ಬೀದರ್‌ | ನ.25, 26ರಂದು ನಡೆಯಲಿರುವ ಅನುಭವ ಮಂಟಪ ಉತ್ಸವದಲ್ಲಿ ಭಾಗವಹಿಸಿ : ಗುರುಬಸವ ಪಟ್ಟದ್ದೇವರು

Date:

ಬಸವಕಲ್ಯಾಣದಲ್ಲಿ ನ.25 ಮತ್ತು 26ರಂದು ವಿಶ್ವ ಬಸವ ಧರ್ಮ ಟ್ರಸ್ಟ್‌ ಅನುಭವ ಮಂಟಪ ವತಿಯಿಂದ ನಡೆಯಲಿರುವ 44ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಸಮಾರಂಭದಲ್ಲಿ ಬಸವಾನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ 44ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವದ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿ, “ಜಗತ್ತಿಗೆ ಪ್ರಪ್ರಥಮ ಸಂಸತ್ತು ಪರಿಕಲ್ಪನೆ ನೀಡಿದ ಹೆಗ್ಗಳಿಕೆ  ಕಲ್ಯಾಣದ ನೆಲಕ್ಕಿದೆ. ಜತೆಗೆ ಅಸ್ಪೃಶ್ಯತೆ, ಮೌಢ್ಯತೆ, ಕಂದಾಚಾರ ವಿರುದ್ಧ ಹೋರಾಡಿ ಸಮಸಮಾಜ ನಿರ್ಮಾಣಕ್ಕೆ ಶರಣರು ಹೋರಾಡಿದರು. ಅಂತಹ ಶರಣರ ವಿಚಾರಧಾರೆ ಜಾಗತಿಕ ಮಟ್ಟದಲ್ಲಿ ಪರಿಚಯಿಸಬೇಕೆಂಬ ಉದ್ದೇಶದಿಂದ ಡಾ.ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ಪ್ರತಿವರ್ಷ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಆಯೋಜಿಸಲಾಗುತ್ತಿದೆ” ಎಂದರು.

“ನ.25 ಮತ್ತು 26 ರಂದು ಬಸವಕಲ್ಯಾಣದಲ್ಲಿ ಎರಡು ದಿವಸ ಅರ್ಥಪೂರ್ಣ ಕಾರ್ಯಕ್ರಮ ಜರುಗಲಿವೆ. ನಾಡಿನ ಮಠಾಧೀಶರು, ರಾಜಕೀಯ ಮುಖಂಡರು, ಸಾಹಿತಿಗಳು ಭಾಗಿಯಾಗಲಿದ್ದಾರೆ. ಆದ್ದರಿಂದ ತಾಲೂಕಿನ ಬಸವ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಎರಡು ದಿನದ ಕಾರ್ಯಕ್ರಮ ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಸಲಿ ರಾಷ್ಟ್ರೀಯವಾದಿ ಚಳವಳಿ ಹುಟ್ಟು ಹಾಕಿದ್ದು ಬಸವಣ್ಣ: ಡಾ. ಜೆ.ಎಸ್ ಪಾಟೀಲ್

ಈ ಸಂದರ್ಭದಲ್ಲಿ ಪ್ರಮುಖರಾದ ಬಸವರಾಜ ದಾಡಗೆ, ಶಾಂತವೀರ ಕೇಸ್ಕರ್, ಕಾಶಿನಾಥ ಲದ್ದೆ, ಮಹಾದೇವ ಬೇಲೂರೆ, ಬಾಬುರಾವ ಬೇಲೂರೆ, ಸಂಗಮೇಶ ಟೆಂಕಾಳೆ, ಕೈಲಾಸ ಪಾಟೀಲ್,  ಮಲ್ಲಿಕಾರ್ಜುನ ಗುಮ್ತಾ, ಅಮೃತ ಹೂಗಾರ, ಗೋವಿಂದ ಅಹ್ಮದಾಬಾದೆ, ಗುರುರಾಜ ಸ್ವಾಮಿ, ಬಾಲಾಜಿ ಕುಟಮಲಗೆ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...