ಮಂಗಳೂರು| ಕೃಷಿ ಭೂಮಿ ರಕ್ಷಣೆಗಾಗಿ ಸಂಘಟಿತ ಹೋರಾಟ ಅಗತ್ಯ – ಮುನೀರ್ ಕಾಟಿಪಳ್ಳ

Date:

“ಒಬ್ಬೊಬ್ಬ ಶಿಕ್ಷಣ, ಆರೋಗ್ಯದ ವ್ಯಾಪಾರಿಗಳು, ಭೂ ದಂಧೆ ಕೋರರ ಕೈಯಲ್ಲಿ ನೂರಾರು ಎಕರೆ ಕೃಷಿ ಭೂಮಿ ಜಮೆಯಾಗತೊಡಗಿದೆ. ಉಳ್ಳಾಲ ಮತ್ತೊಮ್ಮೆ ಜಮೀನ್ದಾರಿ ಯುಗಕ್ಕೆ ತೆರೆದುಕೊಳ್ಳುತ್ತಿದೆ. ಗ್ರಾಮಸ್ಥರು ಮೈಕೊಡವಿ ಹೋರಾಟಕ್ಕೆ ಇಳಿಯದಿದ್ದಲ್ಲಿ ಮನೆ ಮಠ ಕಳೆದುಕೊಂಡು ಬೀದಿಗೆ ಬೀಳುವ, ವಸತಿ, ಆಹಾರಕ್ಕೂ ಪರದಾಡುವ ಅಭ್ರದ್ರತೆಯ ಬದುಕಿಗೆ ಬೀಳಬೇಕಾಗುತ್ತದೆ. ಕೃಷಿ ಭೂಮಿಯ ಸಂರಕ್ಷಣೆಗಾಗಿ ಇಡೀ ಊರಿನ ಗ್ರಾಮಸ್ಥರು ಒಂದಾಗಿ ಸಂಘಟಿತ ಹೋರಾಟ ನಡೆಸಬೇಕು” ಎಂದು ಸಿಪಿಐಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಮುನೀರ್ ಕಾಟಿಪಳ್ಳ ಎಚ್ಚರಿಸಿದರು.

ಕುತ್ತಾರ್‌ನಲ್ಲಿ ಬುಧವಾರ ಜರುಗಿದ ಉಳ್ಳಾಲ ತಾಲೂಕಿನ ಬೆಳ್ಮ, ಮುನ್ನೂರು, ಅಂಬ್ಲಮೊಗರು ಗ್ರಾಮಗಳಲ್ಲಿ ಖಾಸಗಿ ಬಂಡವಾಳಶಾಹಿಗಳು ನೂರಾರು ಎಕರೆ ಕೃಷಿ ಭೂಮಿ ಖರೀದಿಸುತ್ತಿರುವುದರಿಂದ ಗಂಭೀರ ಸಮಸ್ಯೆಗಳಿಗೆ ಈಡಾಗಿರುವ ಗ್ರಾಮಸ್ಥರ ಪ್ರತಿನಿಧಿಗಳ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

“ಉಳುವವನೆ ಹೊಲದೊಡೆಯ ಘೋಷಣೆಯಡಿ ಗೇಣಿದಾರರು ನಡೆಸಿದ ಸಂಘರ್ಷಮಯ ಹೋರಾಟದಿಂದಾಗಿ ನೂರಾರು ಎಕರೆ ಭೂಮಿ ಹೊಂದಿದ್ದ ಭೂ ಒಡೆಯರು ರೈತರಿಗೆ ಭೂಮಿಯನ್ನು ಬಿಟ್ಟುಕೊಡಬೇಕಾಯಿತು. ಅಂದು ಇಂತಹ ಚಾರಿತ್ರಿಕ ಹೋರಾಟದ ಕೇಂದ್ರವಾಗಿದ್ದ ಉಳ್ಳಾಲ ತಾಲೂಕಿನಲ್ಲಿ ಬಂಡವಾಳಶಾಹಿಗಳು ಸಣ್ಣ ರೈತರಿಂದ ವಿವಿಧ ರೀತಿಯ ಆಮಿಷ, ಬೆದರಿಕೆ, ರಾಜಕೀಯ ಬೆಂಬಲದ ಮೂಲಕ ಜಮೀನನ್ನು ಬಲವಂತವಾಗಿ ವಶ ಪಡಿಸಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕ ಮುಖಂಡರಾದ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, “ಈಗಾಗಲೇ ಮಂಗಳೂರಿನ ಹಲವು ಭಾಗಗಳಲ್ಲಿ ಖಾಸಗಿ ಧನಿಕರು, ಉದ್ಯಮಿಗಳು ಏಜಂಟರ ಮೂಲಕ ನೂರಾರು ಎಕರೆ ಜಮೀನು ಖರೀದಿಸಿದ್ದಾರೆ. ದಾಖಲೆಗಳನ್ನು ಪೋರ್ಜರಿಗೊಳಿಸುವುದು, ರಸ್ತೆ ಸಂಪರ್ಕ, ನೀರಿನ ಮೂಲಗಳನ್ನು ಮುಚ್ಚಿ ಭೂಮಿಯನ್ನು ತಾವು ನಿಗದಿ ಮಾಡಿದ ಭೂಮಿ ನೀಡುವಂತೆ ಬಲವಂತ ಪಡಿಸುವುದು ನಡೆಯುತ್ತಿದೆ. ರಾಜಕೀಯ, ಆಡಳಿತದ ಬಲವೂ ಭೂ ಮಾಫಿಯಾಗಳ ಪರವಾಗಿದ್ದು, ಬಲವಾದ ಸಂಘಟಿತ ಹೋರಾಟ ಕಟ್ಟದಿದ್ದಲ್ಲಿ ಅಪಾಯ ಕಾದಿದೆ” ಎಂದರು.

ಸಭೆಯಲ್ಲಿ ಕೃಷಿ ಭೂಮಿ ಸಂರಕ್ಷಣಾ ಹೋರಾಟ ಸಮಿತಿಯನ್ನು ರಚಿಸಲಾಯಿತು. ಸಮಸ್ಯೆಗಳ ಗಂಭೀರತೆಯನ್ನು ಜನತೆಯ ಮಧ್ಯೆ ಕೊಂಡೊಯ್ಯಲು ವಿವಿಧ ಹಂತದ ಕಾರ್ಯ ಕ್ರಮಗಳನ್ನು ನಡೆಸಿ ಬಳಿಕ ಬೃಹತ್ ಹೋರಾಟವನ್ನು ಕೈಗೊಳ್ಳಬೇಕೆಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...