ಕೋಲಾರ | ಏ.13ಕ್ಕೆ ಜಾನುವಾರುಗಳೊಂದಿಗೆ ಸಂಸದರ ಕಚೇರಿಗೆ ರೈತರಿಂದ ಮುತ್ತಿಗೆ

Date:

  • ಅಮುಲ್‌ – ನಂದಿನಿ ವಿಲೀನ ವಿರೋಧಿಸಿ ಪ್ರಭಟನೆ
  • ಎಪಿಎಂಸಿ ಆವರಣದಲ್ಲಿ ನಡೆದ ರೈತ ಸಂಘದ ಸಭೆ

ಕೆಎಂಎಫ್‌ನ ನಂದಿನಿ ಮತ್ತು ಅಮುಲ್‌ ವಿಲೀನ ವಿರೋಧಿಸಿ ‘ಗೋ ಬ್ಯಾಕ್‌ ಅಮುಲ್‌’ ಎಂಬ ಘೋಷಣೆಯೊಂದಿಗೆ ಏಪ್ರಿಲ್‌ 13ರಂದು ಜಾನುವಾರುಗಳೊಂದಿಗೆ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೋಲಾರ ನಗರದ ಎಪಿಎಂಸಿ ಆವರಣದಲ್ಲಿ ನಡೆದ ರೈತಸಂಘದ ಸಭೆಯಲ್ಲಿ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌ ಮಾತನಾಡಿ, “ಗೋ ಬ್ಯಾಕ್‌ ಅಮುಲ್‌ ಎಂಬ ಘೋಷಣೆಯೊಂದಿಗೆ ಕನ್ನಡಿಗರ ಆಸ್ತಿ, ರೈತ ಕೂಲಿ ಕಾರ್ಮಿಕರ ಸ್ವಾಭಿಮಾನದ ಬದುಕು ಕಲ್ಪಿಸಿ ಕೊಟ್ಟಿರುವ ನಂದಿನಿ ಹಾಲಿಗೆ ಪರ್ಯಾಯವಾಗಿ, ಗುಜರಾತಿನ ಅಮುಲ್‌ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ಒದಗಿಸಲು ಹೊರಟಿರುವ ಆದೇಶ ವಾಪಸ್‌ ಪಡೆಯದೇ ಇದ್ದರೆ, ಮತ ಕೇಳಲು ಬರುವ ಬಿಜೆಪಿ ನಾಯಕರಿಗೆ ಗ್ರಾಮೀಣ ಪ್ರದೇಶಗಳಲ್ಲಿ ಪೊರಕೆ ಚಳುವಳಿ ಮಾಡಬೇಕಾಗುತ್ತದೆ” ಎಂದು ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ ನಾರಾಯಣಗೌಡ ಮಾತನಾಡಿ, “ಕೋಟ್ಯಾಂತರ ಗ್ರಾಮೀಣ ಪ್ರದೇಶದ ರೈತಾಪಿ ಕುಟುಂಬಗಳಿಗೆ ಸಾಂಕ್ರಾಮಿಕ ರೋಗಗಳು ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಆರ್ಥಿಕವಾಗಿ ಸಂಸಾರದ ಕೈ ಹಿಡಿದ ಏಕೈಕ ಉದ್ಯಮ ಹೈನುಗಾರಿಕೆ. ಅಂತಹ ಉದ್ಯಮವನ್ನೇ ಹೊರ ರಾಜ್ಯದವರು ಕಿತ್ತುಕೊಳ್ಳಲು ಹೊರಟಿರುವುದು ದುರಾದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರದ ಆದೇಶವನ್ನು ತಿರಸ್ಕರಿಸದೆ ಅವರ ಮಾತಿಗೆ ಬೆನ್ನೆಲುಬಾಗಿ ರಾಜ್ಯದ ರೈತರೇ ಅಮುಲ್‌ ಉತ್ಪನ್ನಗಳನ್ನು ಬಯಸಿದ್ದಾರೆಂದು ಹೇಳಿಕೆ ನೀಡುತ್ತಿರುವುದು ನೋಡಿದರೆ, ಮುಂದಿನ ದಿನಗಳಲ್ಲಿ ಕರ್ನಾಟಕವನ್ನೇ ಮಹಾರಾಷ್ಟ್ರಕ್ಕೆ ಮಾರಾಟ ಮಾಡುವ ಕಾಲ ದೂರವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಭಾಷೆಯಿಂದ ಹಿಡಿದು ಆಹಾರದವರೆಗೂ ಕರ್ನಾಟಕವನ್ನೇ ಗುರಿಯಾಗಿಸಿಕೊಂಡಿರುವುದಕ್ಕೆ ಕಾರಣವಾದರೂ ಏನು? ಹಿರಿಯರು ಕಟ್ಟಿ ಬೆಳೆಸಿದಂತಹ ನಂದಿನಿಯನ್ನೇ ಉಳಿಸಿಕೊಳ್ಳಲಾಗದ ಜನಪ್ರತಿನಿಧಿಗಳಿಗೆ ಮಾನ ಮರ್ಯಾದೆ ಇದೆಯೇ? ಇದ್ದರೆ ಕೂಡಲೇ ಅಮುಲ್‌ ತಿರಸ್ಕರಿಸಿ, ರೈತಾಪಿ ವರ್ಗದ ಜೀವನ ಉಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ನಂದಿನಿ – ಅಮೂಲ್‌ ವಿಲೀನ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

“24 ಗಂಟೆಯಲ್ಲಿ ಕನ್ನಡಿಗರ ನಂದಿನಿಯನ್ನು ನಿರ್ಲಕ್ಷ್ಯ ಮಾಡಿ ಅಮುಲ್‌ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಿರುವ ಆದೇಶವನ್ನು ವಾಪಸ್‌ ಪಡೆಯದೇ ಇದ್ದರೆ, ಜಾನುವಾರುಗಳ ಸಮೇತ ಸಂಸದ ಕಚೇರಿ ಏಪ್ರೀಲ್‌ 13ರಂದು ಮುತ್ತಿಗೆ ಹಾಕಿ ನ್ಯಾಯ ಪಡೆದುಕೊಳ್ಳುತ್ತೇವೆ. ನಮ್ಮ ಹೋರಾಟ ನಮ್ಮ ಕನ್ನಡಿಗರ ಆಸ್ತಿಯಾದ ನಂದಿನಿಯ ಉಳಿವಿಗಾಗಿ” ಎಂದು ಹೇಳಿದರು.

ಈ ವೇಳೆ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಫಾರೂಖ್‌ ಪಾಷ, ರಾಜ್ಯ ಕಾರ್ಯಾಧ್ಯಕ್ಷ ಬಂಗಾರಿ ಮಂಜು, ಕೋಲಾರ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ಹೆಬ್ಬಣಿ ಆನಂದರೆಡ್ಡಿ, ಭಾಸ್ಕರ್‌, ರಾಜೇಶ್‌, ಆದಿಲ್‌ ಪಾಷ, ವಿಜಯ್‌ ಪಾಲ್‌, ಜುಬೇರ್‌ ಪಾಷ, ಪದ್ಮಘಟ್ಟ ಧರ್ಮ, ನಂಗಲಿ ನಾಗೇಶ್‌, ಗಿರೀಶ್‌, ರಾಮಸಾಗರ ವೇಣು, ಮಾಸ್ತಿ ವೆಂಕಟೇಶ್‌, ಯಲ್ಲಣ್ಣ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...