ಉಡುಪಿ | ಪರಶುರಾಮ ಥೀಮ್ ಪಾರ್ಕ್ ಬಗ್ಗೆ ಸಲ್ಲಿಸಿರುವ ಪಿ ಐ ಎಲ್ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗೆ ಮನವಿ

Date:

ಪರಶುರಾಮ ಥೀಮ್ ಪಾರ್ಕ್ ನಲ್ಲಿ ಹೊಸ ಕಂಚಿನ ಪರಶುರಾಮ ಮೂರ್ತಿಯನ್ನು ನಿರ್ಮಿಸಲು ತಮ್ಮ ಸಹಿತ ಬೇರೆ ಇಲಾಖಾ ಮುಖ್ಯಸ್ಥರನ್ನು ಪಕ್ಷಕಾರರನ್ನಾಗಿಸಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿರುತ್ತದೆ ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಯ ಸೂಕ್ತ ತನಿಖೆ ನಡೆಸುವಂತೆ ಸಮಾಜ ಸೇವಕ, ಮಾಹಿತಿ ಹಕ್ಕು ಕಾರ್ಯಕರ್ತಉಮೇಶ್ ಕಲ್ಲೊಟ್ಟೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಗೆ ಹೋಗಲು ಕಾಂಕ್ರೀಟ್ ರಸ್ತೆಗೆ ಬಿಲ್ಲು ಬಿಡುಗಡೆಯಾಗಲು ಬಾಕಿ ಇರುತ್ತದೆ. ಪರಶುರಾಮ ಥೀಮ್ ಪಾರ್ಕ್ ಗೆ ಹೋಗಲು ಕಾಂಕ್ರೀಟ್ ರಸ್ತೆಗೆ ಯಾವುದೇ ಇಲಾಖೆಯಿಂದ ಅನುಮತಿ ಪಡೆಯದೇ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಯನ್ನು ನಿರ್ಮಿಸದ ಗುತ್ತಿಗೆದಾರರಿಗೆ ಬಿಲ್ಲು ಬಿಡುಗಡೆಯಾಗದೆ ಬಾಕಿ ಇರುತ್ತದೆ. ಕಾಂಕ್ರೀಟ್ ರಸ್ತೆ ಅಕ್ರಮವಾಗಿ ಹಣ ಬಳಕೆಯಾಗಿರುವ ಬಗ್ಗೆ GST ಮತ್ತು IT ಇಲಾಖೆಯಿಂದ ತನಿಖೆಯಾಗಬೇಕು. ಹೊಸ ಕಂಚಿನ ಪರಶುರಾಮ ಮೂರ್ತಿಯನ್ನು ನಿರ್ಮಿಸಲು ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಮತ್ತು ಸದ್ರಿ ಕಾಂಕ್ರೀಟ್ ರಸ್ತೆಗೆ ಹಣವನ್ನು ಬಿಡುಗಡೆ ಮಾಡಲು ಸಂಬಂಧ ಇರುವ ಬಗ್ಗೆ ತಾವು ಸರಕಾರಕ್ಕೆ ಪತ್ರವನ್ನು ಬರೆದು ಯಾವುದೇ ಹಣವನ್ನು ಬಿಡುಗಡೆ ಮಾಡಬಾರದು. ಇದ್ದು ಪರಶುರಾಮ ಮೂರ್ತಿಗೆ ಸರಕಾರದಿಂದ ಶಿಲ್ಪಿಗೆ ಬಿಡುಗಡೆಯಾಗಿರುವ ಹಣವನ್ನು ವಸೂಲು ಮಾಡಲು ಕ್ರಮವನ್ನು ಕೈಗೊಳ್ಳಬೇಕೇ ಹೊರತು ಪುನಃ ಸರಕಾರದಿಂದ ಹಣ ಬಿಡುಗಡೆ ಮಾಡಿ ಪರಶುರಾಮ ಮೂರ್ತಿಯನ್ನು ನಿರ್ಮಿಸುವುದು ಕಾನೂನು ಬಾಹಿರವಾಗಿರುತ್ತದೆ ಹಾಗೂ ಈ ಬಗ್ಗೆ ತಾವು ಸೂಕ್ತ ಕ್ರಮವನ್ನು ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

1006735405
1006735407
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...