ಬೆಳಗಾವಿ | ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ; ಏಳು ಸಿಬ್ಬಂದಿ ಅಮಾನತು

Date:

ಬೆಳಗಾವಿಯ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಘಟನೆಗೆ ಸಂಬಂಧಪಟ್ಟಂತೆ ಏಳು ಮಂದಿ ಸಿಬ್ಬಂದಿಗಳನ್ನುಅಮಾನತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿಯ ಕಾರು ಚಾಲಕ ಮಂಜುನಾಥ ಪಾಟೀಲ್​​, ಸಿಬ್ಬಂದಿ ಮಹೇಶ ಹಿರೇಮಠ, ರಮೇಶ ನಾಯಕ, ಸತ್ಯಪ್ಪ ತಮ್ಮನ್ನವರ, ಅನಿಲ ತಿಪ್ಪನ್ನವರ, ದೀಪಕ ಗಾವಡೆ, ಯಲ್ಲಪ್ಪ ಮುನ್ನವಳ್ಳಿ ಅಮಾನತುಗೊಂಡಿದ್ದಾರೆ.

ಅಮಾನತಾದ ಸಿಬ್ಬಂದಿಗಳು ಟಿಳಕವಾಡಿಯಲ್ಲಿರುವ ಡಿಎಚ್​​ಒ ಕಚೇರಿಯ ಹಿಂಭಾಗದ ಕೊಠಡಿಯಲ್ಲಿ ಗಾಂಧಿ ಫೋಟೋ ಎದುರೇ ಮದ್ಯಪಾನ ಮಾಡಿದ್ದರು. ಆ ಘಟನೆಯನ್ನು ವಿಡಿಯೋ ಮಾಡಲಾಗಿತ್ತು. ವಿಡಿಯೋವನ್ನು ಆಧರಿಸಿ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಆದರೆ, ಮದ್ಯಪಾನದ ಘಟನೆ ಯಾವಾಗ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಡಿಯೋದಲ್ಲಿ ಸಿಬ್ಬಂದಿಗಳು ಮದ್ಯಪಾನ ಮತ್ತು ಧೂಮಪಾನ ಮಾಡುತ್ತಿರುವುದು, ಡ್ಯಾನ್ಸ್ ಮಾಡುತ್ತಿರುವುದು ಹಾಗೂ ಹರಟೆ ಮಾತುಗಳನ್ನಾಡುತ್ತಿರುವುದು ಸೆರೆಯಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ಟೀಕೆ ಕೂಡ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಡಿಎಚ್ಒ ಡಾ. ಮಹೇಶ ಕೋಣಿ ಪಾರ್ಟಿಯಲ್ಲಿ ಭಾಗಿಯಾಗಿದ್ದ ಏಳು ಮಂದಿ ಸಿಬ್ಬಂದಿಗಳ ವಿರುದ್ಧ ಕ್ರಮ‌ ಕೈಗೊಂಡಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಎಚ್​ಒ ಡಾ. ಮಹೇಶ ಕೋಣಿ, “ಮೇಲ್ನೋಟಕ್ಕೆ ವಿಡಿಯೋದಲ್ಲಿ, ನಮ್ಮ ಸಿಬ್ಬಂದಿಗಳೇ ಪಾರ್ಟಿ ಮಾಡಿರುವುದು ಕಂಡುಬಂದಿದೆ. ಇದಕ್ಕೂ ಮುಂಚೆ ಈ ಘಟನೆ ನಮ್ಮ ಗಮನಕ್ಕೆ ಬಂದಿಲ್ಲ. ಕೂಲಂಕಷವಾಗಿ ತನಿಖೆ ಮಾಡಿ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುತ್ತೇನೆ. ಸರ್ಕಾರಿ ಸಿಬ್ಬಂದಿ, ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡುವುದು ಸರ್ಕಾರಿ ಕರ್ತವ್ಯಕ್ಕೆ ವಿರುದ್ಧವಾಗಿದೆ. ಈ ರೀತಿ ಮಾಡಿರುವುದು ತಪ್ಪು. ಈ ವಿಡಿಯೋವನ್ನು ಪರಿಶೀಲನೆ ಮಾಡಿ ತಪ್ಪು ಕಂಡು ಬಂದಲ್ಲಿ ನಮ್ಮ ಕಚೇರಿ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುತ್ತೇನೆ,” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...