ಬೀದರ್‌ | ಬಸವಲಿಂಗ ಪಟ್ಟದ್ದೇವರ ಸಾಮಾಜಿಕ ಕೊಡುಗೆ ಅನನ್ಯ : ಶಿವಾನಂದ ಮೊಕ್ತೆದಾರ

Date:

ಬಸವತತ್ವ ಪ್ರಚಾರ, ಅನಾಥ ಮಕ್ಕಳ ಪಾಲನೆ ಹಾಗೂ ಶ್ರೀವಿಧಿ ದಾಸೋಹಿಯಂತೆ ಸದಾ ಸಮಾಜ ಪರಿವರ್ತನೆಗಾಗಿ ಶ್ರಮಿಸುತ್ತಿರುವ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರ ಕೊಡುಗೆ ಅಪಾರವಾಗಿದೆ ಎಂದು ಔರಾದ ತಾಲೂಕಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ಮುಕ್ತೆದಾರ ಹೇಳಿದರು.

ಔರಾದ ತಾಲೂಕಿನ ಸಂತಪೂರ ಸಿದ್ದರಾಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ನಾಡೋಜ ಡಾ. ಬಸವಲಿಂಗ ಪಟ್ಟದೇವರ 74ನೇ ಜನ್ಮದಿನದಂದು ಅನಾಥ (ಸುದೈವಿ) ಮಕ್ಕಳಿಗೆ ಬಟ್ಟೆ ಹಾಗೂ ಕಾಣಿಕೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ʼರಾಜ್ಯದಲ್ಲಿ ಕನ್ನಡ ಮಠವೆಂದು ಖ್ಯಾತಿ ಗಳಿಸಿದ ಭಾಲ್ಕಿ ಹಿರೇಮಠದ ನಾಡೋಜ ಡಾ.ಬಸವಲಿಂಗ ಪಟ್ಟದೇವರ ಜನ್ಮದಿನವನ್ನು ರಾಜ್ಯ ಸರ್ಕಾರದಿಂದ ಆಚರಣೆ ಆಗಬೇಕುʼ ಆಗ್ರಹಿಸಿದರು.

ದಸಂಸ ಜಿಲ್ಲಾ ಸಂಚಾಲಕ ಧನರಾಜ್ ಮುಸ್ತಾಪುರೆ ಮಾತನಾಡಿ, ʼಬಸವಲಿಂಗ ಪಟ್ಟದ್ದೇವರ ಶಿಕ್ಷಣ, ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ. ಶ್ರೀಗಳ ಸಮಾಜಮುಖಿ ಕಾರ್ಯ ಹೀಗೆ ಮುಂದುವರೆಯಲಿʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಮಾತನಾಡಿ, ʼಮಾತೃ ಹೃದಯಿ, ಶಿಕ್ಷಣ ಪ್ರೇಮಿ ಡಾ.ಬಸವಲಿಂಗ ಪಟ್ಟದ್ದೇವರು ಶಿಕ್ಷಣಕ್ಕೆ ತೋರುತ್ತಿರುವ ಆಸಕ್ತಿಯಿಂದ ಶಾಲಾ-ಕಾಲೇಜಿನಲ್ಲಿ ಪ್ರತಿಶತ ಫಲಿತಾಂಶ ಪಡೆಯುತ್ತಿವೆ. ಗಡಿ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿ ಅನನ್ಯವಾಗಿದೆʼ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶಿವಪುತ್ರ ಧರಣಿ, ರಾಜಕುಮಾರ ಹಳ್ಳಿಕರ್, ಸುಧಾ ಕೌಟಿಗೆ, ಮೀರಾತಾಯಿ ಕಾಂಬಳೆ, ಪ್ರಿಯಾಂಕಾ ಗುನ್ನಳ್ಳಿಕರ್, ವನದೇವಿ ಎಕ್ಕಳೆ, ರೇಣುಕಾ ಜಮಾದಾರ, ಜಿತೇಂದ್ರ ಡಿಗ್ಗಿ, ಸುಧೀರ್ ಆಲೂರೆ,ಸುನೀತಾ ಮಠಪತಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...