ಕೆಎಚ್‌ಐಆರ್‌ ಸಿಟಿ ಕೊಪ್ಪಳದಲ್ಲಿ ಆರಂಭಿಸುವಂತೆ ಸರ್ಕಾರಕ್ಕೆ ಒತ್ತಾಯ

Date:

ಬೆಂಗಳೂರು ನಗರದಿಂದ ಸುಮಾರು 60 ಕಿಲೋ ಮೀಟರ್ ದೂರದಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ ಕೆಎಚ್‌ಐಆರ್‌(Knowledge, Health, Innovation and Research) ಸಿಟಿಯನ್ನು ಕೊಪ್ಪಳ ಜಿಲ್ಲೆಗೆ ಸ್ಥಳಾಂತರಿಸಬೇಕು ಹಾಗೂ ಸ್ಥಾಪಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಬೆಂಗಳೂರು ಸಮೀಪ 2 ಸಾವಿರ ಎಕರೆಯಲ್ಲಿ ಕೆಎಚ್‌ಐಆರ್‌ ಸಿಟಿ ಆರಂಭವಾಗಲಿದೆ. ಬೆಂಗಳೂರು ಈಗಾಗಲೇ ಅತಿಯಾದ ಜನದಟ್ಟಣೆಯಿಂದ, ಟ್ರಾಫಿಕ್ ಸಮಸ್ಯೆ ಸೇರಿದಂತೆ ಇನ್ನಿತರ ತೊಂದರೆಯಿಂದ ಬಳಲುತ್ತಿದೆ. ಹೀಗಾಗಿ, ಬೆಂಗಳೂರಿನಲ್ಲಿ ಸ್ಥಾಪಿಸುವುದಕ್ಕಿಂತ ಕೊಪ್ಪಳ ಜಿಲ್ಲೆಯಲ್ಲಿ ಆರಂಭಿಸಬೇಕು ಎಂದು ಮನವಿ ಮಾಡಿದರು.

ಕೊಪ್ಪಳ ಜಿಲ್ಲೆಯಲ್ಲಿ ಸ್ಥಾಪಿಸಿದರೆ ಇಲ್ಲಿನ ಜನರು ವಲಸೆ ಹೋಗುವ ಸಮಸ್ಯೆಯನ್ನು ತಡೆಗಟ್ಟಬಹುದು. ನಿರುದ್ಯೋಗ, ಬಡತನ ,ಆರ್ಥಿಕ ಸಮಸ್ಯೆಯಿಂದ ಭಾಗದ ಜನರು ವಲಸೆ ಹೋಗುತ್ತಿದ್ದಾರೆ. ಒಂದು ವೇಳೆ ಕೆಎಚ್‌ಐಆರ್‌ ಸಿಟಿ ಕೊಪ್ಪಳದಲ್ಲಿ ಸ್ಥಾಪಿಸಿದರೆ ಯುವ ಸಬಲೀಕರಣಕ್ಕೆ ಅನುಕೂಲ ಆಗುತ್ತದೆ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸಲ್ಲಿಸುವ ವೇಳೆ ಪ್ರಗತಿಪರ ಚಿಂತಕ ಅಲ್ಲಮ ಪ್ರಭು ಬೆಟ್ಟದೂರು, ಗಫ್ಫಾರ್, ಬಸವರಾಜ್ ಶೀಲವಂತ, ಲೋಹಿತ್, ಸಂಜೀವ್, ತುಕಾರಾಮ್, ಯಮನೂರು ಇನ್ನಿತರರು ಹಾಜರಿದ್ದರು.

ಇದನ್ನು ಓದಿದ್ದೀರಾ? ರಾಯಚೂರು | ದೇವದಾಸಿ ಮಹಿಳೆಯರಿಗೆ ನಿವೇಶನ ಹಂಚಿಕೆ ಮಾಡಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಸರಕಾರ ಕೆಎಚ್‌ಐಆರ್‌ ಸಿಟಿ ದಾಬಸ್‌ಪೇಟೆ ಮತ್ತು ದೊಡ್ಡಬಳ್ಳಾಪುರ ನಡುವೆ ಸ್ಥಾಪಿಸಲು ಸಿದ್ಧವಾಗಿದೆ. ಈ ಸ್ಥಳವು ಬೆಂಗಳೂರಿನಿಂದ 60 ಕಿಲೋಮೀಟರ್ ದೂರದಲ್ಲಿದೆ ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲೇ ಇದನ್ನು ಪ್ರಾರಂಭಿಸಲಿದ್ದಾರೆ ಎಂದು ಕರ್ನಾಟಕ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಈ ಯೋಜನೆಯು ನಾಲ್ಕು ವಿಭಾಗಗಳಲ್ಲಿ ₹ 40,000 ಕೋಟಿ ಮೌಲ್ಯದ ಹೂಡಿಕೆಗಳನ್ನು ಆಕರ್ಷಿಸುವ ನಿರೀಕ್ಷೆಯಿದೆ ಮತ್ತು ಸುಮಾರು 80,000 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...