ಉಡುಪಿ | ತನಗಿಂತ ತನ್ನ ದೇಶಮೊದಲೆಂದು ಬದುಕಿದ ಒನಕೆ ಓಬವ್ವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ : ಕೋಟ ಶ್ರೀನಿವಾಸ್ ಪೂಜಾರಿ

Date:

ಮುದ್ದ ಹನುಮ ಎಂಬ ಒಬ್ಬ ಸಾಮಾನ್ಯ ಕಾವಲುಗಾರನ ಹೆಂಡತಿ ಓಬವ್ವ ತನ್ನ ರಾಜ್ಯಕ್ಕೆ ಶತ್ರುಗಳಿಂದ ಗಂಡಾಂತರ ಉಂಟಾಗುವ ಸಂದರ್ಭ ಬಂದಾಗ ತನ್ನ ಪ್ರಾಣವನ್ನೂ ಲೆಕ್ಕಿಸದೆ ಮಾತೃಭೂಮಿಗಾಗಿ ಒನಕೆ ಹಿಡಿದು ಶತ್ರುಗಳನ್ನು ಸದೆಬಡಿದು ರಾಜ್ಯದ ರಕ್ಷಣೆ ಮಾಡುತ್ತಾಳೆ. ಆಕೆಯ ಅಪ್ರತಿಮ ಸಾಹಸಕ್ಕಾಗಿ ಇತಿಹಾಸಕಾರರು ಆಕೆಯನ್ನು ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕನಂತಹ ವೀರ ಮಹಿಳೆಯರ ಸಾಲಿನಲ್ಲಿ ನಿಲ್ಲಿಸುತ್ತಾರೆ. ತನಗಿಂತ ತನ್ನ ದೇಶ ಮೊದಲೆಂದು ಬದುಕಿದ ಇಂತಹ ವೀರವನಿತೆ ಓಬವ್ವನ ತ್ಯಾಗ, ದೇಶ ಪ್ರೇಮ, ಸ್ವಾಮಿನಿಷ್ಠೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಇಂದು ನಗರದ ಮಣಿಪಾಲ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಒನಕೆ ಓಬವ್ವ ಆತ್ಮರಕ್ಷಣೆಯ ಪ್ರತೀಕ. ಹೆಣ್ಣುಮಕ್ಕಳು ತಮ್ಮ ಆತ್ಮ ರಕ್ಷಣೆಯ ಜೊತೆಗೆ ತನ್ನ ಪ್ರಾಂತ್ಯ, ರಾಜ್ಯ ಮತ್ತು ದೇಶಕ್ಕೋಸ್ಕರ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಹೋರಾಡುತ್ತಾರೆ ಎನ್ನುವುದಕ್ಕೆ ಒನಕೆ ಓಬವ್ವ ಸಾಕ್ಷಿ. ಚಿತ್ರದುರ್ಗದ ಕಲ್ಲಿನ ಕೋಟೆ ಕಂಡಾಗಲೆಲ್ಲಾ ಓಬವ್ವನ ಸ್ಮರಣೆಯಾಗುತ್ತದೆ. ಆಕೆಯ ತ್ಯಾಗ, ಬಲಿದಾನ ಮತ್ತು ಸಮರ್ಪಣೆಯನ್ನು ಸ್ಮರಿಸುವ ಸಲುವಾಗಿ ಸರ್ಕಾರವು ಒನಕೆ ಓಬವ್ವಳ ಜಯಂತಿಯನ್ನು ಆಚರಿಸಿ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮದ ಭಾವವನ್ನು ಬಿತ್ತುತ್ತಿರುವುದು ಸಂತೋಷದ ವಿಚಾರ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಚಿವನಾಗಿದ್ದಾಗ ಹೆಣ್ಣು ಮಕ್ಕಳು ತಮ್ಮ ಆತ್ಮರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದ 800 ಶಾಲೆಗಳು ಮತ್ತು 3500 ಹಾಸ್ಟೆಲ್ ಗಳಲ್ಲಿ ಕರಾಟೆ ಕಲಿಸಲು ಮುಂದಾದಾಗ ಅದಕ್ಕೆ ಯಾವ ಹೆಸರಿಡುವುದು ಎನ್ನುವ ಚರ್ಚೆ ನಡೆದಾಗ ಎಲ್ಲರ ಅಭಿಮತವೂ ಒನಕೆ ಓಬವ್ವನ ಹೆಸರಿಡುವುದು ಸೂಕ್ತ ಎಂದಾಗಿತ್ತು. ವಿದ್ಯಾರ್ಥಿನಿಯರ ಆತ್ಮರಕ್ಷಣಾ ಕಲಿಕೆಗೆ ಸರ್ವಾನುಮತದಿಂದ ಒನಕೆ ಓಬವ್ವನ ಹೆಸರನ್ನು ಇಟ್ಟು ಆಕೆಯ ಹೆಸರನ್ನು ಚಿರಸ್ಥಾಯಿಯಾಗಿಸುವ ಪ್ರಯತ್ನ ಮಾಡಿದ್ದೆ. ಜಾತಿ, ಮತ, ನಾನು-ನನ್ನದು ಎನ್ನುವುದಕ್ಕಿಂತ ಭಾರತ ಮೊದಲು ಎನ್ನುವ ಭಾವನೆ ವಿದ್ಯಾರ್ಥಿಗಳಲ್ಲಿ ಮೊಳೆಯಬೇಕು ಅದಕ್ಕೆ ಒನಕೆ ಓಬವ್ವ ಜಯಂತಿ ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಕುತಂತ್ರದಿಂದ ಚಿತ್ರದುರ್ಗದ ಕೋಟೆಗೆ ಒಳನುಸುಳಿದ ಹೈದರಾಲಿಯ ಸೈನ್ಯದ ವಿರುದ್ಧ ದಿಟ್ಟತನದಿಂದ ಹೋರಾಡಿದ ವೀರವನಿತೆ ಒನಕೆ ಓಬವ್ವರ ಧೈರ್ಯ, ದೇಶ ಪ್ರೇಮ, ಸದಾ ಸ್ಮರಣೀಯವಾಗಿರುವುದರ ಜೊತೆಗೆ ಸ್ರ್ರೀ ಶಕ್ತಿಯ ಸಂಕೇತವಾಗಿ ಇಂದಿಗೂ ಮಹಿಳೆಯರಿಗೆ ಓಬವ್ವಳ ಹೋರಾಟದ ಮನೋಭಾವ ಸದಾ ಸ್ಫೂರ್ತಿದಾಯಕವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಸಮಾಜಕ್ಕೆ ಮಹನೀಯರು, ಮಹಿಳೆಯರು ನೀಡಿದ ಕೊಡುಗೆ, ತ್ಯಾಗ, ಬಲಿದಾನ, ಸಾಧನೆಗಳ ಸಾರ್ಥಕ ಸೇವೆ ಗುರುತಿಸಿ ಜಯಂತಿ ಕಾರ್ಯಕ್ರಮವನ್ನು ಅಯೋಜಿಸಲಾಗುತ್ತಿದೆ ಇಂದಿನ ಯುವ ಪೀಳಿಗೆಯು ಮಹನೀಯರ ಮಹತ್ವವನ್ನು ಅರಿತು ಅವರ ತತ್ವ ಆದರ್ಶಗಳನ್ನು ಪಾಲಿಸುವಂತಾಗಬೇಕು ಎಂದರು.

ಕುಂದಾಪುರದ ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಒನಕೆ ಓಬವ್ವರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಸುಬ್ರಮಣ್ಯ ಶೆಟ್ಟಿ, ಮಣಿಪಾಲ ಹೈಸ್ಕೂಲ್ ಟ್ರಸ್ಟ್ ಹಾಗೂ ಮಣಿಪಾಲ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲ ನಾಗೇಂದ್ರ ಪೈ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು, ವರ್ಷಾ ನಿರೂಪಿಸಿ, ಕಾಲೇಜಿನ ಹಿರಿಯ ಶಿಕ್ಷಕ ಸಚ್ಚಿದಾನಂದ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...