ಅ.9 ರಿಂದ ವಿಸ್ತರಿತ ನೇರಳೆ ಮಾರ್ಗದಲ್ಲಿ ‘ನಮ್ಮ ಮೆಟ್ರೋ’ ಸಂಚಾರ

Date:

ಬೆಂಗಳೂರಿನ ‘ನಮ್ಮ ಮೆಟ್ರೋ’ದ ನೇರಳೆ ಮಾರ್ಗವು ಯಾವುದೇ ಅಧಿಕೃತ ಉದ್ಘಾಟನೆ ಇಲ್ಲದೆ, ವಿಸ್ತರಿತ ಮಾರ್ಗದಲ್ಲಿ ಅಕ್ಟೋಬರ್ 9 (ಸೋಮವಾರ) ರಿಂದ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ.

2.1 ಕಿ.ಮೀ ದೂರ ಇರುವ ಬೈಯಪ್ಪನಹಳ್ಳಿ-ಕೆ.ಆರ್.ಪುರ ಮತ್ತು 2.05 ಕಿ.ಮೀ ಇರುವ ಕೆಂಗೇರಿ-ಚಲ್ಲಘಟ್ಟ ಮಾರ್ಗಗಳಲ್ಲಿ ವಾಣಿಜ್ಯ ಸೇವೆಗಳು ಸೋಮವಾರ ಬೆಳಗ್ಗೆ 5 ರಿಂದ ಆರಂಭವಾಗಲಿವೆ. ಈ ಮಾರ್ಗಗಳು ನೇರಳೆ ಬಣ್ಣದ ಭಾಗವಾಗಿವೆ. 42.85 ಕಿ.ಮೀ ವ್ಯಾಪ್ತಿಯಿರುವ ಈ ಮಾರ್ಗವು ಪೂರ್ವದಲ್ಲಿ ವೈಟ್‌ಫೀಲ್ಡ್‌ನಿಂದ ಪಶ್ಚಿಮದಲ್ಲಿ ಚಲ್ಲಘಟ್ಟದವರೆಗೆ ವಿಸ್ತರಿಸಿದೆ.

“ಅಧಿಕೃತ ಉದ್ಘಾಟನೆಗೆ ಕಾಯದೆ ಸಾರ್ವಜನಿಕರಿಗೆ ಎರಡೂ ಮಾರ್ಗಗಳನ್ನು ತೆರೆಯಲು ನಾನು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ವೈಯಕ್ತಿಕವಾಗಿ ವಿನಂತಿಸಿದ್ದೇನೆ. ಈ ತಿಂಗಳ ಕೊನೆಯಲ್ಲಿ ಅಧಿಕೃತ ಉದ್ಘಾಟನೆ ನಡೆಯಲಿದೆ” ಎಂದು ಸಂಸದ ಪಿ ಸಿ ಮೋಹನ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಳೆಯಿಂದ ನೇರಳೆ ಮಾರ್ಗದಲ್ಲಿ ‘ನಮ್ಮ ಮೆಟ್ರೋ’ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಗಳೂರಿನ ಬಿಜೆಪಿ ಸಂಸದರು ಸ್ವಾಗತ ಕೋರಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿ ಪ್ರಧಾನಿ ಮೋದಿಯವರಿಗೆ ಸಂಸದರು ಧನ್ಯವಾದ ತಿಳಿಸಿದ್ದಾರೆ. ಅ.9 ರಿಂದ ಚಲ್ಲಘಟ್ಟ-ಕೆಂಗೇರಿ, ಬೈಯಪ್ಪನಹಳ್ಳಿ-ಕೆ.ಆರ್.ಪುರ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿದೆ.

ಈ ಸುದ್ದಿ ಓದಿದ್ದೀರಾ? ಜಾತಿಗಣತಿ ಮಾಡಿ ಏನು ಉಪಯೋಗ: ಹೆಡ್‌.ಡಿ.ಕುಮಾರಸ್ವಾಮಿ ಪ್ರಶ್ನೆ

ಕೆ ಆರ್ ​ಪುರಂ-ಬೈಯಪ್ಪನಹಳ್ಳಿ ಮತ್ತು ಕೆಂಗೇರಿ-ಚಲ್ಲಘಟ್ಟ ಎರಡು ಮೆಟ್ರೋ ಮಾರ್ಗಗಳ ಆರಂಭದಿಂದ ಬೆಂಗಳೂರು ಪೂರ್ವದ ಕಡೆ ಜನದಟ್ಟಣೆ ಕಡಿಮೆ ಆಗುವ ನಿರೀಕ್ಷೆಯಿದೆ. ಪ್ರತಿದಿನ ಸುಮಾರು 5 ರಿಂದ 6 ಲಕ್ಷ ಜನರು ಬೆಂಗಳೂರು ಮೆಟ್ರೋವನ್ನು ಬಳಸುತ್ತಾರೆ. ಬೈಯಪ್ಪನಹಳ್ಳಿ-ಕೆ.ಆರ್.ಪುರಂ ಮೆಟ್ರೋ ವಿಭಾಗವು ಸಂಪೂರ್ಣ ತೆರೆದರೆ, ಸುಮಾರು 50-60 ಪ್ರತಿಶತದಷ್ಟು ಜನರಿಗೆ ಅನುಕೂಲವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...