ಮಂಡ್ಯ | ಹಿಂದಿ ಹೇರಿಕೆಗೆ ವಿರೋಧ; ರಾಜ್ಯ ಪಠ್ಯಕ್ರಮದಲ್ಲಿ ಹಿಂದಿ ಪಾಠಗಳನ್ನು ಕೈಬಿಡಲು ಒತ್ತಾಯ

Date:

ಉತ್ತರ ಭಾರತದಲ್ಲಿ ಇಲ್ಲದಿರುವ ತ್ರಿಭಾಷಾ ಸೂತ್ರವನ್ನು ಕೇವಲ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ಇದರಿಂದ ಕನ್ನಡ ಮಕ್ಕಳಿಗೆ ಯಾವುದೇ ಪ್ರಯೋಜನವಿಲ್ಲದಿದ್ದರೂ, ಹಿಂದಿಯನ್ನು ಕಲಿಯಲು ಕಡ್ಡಾಯಗೊಳಿಸಲಾಗುತ್ತಿದೆ. ಹಿಂದಿ ಕಲಿತರೆ ಉದ್ಯೋಗ ಮತ್ತು ಪ್ರವಾಸಕ್ಕೆ ಸಹಾಯಕವೆಂಬ ನಕಲಿ ಪ್ರಚಾರ ಮಾಡಲಾಗುತ್ತಿದೆ. ವಾಸ್ತವದಲ್ಲಿ ಉತ್ತರದ ರಾಜ್ಯಗಳ ಲಕ್ಷಾಂತರ ನಿರುದ್ಯೋಗಿಗಳು ಕರ್ನಾಟಕಕ್ಕೆ ವಲಸೆ ಬಂದು ಉದ್ಯೋಗ ಹುಡುಕುತ್ತಿದ್ದಾರೆ. ಹೀಗಿರುವಾಗ, ಹಿಂದಿ ಕಲಿಕೆಯಿಂದ ಕನ್ನಡಿಗರಿಗೆ ಯಾವುದೇ ಉಪಯೋಗವಿಲ್ಲ ಎಂದು ಕರುನಾಡ ಸೇವಕರು ಸಂಘಟನೆಯ ಮೈಸೂರು ವಿಭಾಗದ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ವಿರೋಧ ವ್ಯಕ್ತಪಡಿಸಿದರು.

ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹಿಂದಿ ಪಾಠಗಳನ್ನು ಕೈಬಿಡುವಂತೆ ಹಾಗೂ ಕೇಂದ್ರ ಸರಕಾರದ ಬ್ಯಾಂಕುಗಳು, ರೈಲು ಹಾಗೂ ಅಂಚೆ ಇಲಾಖೆಗಳಂತಹ ವಿವಿಧ ಕ್ಷೇತ್ರಗಳಲ್ಲಿ ಹಿಂದಿ ಹೇರಿಕೆಯನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಿಂದ ಪ್ರತಿವರ್ಷ 4 ಲಕ್ಷ ಕೋಟಿ ತೆರಿಗೆ ಹಣ ಒಕ್ಕೂಟ ಸರಕಾರಕ್ಕೆ ಹೋಗುತ್ತಿದೆ. ಆದರೆ ಜಿಎಸ್‌ಟಿ ಪಾಲಿನಲ್ಲಿ ಕರ್ನಾಟಕಕ್ಕೆ ನ್ಯಾಯ ಒದಗಿಸುತಿಲ್ಲ. ಒಕ್ಕೂಟ ಸರಕಾರವು ಬ್ಯಾಂಕುಗಳು, ರೈಲು ಮತ್ತು ಅಂಚೆ ಇಲಾಖೆಗಳ ಮೂಲಕ ಹಿಂದಿ ಹೇರಿಕೆಯನ್ನು ಮುಂದುವರಿಸುತ್ತಿವೆ. ಜೊತೆಗೆ ಅನಿಯಂತ್ರಿತ ವಲಸೆಯಿಂದ ನಾಡಿನ ರಾಜಕೀಯ ಹಾಗೂ ಭೌಗೋಳಿಕ ಪರಿಸರದ ಮೇಲೆ ದುಷ್ಪರಿಣಾಮ ಅನುಭವಿಸುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಕುರಿತಾಗಿ ನಿರ್ಣಯ ಕೈಗೊಳ್ಳುಬೇಕು. ರಾಜ್ಯ ಪಠ್ಯಕ್ರಮದಲ್ಲಿ ಹಿಂದಿ ಪಾಠಗಳನ್ನು ಕೈಬಿಡಬೇಕೆಂಬ ನಿರ್ಣಯವನ್ನು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದಲ್ಲಿ ಜಾರಿಗೊಳಿಸಬೇಕಾಗಿದೆ ಎಂದು ಒತ್ತಾಯಿಸಿದರು.

ಹಿಂದಿ ಹೇರಿಕೆ ವಿರೋಧಿಸಿ ಹೋರಾಟವನ್ನು ಕೈಗೊಳ್ಳಲು ಬೃಹತ್ ಪ್ರಚಾರದ ಯೋಜನೆಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಒಂದು ಲಕ್ಷ ಕರಪತ್ರ, ಪೋಸ್ಟರ್, ಟೀ ಶರ್ಟ್ ಮುದ್ರಿಸಿ ಹಂಚುವುದು, ಕಾಲೇಜುಗಳಲ್ಲಿ ಜಾಗೃತಿ ಕಾರ್ಯಾಗಾರಗಳನ್ನು ಆಯೋಜಿಸುವುದು ಮತ್ತು ವಿದ್ಯಾರ್ಥಿಗಳ ಬೈಕ್ ರ್‍ಯಾಲಿಗಳನ್ನು ಹಮ್ಮಿಕೊಳ್ಳುವುದು ಎಂದು ತೀರ್ಮಾನಿಸಲಾಯಿತು.

ರಾಜ್ಯ ಶಿಕ್ಷಣದಲ್ಲಿ ಹಿಂದಿ ಹೇರಿಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಕನ್ನಡಪರ ಸಂಘಟನೆಗಳು ಈ ಹೋರಾಟಕ್ಕೆ ಮತ್ತಷ್ಟು ಬಲ ನೀಡಲು ತೀರ್ಮಾನಿಸಿದ್ದವು. ಹಿಂದಿ ಭಾಷಾ ಹೇರಿಕೆಯನ್ನು ವಿರೋಧಿಸಲು ಮತ್ತು ಕನ್ನಡಕ್ಕೆ ಆದ್ಯತೆ ನೀಡಲು ಬೃಹತ್ ಪ್ರಚಾರ ಅಭಿಯಾನಗಳು ಮುಂದಿನ ದಿನಗಳಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಶ್ರೀರಂಗಪಟ್ಟಣ | ಸಮಾನತೆಗಾಗಿ ಅಂಬೇಡ್ಕರ್ ದಾರಿಯಲ್ಲಿ ಹೋರಾಟ ನಡೆಸಬೇಕು : ಶಾಸಕ ದರ್ಶನ್ ಪುಟ್ಟಣ್ಣಯ್ಯ

ಸಭೆಯಲ್ಲಿ ರಾಜ್‌ಕುಮಾರ್ ಅಭಿಮಾನಿ ಸಂಘದ ಶೇ.ಬೋ. ರಾಧಕೃಷ್ಣ, ಜೈ ಕರ್ನಾಟಕ ಪರಿಷತ್‌ನ ಅಧ್ಯಕ್ಷ ಎಸ್. ನಾರಾಯಣ್, ದ್ರಾವಿಡ ಕನ್ನಡಿಗರು ಸಂಘಟನೆಯ ಅಭಿಗೌಡ, ವಕೀಲ ಲಕ್ಷ್ಮಣ್ ಚೀರನಹಳ್ಳಿ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಚ್.ಡಿ. ಜಯರಾಂ ಮತ್ತು ಹಲವು ಕನ್ನಡಪರ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...