ರಾಯಚೂರು | ನ.03 ರಂದು ಸರ್ಕಾರಿ ನೌಕರ ಒಕ್ಕೂಟದಿಂದ ʼದೆಹಲಿ ಚಲೋʼ

Date:

  • ಎನ್‌ಪಿಎಸ್ ಜಾರಿಗೊಳಿಸಿದಾಗಿನಿಂದ ಸರ್ಕಾರಿ ನೌಕರರಿಗೆ ಜೀವನ ಭದ್ರತೆಯೇ ಕಳದು ಹೋಗಿದೆ.
  • ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿ ವಿರುದ್ದ ನಡೆಯಲಿರುವ ದೆಹಲಿ ಚಲೋ ಆಯೋಜನೆ

ಹಳೆ ಪಿಂಚಣಿ ಯೋಜನೆಯನ್ನು ಪುನರ್ ಪ್ರಾರಂಭ, ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರ ಒಕ್ಕೂಟವು ನ.03 ರಂದು ‘ದೆಹಲಿ ಚಲೋ’ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಒಕ್ಕೂಟದ ಕಾರ್ಯಾಧ್ಯಕ್ಷೆ ಶೋಭಾ ಲೋಕನಾಗಣ್ಣ ಹೇಳಿದರು.

ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಗಳಿಂದ ಸರ್ಕಾರಿ ನೌಕರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆಲೆ ಏರಿಕೆಯಿಂದಾಗಿ ಜೀವನ ನಿರ್ವಹಣೆ ದುಬಾರಿಯಾಗುತ್ತಿರುವಾಗ ಖಾಸಗೀಕರಣದಿಂದ ಉದ್ಯೋಗ ಭದ್ರತೆ ಕಳೆದು ಹೋಗುವಂತಾಗಿದೆ. ಎನ್‌ಪಿಎಸ್ ಜಾರಿಗೊಳಿಸಿದಾಗಿನಿಂದ ಸರ್ಕಾರಿ ನೌಕರರಿಗೆ ಜೀವನ ಭದ್ರತೆಯೇ ಕಳದು ಹೋಗಿದೆ. ಕೇಂದ್ರ ಸರ್ಕಾರ ಪಿಎಫ್‌ಆರ್‌ಡಿ ಕಾಯ್ದೆಯನ್ನು ರದ್ದುಗೊಳಿಸಿ ಹಳೆ ಪಿಂಚಣ ಯೋಜನೆಯನ್ನು ಮರು ಜಾರಿಗೊಳಿಸಬೇಕಾದ ಅವಶ್ಯಕತೆಯಿದೆ” ಎಂದು ಆಗ್ರಹಿಸಿದರು.

“ಅನೇಕ ಹೋರಾಟ ನಡೆಸಿದಾಗಲೂ ಕೇಂದ್ರ ಸರ್ಕಾರ ನೌಕರರ ಸಂಕಷ್ಟ ಕೇಳಲು ಸಿದ್ದವಿಲ್ಲ. ಬದಲಾಗಿ ಸರ್ಕಾರಿ ವೇತನ, ಭತ್ಯೆಗಳು ಸರ್ಕಾರಕ್ಕೆ ಹೊರೆ ಎಂದು ಭಾವಿಸಿಕೊಂಡಿವೆ. ನೌಕರರ ವೇತನದಲ್ಲಿಯೇ ಹಣ ಪಡೆದು ನಿಶ್ಚಿತ ಪಿಂಚಣ ಯೋಜನೆ ಜಾರಿಗೊಳಿಸಿದೆ. ಎನ್‌ಪಿಎಸ್ ಜಾರಿಗೊಳಿಸಿದ ನಂತರ ಅನೇಕರಿಗೆ ಇಂದಿಗೂ ಪಿಂಚಣ ಹಣ ಬಂದಿಲ್ಲ. ಇನ್ನೂ 2022 ರಿಂದಲೇ ಜಾರಿಗೊಳ್ಳಬೇಕಾಗಿದ್ದ ಏಳನೇ ವೇತನ ಆಯೋಗ ಶಿಫಾರಸ್ಸು ಇಂದಿಗೂ ಜಾರಿಗೊಂಡಿಲ್ಲ. 2016 ರಲ್ಲಿ ಸುಪ್ರಿಂಕೋರ್ಟ ಗುತ್ತಿಗೆ, ದಿನಗೂಲಿ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ದೇಶದಾದ್ಯಂತ 60 ಲಕ್ಷ ಹುದ್ದೆಗಳು ಖಾಲಿ ಉಳಿದಿವೆ. ಸರ್ಕಾರಗಳು ಕಡಿಮೆ ವೇತನ ನೀಡಿ ನೌಕರರ ಶೋಷಣೆ ಮಾಡುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಜಯ ಭಾಸ್ಕರ ನೇತೃತ್ವದ ಆಡಳಿತ ಸುಧಾರಣಾ ಆಯೋಗ ಎರಡನೇ ವರದಿ ಸಲ್ಲಿಕೆಯಾಗಿದ್ದು, ಸರ್ಕಾರಿ ಇಲಾಖೆಗಳನ್ನು ಖಾಸಗೀಕರಣಗೊಳಿಸಲು ಶಿಫಾರಸ್ಸು ಮಾಡಿರುವದು ಅಘಾತಕಾರಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿ ವಿರುದ್ದ ನಡೆಯಲಿರುವ ದೆಹಲಿ ಚಲೋ ಕಾರ್ಯಕ್ರಮದ ಪೂರ್ವಭಾವಿಯಾಗಿ ಒಕ್ಕೂಟ ರಾಜ್ಯಾದ್ಯಂತ ಜಾಗೃತಿ ವಾಹನ ಜಾಥಾ ನಡೆಸಲಾಗುತ್ತದೆ. ನೌಕರರು ಹೆಚ್ಚಿನಸಂಖ್ಯೆಯಲ್ಲಿ ಭಾಗವಹಿಸುವಂತೆ” ಅವರು ಮನವಿ ಮಾಡಿದರು.

ಒಕ್ಕೂಟದ ಗೌರವಾಧ್ಯಕ್ಷ ಮಹಾದೇವಯ್ಯ ಮಠಪತಿ ಮಾತನಾಡಿ, “ಕೇಂದ್ರದ ಪಿಎಫ್‌ಆರ್‌ಡಿ ಕಾಯೆಯಿಂದಲೇ ನೌಕರರು ಅನೇಕ ಸಮಸ್ಯೆಗಳು ಎದುರಿಸಲು ಕಾರಣವಾಗಿದುದ ಕಾಯ್ದೆಯನ್ನು ರದ್ದುಗೊಳಿಸಬೇಕು. ಎನ್‌ಪಿಎಸ್ ರದ್ದುಗೊಳಿಸಿರುವ ರಾಜ್ಯಗಳು ಸೇರಿದಂತೆ ಎಲ್ಲಾ ರಾಜ್ಯಗಳ ನೌಕರರ ಸಂಘಟನೆಗಳು ದೆಹಲಿ ಚಲೋದಲ್ಲಿ ಭಾಗವಹಿಸಲಿವೆ. ಎನ್‌ಪಿಎಸ್ ರದ್ದುಗೊಳಿಸಿ ನಿಶ್ಚಿತ ಪಿಂಚಣ ಯೋಜನೆ ಜಾರಿಗೆ ಸರ್ಕಾರ ಮುಂದಾಗಬೇಕೆಂದು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಸ್‌ಬಿಐನಲ್ಲಿ ಪ್ರತ್ಯೇಕ ನಗದು ಕೌಂಟರ್‌ ತೆರೆಯುವಂತೆ ಆಗ್ರಹ

ಈ ಸಂದರ್ಬದಲ್ಲಿ ಸಂಘಧ ಜಿಲ್ಲಾಧ್ಯಕ್ಷ ತಾಯರಾಜ ಮರ್ಚಟ್ಹಾಳ, ಕಾರ್ಯದರ್ಶಿ ಮೊಯಿನುದ್ದೀನ್, ರಾಜ್ಯ ಮುಖಂಡರುಗಳಾದ ಅಮರೇಶಪ್ಪ, ನಾರಾಯಣ, ಬಸವರಾಜ ಉಪಸ್ಥಿತರಿದ್ದರು.

ವರದಿ : ಹಫೀಜುಲ್ಲ, ಸಿಟಿಜನ್‌ ಜರ್ನಲಿಸ್ಟ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...