ರಾಜ್ಯಪಾಲರ ‘ವರ್ತನೆ’ಗೆ ಘಟಿಕೋತ್ಸವದ ವೇದಿಕೆಯಲ್ಲೇ ಕಣ್ಣೀರಿಟ್ಟ ಮಂಗಳೂರು ವಿವಿ ಉಪಕುಲಪತಿ!

Date:

ಶನಿವಾರ (ಜೂನ್ 15) ಮಧ್ಯಾಹ್ನ ಮಂಗಳೂರು ನಗರದ ಹೊರವಲಯದ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ 42ನೇ ಘಟಿಕೋತ್ಸವವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲ ಹಾಗೂ ಕುಲಾಧಿಪತಿ ಥಾವರ್‌ಚಂದ್ ಗೆಹ್ಲೋಟ್ ಕಾರ್ಯಕ್ರಮದಲ್ಲಿ ವರ್ತಿಸಿದ ರೀತಿ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯಪಾಲರ ‘ವರ್ತನೆ’ಗೆ ಘಟಿಕೋತ್ಸವದ ವೇದಿಕೆಯಲ್ಲೇ ಮಂಗಳೂರು ವಿವಿ ಉಪಕುಲಪತಿ ಡಾ. ಪಿ ಎಲ್ ಧರ್ಮ ಅವರೇ ಗದ್ಗದಿತರಾದ ಪ್ರಸಂಗ ನಡೆಯಿತು. ಇದರಿಂದಾಗಿ ರಾಜ್ಯಪಾಲರ ನಡೆಯ ಬಗ್ಗೆ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಶಿಷ್ಟಾಚಾರದಂತೆ ನಡೆಯುವ ಘಟಿಕೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರು ಈ‌ ಬಾರಿ ತಮ್ಮದೇ ಹೊಸ ನಿಯಮಗಳೊಂದಿಗೆ ನಡೆಸಿಕೊಟ್ಟಿದ್ದಾರೆ. ಇದರಿಂದ ಅಕ್ಷರಶಃ ವಿವಿಯ ಉಪಕುಲಪತಿಗಳೇ‌ ಗದ್ಗದಿತರಾದರೆ, ಇತರ ಸಿಬ್ಬಂದಿಗಳು ಗೊಂದಲಕ್ಕೆ ಒಳಗಾಗಿದ್ದರು. ರಾಜ್ಯಪಾಲರು, ರಾಜ್ಯಪಾಲರ ಭದ್ರತಾ ಸಿಬ್ಬಂದಿಯ ಎಡವಟ್ಟಿನಿಂದ ಇಡೀ ಕಾರ್ಯಕ್ರಮವೇ ಗೊಂದಲದ ಗೂಡಾಗಿದ್ದಂತೂ ಸತ್ಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯವಾಗಿ ಘಟಿಕೋತ್ಸವವು ನಾಡಗೀತೆ ಮತ್ತು ವಿವಿಯ ಗೀತೆಯೊಂದಿಗೆ ಆರಂಭವಾಗಿ, ರಾಷ್ಟ್ರಗೀತೆಯೊಂದಿಗೆ ಮುಕ್ತಾಯವಾಗುವುದು ಸಂಪ್ರದಾಯ. ಇದೇ ರೀತಿ ಸಿದ್ಧತೆಯೂ ಆಗಿತ್ತು. ಆದರೆ ವೇದಿಕೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಾಡಗೀತೆ ಮತ್ತು ವಿಶ್ವವಿದ್ಯಾನಿಲಯದ ಗೀತೆಗೆ ಮೊದಲೇ ರಾಷ್ಟ್ರಗೀತೆ ನುಡಿಸುವಂತೆ ಸೂಚಿಸಿದರು. ಇದು ಏಕಾಏಕಿ ಗೊಂದಲಕ್ಕೆ ಕಾರಣವಾಯಿತು. ಈ ಗೀತೆ ಹಾಡಲು ತಯಾರಾಗಿ ಬಂದಿದ್ದ ವಿದ್ಯಾರ್ಥಿಗಳು ಕೂಡ ಕೆಲಕಾಲ ವಿಚಲಿತರಾದರು.

ಶಿಷ್ಟಾಚಾರದೊಂದಿಗೆ ಕಾರ್ಯಕ್ರಮ ನಡೆಸುವುದಕ್ಕೆ ಮೊದಲೇ ರೂಪುರೇಷೆ ಸಿದ್ದಪಡಿಸಲಾಗಿತ್ತು. ಆದರೆ ವೇದಿಕೆಯಲ್ಲಿ ರಾಜ್ಯಪಾಲರು, ಅವರ ಭದ್ರತಾ ಸಿಬ್ಬಂದಿ ಅವುಗಳನ್ನು ಬದಲಾಯಿಸಲು ಸೂಚನೆ ನೀಡಿದ ಪರಿಣಾಮ ಅಲ್ಲಿ ಬಹಳಷ್ಟು ಗೊಂದಲ ಉಂಟಾಗಿತ್ತು.

uvv

ಗೌರವ ಡಾಕ್ಟರೇಟ್ ಪ್ರದಾನ, ಪದವಿ ಪ್ರಮಾಣ ಮಾಡುವ ಸಂದರ್ಭದಲ್ಲೂ ಮಂಗಳೂರು ವಿಶ್ವವಿದ್ಯಾನಿಲಯ ಈ ಮೊದಲಿದ್ದ ವ್ಯವಸ್ಥೆಯನ್ನೇ ಮಾಡಿಕೊಂಡಿತ್ತಾದರೂ, ಅದನ್ನೂ ಕೂಡ ವೇದಿಕೆಯಲ್ಲಿ ಬದಲಾಯಿಸಲಾಯಿತು.

ಘಟಿಕೋತ್ಸವದ ಶಿಷ್ಟಾಚಾರದಂತೆ ನಡೆಸಲು ಮಂಗಳೂರು ವಿವಿ ಎಲ್ಲ ಅಧಿಕಾರಿಗಳು ಪೂರ್ವಸಿದ್ಧತೆ ನಡೆಸಿದ್ದರು. ಆದರೆ ರಾಜ್ಯಪಾಲರು ವೇದಿಕೆಯಲ್ಲೇ ಕೂತು ಏರುಧ್ವನಿಯಲ್ಲೇ ತಮಗೆ ಬೇಕಾದ ರೀತಿಯಲ್ಲಿ ಕಾರ್ಯಕ್ರಮದ ಶಿಷ್ಟಾಚಾರವನ್ನು ಬದಲು ಮಾಡಲು ನಿರ್ದೇಶಿಸುತ್ತಿದ್ದರು.

ಒಂದೂವರೆ ಗಂಟೆಯ ಇಡೀ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿದ್ದ ವಿವಿಯ ಉಪ ಕುಲಪತಿ, ಪರೀಕ್ಷಾಂಗ ಕುಲಸಚಿವರಿಗೆ ಬಾಯಿಗೆ ಬಂದಂತೆ ಮೌಖಿಕ ನಿರ್ದೇಶನ ನೀಡುತ್ತಿದ್ದರು.

ಪಿ.ಎಚ್.ಡಿ. ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲರ ಕೈಯಿಂದಲೇ ನೀಡುವುದು ಶಿಷ್ಟಾಚಾರ. ಆದರೆ ಈ ಬಾರಿ ಸಂಶೋಧನಾರ್ಥಿಗಳಿಗೆ ಪಿ.ಎಚ್‌.ಡಿ. ಡಾಕ್ಟರೇಟ್ ಸರ್ಟಿಫಿಕೇಟ್‌ ಅನ್ನು ಕಾರ್ಯಕ್ರಮದ ಮೊದಲೇ ಹಂಚಿ, ನಂತರ ಎಲ್ಲರನ್ನೂ ಒಟ್ಟಿಗೆ ವೇದಿಕೆಗೆ ಕರೆದು ರಾಜ್ಯಪಾಲರು ಗ್ರೂಪ್ ಫೋಟೋಗೆ ಫೋಸ್ ನೀಡಿದ್ದಾರೆ. ಈ ಮಧ್ಯೆ ರಾಜ್ಯಪಾಲರ ಅಂಗರಕ್ಷಕರಾಗಿದ್ದ ಬೆಂಗಳೂರಿನ ಹೆಡ್‌ಕಾಸ್ಟೇಬಲ್‌ ಓರ್ವರು, ವೇದಿಕೆಯಲ್ಲಿ ನಿಂತು ಏರುದನಿಯಲ್ಲೇ ವಿವಿ ಸಿಬ್ಬಂದಿಗಳತ್ತ ಮಾತನ್ನಾಡುತ್ತಿದ್ದರೆ, ಮಾಧ್ಯಮದ ಕ್ಯಾಮರಾಮೆನ್‌ ಒಬ್ಬರನ್ನು ದೂಡಿದ ಘಟನೆಯೂ ನಡೆಯಿತು.

ಕಣ್ಣೀರಿಟ್ಟ ಉಪ ಕುಲಪತಿ ಡಾ.ಪಿ.ಎಲ್ ಧರ್ಮ!

ಇಡೀ ಘಟನೆ ಬಗ್ಗೆ ವಿವಿ ಅಧಿಕಾರಿಗಳು ಮೌನವಾಗಿ ಪ್ರತಿಕ್ರಿಯಿಸುತ್ತಿದ್ದರೆ, ಉಪಕುಲಪತಿ ಡಾ.ಪಿ.ಎಲ್ ಧರ್ಮ ವೇದಿಕೆಯಲ್ಲೇ ದುಃಖದಿಂದ ಕಣ್ಣೀರು ಹಾಕುವಂತಹ ಸ್ಥಿತಿ ನಿರ್ಮಾಣವಾಗಿತ್ತು.

university 2

ಕಾರ್ಯಕ್ರಮದ ನಡುವೆ ರಾಜ್ಯಪಾಲರು ಮಂಗಳೂರು ವಿವಿಯ ಉಪ ಕುಲಪತಿ ಡಾ. ಪಿ ಎಲ್ ಧರ್ಮ ಅವರನ್ನು ತರಾಟೆಗೆ ತೆಗೆದುಕೊಂಡರು‌. ಇದರಿಂದ ಕಸಿವಿಸಿಗೊಂಡ ಕುಲಪತಿಗಳು ವೇದಿಕೆಯಲ್ಲಿಯೇ ಭಾವುಕರಾದರು.

ಇಡೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲರು ಸಭೆಯುದ್ದಕ್ಕೂ ಒಂದು ನಿಮಿಷವೂ ಮಾತನಾಡದೆ ಸುಮ್ಮನೆ ಕುಳಿತಿರದ ಬಗ್ಗೆ ಸಭಾಂಗಣದಲ್ಲಿದ್ದ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಭಾಗವಹಿಸಿದ್ದ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಸಹಿತ ಕಾಂಗ್ರೆಸ್, ಬಿಜೆಪಿ ಮುಖಂಡರೆಲ್ಲ ಇದ್ದರೂ ಕೂಡ ಮೂಕ ಪ್ರೇಕ್ಷಕರಾಗಿದ್ದರು.

ವಿವಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದುದು ಕಂಡುಬಂತು. ಈ ಘಟನೆ ಬಗ್ಗೆ ವಿವಿಯ ಯಾವುದೇ ಅಧಿಕಾರಿಗಳು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಇದನ್ನು ಓದಿದ್ದೀರಾ? ಪೆಟ್ರೋಲ್, ಡೀಸೆಲ್ ದರ : ದಕ್ಷಿಣದ ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ ಕಡಿಮೆ: ಸಿಎಂ ಸಿದ್ದರಾಮಯ್ಯ

ಒಟ್ಟಿನಲ್ಲಿ ತನ್ನದೇ ನೀತಿ ನಿಯಮಗಳನ್ನು ರೂಪಿಸಿ ಅದನ್ನು ಅನುಷ್ಠಾನಕ್ಕೆ ತಂದು ಇಡೀ ಕಾರ್ಯಕ್ರಮವನ್ನೇ ಗೊಂದಲದ ಗೂಡಾಗಿಸಿದ ರಾಜ್ಯಪಾಲರ ವರ್ತನೆ ಮಾತ್ರ ಎಲ್ಲರ ಟೀಕೆಗೆ ಗುರಿಯಾಗಿದೆ. ಮಂಗಳೂರು ವಿವಿಯ ಘಟಿಕೋತ್ಸವದ ಇತಿಹಾಸದಲ್ಲಿ ಈ ರೀತಿ ನಡೆದಿರುವುದು ಮೊದಲು ಎಂಬ ಮಾತು ಕೇಳಿಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...