ಬಿಜೆಪಿ ಕಟ್ಟೋಣ, ಪಕ್ಷ ಬಿಟ್ಟವರು ಮೋದಿಗಾಗಿ ಮರಳಿ ಬನ್ನಿ: ಶೋಭಾ ಕರಂದ್ಲಾಜೆ ಮುಕ್ತ ಆಹ್ವಾನ

Date:

  • ರಾಜ್ಯದಲ್ಲಿ ಮತ್ತೆ ಬಿಜೆಪಿ ಕಟ್ಟಬೇಕು ಎಂಬುದು ನಮ್ಮ ಅಪೇಕ್ಷೆ
  • ‘ದೇಶಕ್ಕೆ ಪ್ರಧಾನಿ ಮೋದಿ ಬೇಕಾಗಿದೆ, ವಿಶ್ವಕ್ಕೂ ಮೋದಿ ಬೇಕಾಗಿದೆ’

ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಕಟ್ಟಬೇಕು ಎಂಬುದು ನಮ್ಮ ಅಪೇಕ್ಷೆ. ಯಾರೇ ಪಕ್ಷ ಬಿಟ್ಟಿದ್ದರೂ ಅವರೆಲ್ಲ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಬಿಜೆಪಿಗೆ ವಾಪಸ್‌ ಬನ್ನಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಕ್ತ ಆಹ್ವಾನ ನೀಡಿದರು.

ಚಿಕ್ಕಮಗಳೂರಲ್ಲಿ ಮಾತನಾಡಿದ ಅವರು, “ಮೋದಿಗಾಗಿ, ದೇಶಕ್ಕಾಗಿ, ಮುಂದಿನ ಪೀಳಿಗೆಗಾಗಿ ನೀವೆಲ್ಲ ಬಿಜೆಪಿಗೆ ಮರಳಿ ಆಗಮಿಸಬೇಕು” ಎಂದು ಪರೋಕ್ಷವಾಗಿ ಜಗದೀಶ್‌ ಶೆಟ್ಟರ್‌ ಹಾಗೂ ಲಕ್ಷ್ಮಣ್‌ ಸವದಿ ಅವರಿಗೆ ಹೇಳಿದ್ದಾರಾ ಎನ್ನುವ ಪ್ರಶ್ನೆ ಮುನ್ನೆಲೆಗೆ ಬಂದಿದೆ.

“ಪಕ್ಷ ಬಿಟ್ಟು ಹೋದವರನ್ನು ಮತ್ತೆ ಬಿಜೆಪಿ ಜೊತೆ ಸೇರಿಸಿಕೊಂಡು ಪಕ್ಷವನ್ನು ಗಟ್ಟಿಯಾಗಿ ಮಾಡಬೇಡು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಶ್ರಮ ವಹಿಸಬೇಕು. ದೇಶಕ್ಕೆ ಮೋದಿ ಬೇಕಾಗಿದೆ. ವಿಶ್ವಕ್ಕೂ ಮೋದಿ ಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಲ್ಕಿಸ್‌ ಕಾನೂನು ಸಮರ – ನ್ಯಾಯವ್ಯವಸ್ಥೆಯ ಅಣಕ

“ಈ ಹಿಂದೆ ನಮ್ಮ ಪಕ್ಷದ ತತ್ವ-ವಿಚಾರ ಒಪ್ಪಿ ಕೆಲವು ನಾಯಕರು ಬಿಜೆಪಿ ಸೇರಿದ್ದರು. ಅವರು ಇಲ್ಲೇ ಇರುತ್ತಾರೆ ಎನ್ನುವ ವಿಶ್ವಾಸವಿದೆ. ಅಧಿಕಾರಕ್ಕಾಗಿ ಬಂದರು, ಅಧಿಕಾರ ಇಲ್ಲದಾಗ ಹೋದರು ಎಂಬ ಕೆಟ್ಟ ಹೆಸರನ್ನು ಯಾರೂ ತೆಗೆದುಕೊಳ್ಳುವುದಿಲ್ಲ ಎನ್ನುವ ವಿಶ್ವಾಸವಿದೆ” ಎಂದು ಹೇಳಿದರು.

“ಯಾರೇ ಪಕ್ಷ ಬಿಟ್ಟಿದ್ದರೂ ಮೋದಿಗಾಗಿ ಪಕ್ಷಕ್ಕೆ ಸ್ವಾಗತವಿದೆ ಎನ್ನುವುದು ನನ್ನ ಪ್ರಾರ್ಥನೆ. ಪಕ್ಷ ಬಿಟ್ಟೋದವರ ಜೊತೆ ಸದ್ಯಕ್ಕೆ ಯಾವುದೇ ಮಾತುಕತೆ ನಡೆದಿಲ್ಲ. ಮೋದಿಯಂತ ನಾಯಕ ಈ ದೇಶಕ್ಕೆ ಮತ್ತೆ ಸಿಗಲ್ಲ, ದೇಶದ ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ I.N.D.I.A ಹಾಗೂ ಯಾವ ಪಕ್ಷದಲ್ಲೂ ಮೋದಿಯಂತಹ ನಾಯಕ ಸಿಗಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...