ರಾಯಚೂರು | ಒಂದು ಮತ ದೇಶದ ಪಥ ಬದಲಾಯಿಸಬಲ್ಲದು: ಸಾಹಿತಿ ಸುರೇಶ ಬಳಗಾನೂರು

Date:

  • ಪ್ರಜಾಪ್ರಭುತ್ವ ಉಳಿವಿಗೆ ಚುನಾವಣೆಗಲೇ ಜೀವಾಳ
  • ಭಾರತದ ಸಂವಿಧಾನ ಎಲ್ಲರಿಗೂ ಸಮಾನ ಮತದಾನದ ಹಕ್ಕು ನೀಡಿದೆ.

ಚುನಾವಣೆಗಳೇ ಪ್ರಜಾಪ್ರಭುತ್ವದ ಜೀವಾಳ, ಪ್ರಜಾಪ್ರಭುತ್ವದ ರಥ ಮುಂದೆಸಾಗಲು ಚುನಾವಣೆಗಳು ಅಗತ್ಯವಾಗಿವೆ. ನೀವು ನೀಡುವ ಒಂದು ಮತದಿಂದ ದೇಶದ ಪಥ ಬದಲಾಯಿಸಬಲ್ಲದು ಎಂದು ಸಾಹಿತಿ ಉಪನ್ಯಾಸಕ ಸುರೇಶ ಬಳಗಾನೂರು ಹೇಳಿದರು.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮೆದಿಕಿನಾಳ ಗ್ರಾಮದ ದೇವರಾಜ ಅರಸು ಮೆಟ್ರಿಕ್ ಪೂರ್ವ ವಸತಿ ನಿಲಯದ ಆವರಣದಲ್ಲಿ ದೇವನಾಂಪ್ರಿಯ ಅಶೋಕ ಸರಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ ರಾಯಚೂರು ವಿಶ್ವ ವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದಲ್ಲಿ ಮತದಾನದ ಮಹತ್ವ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

“ಮತದಾನದ ಹಕ್ಕನ್ನು ಪಡೆಯಲು ಹಿಂದೆ ಕ್ರಾಂತಿಗಳೇ ನಡೆದಿವೆ. ಬ್ರಿಟನ್, ಅಮೇರಿಕಾ ಮುಂತಾದ ರಾಷ್ಟ್ರಗಳಲ್ಲಿ ಸರ್ವರಿಗೂ ಸಮನಾದ ಮತದಾನದ ಹಕ್ಕು ಇಲ್ಲ. ಆದರೆ ಭಾರತದ ಸಂವಿಧಾನ ನಮಗೆ ಸಮಾನ ಮತದಾನದ ಹಕ್ಕನ್ನು ನೀಡಿದೆ. ಅದನ್ನು ಸರಿಯಾಗಿ ಬಳಸಿ ದೇಶದ ಪ್ರಗತಿಗೆ ನಾಂದಿಹಾಡಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಸ್ಕಿಯ ಖ್ಯಾತ ವೈಧ್ಯ, ಶಿಕ್ಷಣಪ್ರೇಮಿ ಡಾ.ಶಿವಶರಣಪ್ಪ ಇತ್ಲಿ ಮಾತನಾಡಿ, “ಮತದಾನ ನಮ್ಮೆಲ್ಲರ ಹಕ್ಕು , ಅದನ್ನುಸರಿಯಾಗಿ ಅರಿಯುವ ಮೂಲಕ ದೇಶದ ಪ್ರಗತಿಗೆ ಕಾರಣೀಕರ್ತರಾಗಬೇಕು. ದೇಶದ ಅಳಿವು ಉಳಿವು ನಿಮ್ಮ ಕೈಯಲ್ಲಿದೆ ಎಂದು ಶಿಬಿರಾರ್ಥಿಗಳಿಗೆ ಕಿವಿಮಾತು” ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಶಿವಗ್ಯಾನೆಪ್ಪ ಲಕ್ಕುಂದಿ,ಸಹಾಯಕ ಪ್ರಾಧ್ಯಾಪಕರುಗಳಾದ ಶ್ರೀನಿವಾಸ ಯಾಳಗಿ, ವೀರೇಶ ಜಂಗಮರ ಹಳ್ಳಿ, ಲಾಲ್ ಸಾಬ್, ಡಾ.ಪಂಪಾಪತಿ , ಡಾ.ದೇವಪ್ಪ ಹೆಬ್ಬಾಳ, ಡಾ.ವಿಶ್ವನಾಥ ಬೆಲ್ಲದ, ಹುಚ್ಚೇಶ ನಾಗಲೀಕರ, ಪ್ರಭುದೇವ ಸಾಲಿಮಠ, ಈರಣ್ಣ ಗೌಡ, ಏಲಕಿಯಾ, ಕನ್ಯಾಕುಮಾರಿ, ಸೈಯದ್ ಅಲಿ, ಹಸೇನಪ್ಪ, ಶಾಲಾ ಅಭಿವೃದ್ಧಿ ಮಂಡಳಿಯ ಸದಸ್ಯರು ಸೇರಿದಂತೆ ಶಿಬಿರಾರ್ಥಿಗಳು, ವಸತಿ ನಿಲಯದ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...