸೆಗಾಗಿ ಬಡ ವೃದ್ಧೆ ಮತ್ತು ಆಕೆಯ ಮಗ ಸಾಲ ಮಾಡಿ ಹಣ ಹೊಂದಿಸಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ, ನಂತರದ ದಿನಗಳಲ್ಲಿ ಅವರಿಗೆ ಬದುಕು ಸಾಗಿಸುವುದು ದುಸ್ತರವಾಗಿತ್ತು. ಸಾಲಗಾರರು ಮನೆ ಮುಂದೆ ಬಂದು ಹಣಕ್ಕಾಗಿ ಮತ್ತೆ ಮತ್ತೆ ಪೀಡಿಸುತ್ತಿದ್ದರು.

ವೃದ್ಧೆ ಮತ್ತು ಆಕೆಯ ಮಗ ಮುಖ್ಯಮಂತ್ರಿ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸಿದ್ದರು. ಹಿಂದಿನ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರನ್ನೂ ಭೇಟಿ ಮಾಡಿದ್ದರು. ಆದರೆ, ಅವರಿಗೆ ಒಂದು ರೂಪಾಯಿ ಪರಿಹಾರವಾಗಲಿ, ಸಹಾಯಧನವಾಗಲಿ ಸಿಕ್ಕಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಓದಿದ್ದು ಪಿಯುಸಿ, ವೃತ್ತಿ ಮೆಡಿಕಲ್ ಮೇಷ್ಟ್ರು; ‘ದೈತ್ಯ ಸಂಹಾರಿ’ ಪ್ರದೀಪ್ ಈಶ್ವರ್ ನಿಜಕ್ಕೂ ಎಂಥವರು?

ತಮ್ಮ ಬದುಕು ಇಷ್ಟೇ ಎಂದು ಭಾವಿಸಿ ನಿರಾಶೆಯಲ್ಲಿ ಜೀವನ ದೂಡುತ್ತಿದ್ದ ವೃದ್ಧೆ ಮತ್ತು ಆಕೆಯ ಮಗನಿಗೆ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಪ್ರದೀಪ್ ಈಶ್ವರ್ ಹೊಸ ಭರವಸೆಯಾಗಿ ಕಂಡಿದ್ದರು. ಅವರನ್ನು ಭೇಟಿ ಮಾಡಲು, ಕಲಬುರಗಿಯಿಂದ ಚಿಕ್ಕಬಳ್ಳಾಪುರಕ್ಕೆ 500 ಕಿ.ಮೀ. ಪ್ರಯಾಣ ಮಾಡಿ ಬಂದಿದ್ದರು. ಆದರೆ, ಅವರಿಗೆ ಶಾಸಕ ಪ್ರದೀಪ್‌ ಈಶ್ವರ್‌ ಸಂಪರ್ಕಕ್ಕೆ ಸಿಗಲಿಲ್ಲ. ಪರಿಣಾಮ ಮತ್ತದೇ ನಿರಾಶೆಯಿಂದ ವಾಪಸ್‌ ತೆರಳಿದ್ದಾರೆ.

“ಬಹಳಷ್ಟು ಮಂದಿಗೆ ಶಾಸಕ ಪ್ರದೀಪ್‌ ಈಶ್ವರ್‌ ಸಹಾಯ ಮಾಡುತ್ತಿದ್ದಾರೆಂದು ನಮಗೆ ಗೊತ್ತಾಯಿತು. ಅವರ ನೆರವು ಕೇಳಲು ತಮ್ಮೂರಿಂದ ಚಿಕ್ಕಬಳ್ಳಾಪುರಕ್ಕೆ ಬಂದೆವು. ಆದರೆ, ಅವರು ಸಿಗಲಿಲ್ಲ. ಫೋನ್‌ ಮೂಲಕವೂ ಸಂಪರ್ಕಿಸಿದೆವು, ಅವರು ಫೋನ್‌ ಕರೆಯನ್ನೂ ಸ್ವೀಕರಿಸಲಿಲ್ಲ” ಎಂದು ವೃದ್ಧೆ ಕಮಲಾಬಾಯಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...