ರೆಸಾರ್ಟ್‌ಗಳಲ್ಲಿ ಅವಘಡ ನಡೆದಲ್ಲಿ ಮಾಲೀಕರೇ ಜವಾಬ್ದಾರಿ : ಕೊನೆಗೂ ಎಚ್ಚೆತ್ತ ಪ್ರವಾಸೋದ್ಯಮ ಇಲಾಖೆ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆಗೊಂಡ ಹೋಂ ಸ್ಟೇ, ಹೋಟೆಲ್, ರೆಸಾರ್ಟ್ ಅನ್ನು ನಡೆಸುತ್ತಿರುವ ಮಾಲೀಕರು, ನಿಮ್ಮ ಒಡೆತನದ ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ಅವಘಡಗಳು ಸಂಭವಿಸಿದಲ್ಲಿ ನೀವೇ ಜವಾಬ್ದಾರಿ ಎಂದು ಪ್ರವಾಸೋದ್ಯಮ ಇಲಾಖೆ ಎಚ್ಚರಿಕೆ ನೀಡಿದೆ.

ಅಕ್ರಮಗಳ ನಂತರ ಪ್ರವಾಸೋದ್ಯಮ ಇಲಾಖೆ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದೆ ಎಂದು ಸಾರ್ವಜನಿಕರು ಲೇವಡಿ ಮಾಡಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಿಂದ ಹೋಂ ಸ್ಟೇ ನಡೆಸಲು ಮಾತ್ರ ಅನುಮತಿಯನ್ನು ನೀಡಲಾಗಿದ್ದು, ಇತರ ಕ್ರೀಡೆಗಳಿಗೆ ಅವಕಾಶವನ್ನು ಮಾಡಿಕೊಟ್ಟಿರುವುದಿಲ್ಲ. ಆದ್ದರಿಂದ ಹೋಂ ಸ್ಟೇಯಲ್ಲಿ ಇನ್ನಿತರ ಚಟುವಟಿಕೆಗಳು ಅಂದರೆ ಝಿಪ್ ಲೈನ್, ಬೋಟಿಂಗ್, ಜಾರ್ಬಿಂಗ್, ಕಯಾಕಿಂಗ್, ಸ್ವೀಮ್ಮಿಂಗ್ ರೋಪ್ ಗೇಮ್ಸ್, ಅರ್ಚರಿ, ಡಾರ್ಟ್‌ ಬೋರ್ಡ್‌ ಹಾಗೂ ಇನ್ನಿತರ ಚಟುವಟಿಕೆಗಳನ್ನು ನಡೆಸುತ್ತಿದ್ದಲ್ಲಿ ಈ ಕೂಡಲೇ ಪ್ರವಾಸೋದ್ಯಮ ಇಲಾಖೆ ಕಾರವಾರ ಉತ್ತರ ಕನ್ನಡ ಜಿಲ್ಲೆರವರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 11 21 at 9.08.32 AM 1

ಹೋಂ ಸ್ಟೇ ಬಿಟ್ಟು ಇತರೆ ಚಟುವಟಿಕೆ ನಡೆಸಲು ಪೂರಕ ದಾಖಲೆಗಳನ್ನು ಸಲ್ಲಿಸಿ ಕೂಡಲೇ ಅನುಮತಿಯನ್ನು ಪಡೆಯಬೇಕು. ಅನುಮತಿ ಪಡೆಯದೆ ಇರುವುದರ ಬಗ್ಗೆ ಮಾಹಿತಿ ಕಂಡುಬಂದಲ್ಲಿ ಹೋಂ ಸ್ಟೇಗಳ ಸ್ಥಳ ತಪಾಸಣೆ ನಡೆಸಿ ಅನುಮತಿ ಪತ್ರವನ್ನು ರದ್ದುಗೊಳಿಸಲಾಗುವುದು ಹಾಗೂ ಕಾನೂನು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಹೋಂ ಸ್ಟೇ, ಹೋಟೆಲ್, ರೆಸಾರ್ಟ್‌ಗಳಲ್ಲಿ ಝಿಪ್ ಲೈನ್, ಬೋಟಿಂಗ್, ಜಾರ್ಬಿಂಗ್, ಕಯಾಕಿಂಗ್, ಸ್ಟಿಮ್ಮಿಂಗ್ ರೋಪ್ ಗೇಮ್ಸ್, ಆರ್ಚರಿ, ಡಾರ್ಟ ಬೋರ್ಡ ಹಾಗೂ ಇನ್ನಿತರ ಚಟುವಟಿಕೆಗಳನ್ನು ಪ್ರವಾಸಿಗರ /ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಬೇಕಾಗುವ ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಂಡು ತಮ್ಮ ಸಿಬ್ಬಂದಿಗಳ ನೇತೃತ್ವದಲ್ಲಿ ನಡೆಸಬೇಕು. ಸದರಿ ಈ ವಿಷಯದ ಕುರಿತು ನಿಷ್ಕಾಳಜಿಯನ್ನು ತೋರಿ ಯಾವುದೇ ಅವಘಡಗಳು ನಡೆದಿರುವುದು ಕಂಡುಬಂದಲ್ಲಿ ಸದರಿ ಅವಘಡಕ್ಕೆ ಹೊಂಸ್ಟೇ, ಹೋಟೆಲ್/ರೆಸಾರ್ಟ್ ಮಾಲೀಕರೆ ಜವಾಬ್ದಾರರಾಗಿದ್ದು ಸದರಿರವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅನೇಕ ಮಾಲೀಕರ ಬಳಿ ಪ್ರವಾಸೋದ್ಯಮ ಇಲಾಖೆಯ ನಿಯಮಾವಳಿಗಳ ಅನುಸಾರ ನೊಂದಣಿ ಮಾಡಲು ಸರಿಯಾದ ದಾಖಲೆಗಳು ಲಭ್ಯವಿಲ್ಲದೆ ಪಂಚಾಯಿತಿ ಯಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ ಹಾಗೂ ಪೋಲಿಸ್ ಇಲಾಖೆಯ ನಿರಾಕ್ಷೇಪಣಾ ಪ್ರಮಾಣದೊಂದಿಗೆ ನಡೆಸುತ್ತಿದ್ದಾರೆ.

ಹೀಗಾಗಿ ಜಿಲ್ಲೆಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಹೋಂ ಸ್ಟೇಗಳಿಂದಾಗಿ ಅನೈತಿಕ ಚಟುವಟಿಕೆಗಳು ಹೆಚ್ಚುತ್ತಿರುವುದು ಕಂಡು ಬಂದಿರುತ್ತದೆ. ಆದ್ದರಿಂದ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆಯದಿದ್ದಲ್ಲಿ ಈ ಕೂಡಲೆ ಹೋಟೆಲ್/ರೆಸಾರ್ಟ್‌ಗಳನ್ನು ಆನ್‌ಲೈನ್ kttf.karnatakatourism.org ಮೂಲಕ ಅಗತ್ಯ ದಾಖಲೆೆಗಳನ್ನು ನೀಡಿ ಪ್ರವಾಸೋದ್ಯಮ ಇಲಾಖೆಯಡಿ ಅಥವಾ ಕೇಂದ್ರ ಸರ್ಕಾರದ Breakfast (https://tourism.gov.in) ಅಡಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಿಕ್ರಂ ಗೌಡರದ್ದು ನಕಲಿ ಎನ್‌ಕೌಂಟರ್ ಅಲ್ಲ, ಮಷೀನ್ ಗನ್ ಇದ್ದಿದ್ದಕ್ಕೆ ಹತ್ಯೆ: ಆಂತರಿಕ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ

ಮುಂದಿನ 15 ದಿನಗಳೊಳಗೆ ನೋಂದಣಿ ಮಾಡದೆ ಅನಧಿಕೃತವಾಗಿ ನಡೆಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಪ್ರವಾಸೋದ್ಯಮ ಇಲಾಖೆ ಉತ್ತರ ಕನ್ನಡ ಜಿಲ್ಲೆ ಕಾರವಾರರವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಜಯಂತ ಎಚ್.ವಿ. ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...