ಗುಬ್ಬಿ ತಾಲೂಕು ಕಚೇರಿ ಬಳಿ ಪಾರ್ಕಿಂಗ್ ವ್ಯವಸ್ಥೆ : ರಸ್ತೆ ಸುರಕ್ಷತೆಗೆ ಆದ್ಯತೆ

Date:

ಗುಬ್ಬಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು ಸಮಸ್ಯೆ ಬಗೆಹರಿಸಲು ಪಟ್ಟಣ ಪಂಚಾಯಿತಿ ಕರೆದಿದ್ದ ಸಭೆಯಲ್ಲಿ ನಾಗರೀಕರ ಒತ್ತಾಯದಂತೆ ನೋ ಪಾರ್ಕಿಂಗ್ ವ್ಯವಸ್ಥೆ ಹಾಗೂ ಕಾರು ಹಾಗೂ ದ್ವಿಚಕ್ರ ವಾಹನ ನಿಲುಗಡೆಗೆ ಸೂಕ್ತ ಕ್ರಮ ಕೈಗೊಂಡು ರಸ್ತೆ ಸುರಕ್ಷತೆಯ ಬಗ್ಗೆ ಪೌರ ಕಾರ್ಮಿಕರ ನೇಮಕ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ.

ಸಭೆಯಲ್ಲಿ ಸಮಸ್ಯೆಗೆ ಪರಿಹಾರ ಸೂಚಿಸಿದ್ದ ತಹಶೀಲ್ದಾರ್ ಆರತಿ.ಬಿ ಅವರು ತಾಲ್ಲೂಕು ಕಚೇರಿ ಆವರಣದಲ್ಲಿ ಬೈಕ್ ಪಾರ್ಕಿಂಗ್ ವ್ಯವಸ್ಥೆಗೆ ಅನುವು ಮಾಡಿದರು. ಜೊತೆಗೆ ತಾಲ್ಲೂಕು ಕಚೇರಿ ಹಿಂಭಾಗ ಕಾರುಗಳ ಪಾರ್ಕಿಂಗ್ ವ್ಯವಸ್ಥೆ ಮಾಡಿದರು.

ಪಪಂ ಅಧ್ಯಕ್ಷೆ ಆಯಿಷಾ ತಾಸೀನ್ ಮಾತನಾಡಿ ಸೋಮವಾರದಿಂದ ಜಾರಿಯಾಗುವಂತೆ ನಿಯಮ ಸಿದ್ದ ಮಾಡಿದ ಪಟ್ಟಣ ಪಂಚಾಯಿತಿ ಎಂ.ಜಿ.ರಸ್ತೆಯಲ್ಲಿ ಈ ಮೊದಲು ಜಾರಿಯಿದ್ದ ಪಾರ್ಕಿಂಗ್ ವ್ಯವಸ್ಥೆ ಮತ್ತೊಮ್ಮೆ ಜಾರಿಗೆ ಸಿದ್ಧಗೊಳಿಸಿ ರಸ್ತೆ ಸುರಕ್ಷತೆ ಹಿನ್ನಲೆ ಮೊದಲ ಹೆಜ್ಜೆಯಾಗಿ ಪಟ್ಟಣ ಪಂಚಾಯಿತಿ ಕಚೇರಿಯಿಂದ ಲೋಕೋಪಯೋಗಿ ಇಲಾಖೆ ಕಚೇರಿವರೆಗೆ ಎಡ ಬದಿಯ ರಸ್ತೆಗೆ ನೋ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಬಲ ಬದಿಯಲ್ಲಿ ವಾಹನ ನಿಲುಗಡೆಗೆ ಅನುವು ಮಾಡಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ ಮಾತನಾಡಿ ಸಾರ್ವಜನಿಕರ ಅಭಿಪ್ರಾಯದಂತೆ ಸುಗಮ ಸಂಚಾರಕ್ಕೆ ಒಂದು ಬದಿಯ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಾನೂನು ರೀತಿಯ ನಿಯಮ ಪಾಲನೆಗೆ ಪೊಲೀಸರ ಸಹಕಾರ ಅತ್ಯಗತ್ಯವಿದೆ. ಸದ್ಯಕ್ಕೆ ನಮ್ಮ ಪೌರ ಕಾರ್ಮಿಕರೇ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುತ್ತಿದ್ದಾರೆ ಎಂದರು.

ಪಪಂ ಸದಸ್ಯ ಮಹಮ್ಮದ್ ಸಾದಿಕ್ ಮಾತನಾಡಿ ಬಹುದಿನದ ಬೇಡಿಕೆಯಾದ ಪಾರ್ಕಿಂಗ್ ವ್ಯವಸ್ಥೆ ಪಟ್ಟಣ ಪಂಚಾಯಿತಿ ಮಾಡಿದೆ. ಎಲ್ಲೆಂದರಲ್ಲಿ ವಾಹನ ನಿಲುಗಡೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿತ್ತು. ನಾಗರೀಕರು ಸಭೆಯಲ್ಲಿ ದೂರು ಹೇಳಿದ ಹಿನ್ನಲೆ ಕೂಡಲೇ ಪಾರ್ಕಿಂಗ್ ವ್ಯವಸ್ಥೆ ಮಾಡಿ ನಮ್ಮ ಕಾರ್ಮಿಕರಿಂದ ಅರಿವು ಮೂಡಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಗುಬ್ಬಿ ಹಿತ ರಕ್ಷಣಾ ಸಮಿತಿಯ ಯಲ್ಲಪ್ಪ, ಸಿ.ಆರ್.ಶಂಕರ್ ಕುಮಾರ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...