ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಕ್ಕೆ ವಿರೋಧ; ಪ್ರತಿಭಟನೆ

Date:

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ ಸರ್ಕಾರದ ನಿಲುವನ್ನು ವಿರೋಧಿಸಿ, ಆದೇಶವನ್ನು ಹಿಂಪಡೆಯುಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು, ಎಐಟಿಯುಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, “ಮಕ್ಕಳಿಗೆ ಪೌಷ್ಟಿಕ ಆಹಾರ, ಆರೋಗ್ಯದ ಸವಲತ್ತುಗಳು ಮತ್ತು ಆರಂಭಿಕ ಶಿಕ್ಷಣ ನೀಡುವುದಕ್ಕಾಗಿಯೇ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ. ಈಗ 4 ವರ್ಷದ ಮೇಲ್ಪಟ್ಟ ಮಕ್ಕಳು ಸರ್ಕಾರಿ ಶಾಲೆಗೆ ಹೋದರೆ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಲ್ಲದೆ ಕೇಂದ್ರಗಳನ್ನು ಮುಚ್ಚಬೇಕಾಗುತ್ತದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಶಿಕ್ಷಣ ಇಲಾಖೆ ಈಗ ಪ್ರಾರಂಭಿಸುವ ಎಲ್‌ಕೆಜಿ, ಯುಕೆಜಿಗೆ ದಾಖಲಾಗುವ ಮಕ್ಕಳು ಐಸಿಡಿಎಸ್‌ನಲ್ಲಿ ಈಗಾಗಲೇ ದಾಖಲಾಗಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಹೇಳಿಕೊಡುವ ಅನೌಪಚಾರಿಕ ಶಿಕ್ಷಣವನ್ನು ಮತ್ತು ಇಂಗ್ಲಿಷ್ ವರ್ಣಮಾಲೆ ಹಾಗೂ ಪದಗುಂಚಗಳನ್ನು ಮಾತ್ರವೇ ಭೋದಿಸುವುದು ಇದೆ. ಮಕ್ಕಳ ಅಪೌಷ್ಟಿಕತೆಯಡೆಗೆ ಅವರ ಗಮನವಿರುವುದಿಲ್ಲ. ಅಂಗನವಾಡಿ ಕೇಂದ್ರ ಪೂರ್ವ ಪ್ರಾಥಮಿಕ ಶಿಕ್ಷಣ ಮತ್ತು ಪೌಷ್ಠಿಕತೆ ಎರಡರ ಬಗ್ಗೆಯೂ ಕಾಳಜಿ ವಹಿಸಲಾಗುತ್ತದೆ” ಎಂದು ಪ್ರತಿಭಟನಾಕಾರರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಣ ಇಲಾಖೆಯಲ್ಲಿ ಪಿಯುಸಿ, ಡಿಎಡ್ ಮಾಡಿರುವ ಯುವಕ-ಯುವತಿಯರನ್ನು ಅತಿಥಿ ಶಿಕ್ಷಕರು ಎಂದು ನೇಮಿಸಲು ಸೂಚಿಸಲಾಗಿದೆ. ಈಗಿನ ಯುವಕ-ಯುವತಿಯರು 30 ಮಕ್ಕಳನ್ನು ನೋಡಿಕೊಳ್ಳಲು ಪ್ರಾಯೋಗಿಕವಾಗಿ ಸಾಧ್ಯವಿದೆಯೇ? ಮಾತ್ರವಲ್ಲ, ಅವರಿಗೆ ಇಂಗ್ಲಿಷ್ ನೈಪುಣ್ಯತೆ ಇರಲು ಸಾಧ್ಯವೇ” ಎಂದು ಪ್ರಶ್ನಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು 40% ಪಿಯುಸಿ, ಬಿಎ ಮತ್ತು ಎಂಎ ಪದವಿಗಳನ್ನೊಂದಿದ್ದಾರೆ. ತಾಯಿ ಮನಸ್ಸಿನ ಅನುಭವವಿದೆ. ಅವರು ಮಕ್ಕಳೊಂದಿಗೆ ಒಡನಾಟ ಮಾಡುವುದನ್ನು ಹೊಸದಾಗಿ ಬರುವವರಿಗೂ ಬದ್ದತೆಯಲ್ಲಿ ವ್ಯತ್ಯಾಸವಿದೆಯಲ್ಲವೇ” ಎಂದಿದ್ದಾರೆ

“ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ 26 ಸಾವಿರ ಶಿಕ್ಷಕರಿಲ್ಲ, ಶಾಲಾ ಕಟ್ಟಡಗಳಿಲ್ಲದ ಪರಿಸ್ಥಿತಿಗಳಿವೆ. ಸರ್ಕಾರ ಈಗಾಗಲೇ ಆರ್ಥಿಕ ಮುಗ್ಗಟ್ಟಿನಲ್ಲಿರುವಾಗ ನಕಲು ಯೋಜನೆಗಳಿಂದ ಇರುವ ಮೂಲ ಯೋಜನೆಗೆ ಧಕ್ಕೆಯಾಗುತ್ತಿದೆ. ಇತ್ತೀಚೆಗೆ, ಕೆಕೆಆರ್‌ಡಿಬಿಯಲ್ಲಿ ಇರುವ ಹಣವನ್ನು ಉಪಯೋಗಿಸಬಹುದು ಎಂದು ಆದೇಶಿಸಲಾಗಿದೆ. ಆದರೆ, ಈ ಹಣ ನಿರಂತರವಾಗಿ ಇರುವ ಖಾತ್ರಿಯಿಲ್ಲ. ಹಣವಿಲ್ಲದೆ ಇದ್ದಾಗ ನಿರ್ವಹಣೆ ಹೇಗೆ ಸಾಧ್ಯ” ಎಮದು ಆಕ್ರೋಶ ವ್ಯಕ್ತಪಡಿಸಿದರು.

“ಅಂಗನವಾಡಿ ಕೇಂದ್ರಗಳಿಗೆ ಬರುವ 3 ರಿಂದ 6 ವರ್ಷದ ಮಕ್ಕಳಲ್ಲಿ 4 ರಿಂದ 6 ವರ್ಷದ ಮಕ್ಕಳು ಶಾಲೆಗಳಿಗೆ ಬಂದರೆ, ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳು ಯಾರು? ಆಗ ಅಂಗನವಾಡಿ ಕೇಂದ್ರಗಳು ಮುಚ್ಚಿ ಹೋಗುತ್ತವೆ. ಕೆಕೆಆರ್‌ಡಿಬಿಯಡಿ ಎಲ್‌ಕೆಜಿ ಪ್ರಾರಂಭಿಸುವ ಆದೇಶವನ್ನು ರದ್ದುಗೊಳಿಸಬೇಕು. 1008 ಅಂಗನವಾಡಿ ಕೇಂದ್ರಗಳನ್ನು ಗುರ್ತಿಸಿ, ಅಲ್ಲಿಯೇ ಈ ತರಗತಿಗಳನ್ನು ಪ್ರಾರಂಭಿಸಲು ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷೆ ಹೆಚ್.ಪದ್ಮಾ. ಸುಲೋಚನಾ, ರಂಗಮ್ಮ ಅನ್ವರ್, ಲಲಿತಾ ವರಲಕ್ಷ್ಮೀ, ಸರಸ್ವತಿ, ರಮಾದೇವಿ, ಲಕ್ಷ್ಮಿ ನಗನೂರು, ಇಂದಿರಾ, ಗೋಕಾರಮ್ಮ, ಕೆ.ಜಿ.ವಿರೇಶ, ಎಐಟಿಯುಸಿ ಮುಖಂಡÀ ಡಿ.ಹೆಚ್.ಕಂಬಳಿ, ಸೂಗಯ್ಯಸ್ವಾಮಿ, ಡಿ.ಎಸ್.ಶರಣಬಸವ, ಗಿರಿಯಪ್ಪ, ಜಿಲಾನಿಪಾಷ ಸೇರಿದಂತೆ ನೂರಾರು ಮಹಿಳೆಯರು ಇದ್ದರು .

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...