ಹುಬ್ಬಳ್ಳಿ | ವಾಯವ್ಯ ಸಾರಿಗೆಯಲ್ಲಿ ಯುಪಿಐನಿಂದ ಹಣ ಪಾವತಿಸುವ ವ್ಯವಸ್ಥೆ

Date:

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸುವ ವ್ಯವಸ್ಥೆ ಮಾಡಲಾಗಿದ್ದು, ಈ ಪ್ರಯೋಗ ಯಶಸ್ವಿಯಾಗಿದೆ. ಈ ಮೂಲಕ ಸಾರಿಗೆ ಬಸ್‌ಗಳಲ್ಲಿ ಚಿಲ್ಲರೆ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ.

ವಾಯವ್ಯ ಸಾರಿಗೆ ಬಸ್​ಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶೀಘ್ರದಲ್ಲಿಯೇ ನಿಗಮದ ಎಲ್ಲ ಬಸ್‌ಗಳಿಗೂ ಈ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯ ಎಂಡಿ ಭರತ್ ಎಸ್. ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ನವೆಂಬರ್​​ 1ರಿಂದ ಫೋನ್ ಪೇ ಕಂಪನಿಯ ಸಹಯೋಗದಲ್ಲಿ ಯುಪಿಐ ಮೂಲಕ ಹಣ ಸ್ವೀಕೃತಿ ವ್ಯವಸ್ಥೆಯನ್ನು ಹುಬ್ಬಳ್ಳಿ ಗ್ರಾಮಾಂತರ 3ನೇ ಘಟಕದ ಬಸ್ಸುಗಳಲ್ಲಿ ಆರಂಭಿಸಲಾಗಿತ್ತು. ಪ್ರಯಾಣಿಕರು ಫೋನ್ ಪೇ, ಗೂಗಲ್ ಪೇ ಸೇರಿದಂತೆ ಯಾವುದೇ ಯುಪಿಐ ಅಪ್ಲಿಕೇಷನ್ ಮೂಲಕ ಹಣ ಪಾವತಿಸಲು ಅವಕಾಶ ಕಲ್ಪಿಸಲಾಗಿತ್ತು. ಇದರಿಂದ ಚಿಲ್ಲರೆ ಸಮಸ್ಯೆಗೆ ಪರಿಹಾರ ಸಿಕ್ಕಿದೆ, ನಗದು ರಹಿತ ಪ್ರಯಾಣ ಮತ್ತಿತರ ಪ್ರಯೋಜನಗಳಿಂದಾಗಿ ಯುಪಿಐ ವ್ಯವಸ್ಥೆಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ಸಿಕ್ಕಿದೆ ಎನ್ನುತ್ತಿದ್ದಾರೆ ಅಧಿಕಾರಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೈಲಟ್ ಯೋಜನೆಯಡಿಯಲ್ಲಿ, ಪ್ರತಿ ಕಂಡಕ್ಟರ್‌ಗೆ ಪ್ರತ್ಯೇಕ ಸ್ಟ್ಯಾಟಿಕ್ ಕ್ಯೂಆರ್ ಕೋಡ್ ನೀಡಲಾಗಿದೆ. ಮತ್ತು ಅವರ ಟಿಕೆಟಿಂಗ್ ಯಂತ್ರಗಳನ್ನು ಅದಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಕಂಡಕ್ಟರ್ ಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಪ್ರಯಾಣಿಕರು ಫೋನ್‌ಪೇ, ಗೂಗಲ್ ಪೇ ಅಥವಾ ಇತರ ಯುಪಿಐ ಅಪ್ಲಿಕೇಶನ್‌ಗಳ ಮೂಲಕ ಹಣ ಪಾವತಿಸಿ ಟಿಕೆಟ್ ಖರೀದಿಸುತ್ತಿದ್ದಾರೆ ಎಂದು ಎಂಡಿ ಭರತ್ ಅವರು ವಿವರಿಸಿದ್ದಾರೆ.

ಇಲ್ಲಿಯವರೆಗೆ, 27,498 ಯುಪಿಐ ವಹಿವಾಟುಗಳು ನಡೆದಿವೆ ಮತ್ತು 71 ಲಕ್ಷ ರೂ. ಹಣ ಆನ್​ಲೈನ್ ಮೂಲಕ ಬಂದಿದೆ. ಮತ್ತೊಂದೆಡೆ ಈ ವ್ಯವಸ್ಥೆಯಿಂದ ಚಿಲ್ಲರೆ ಸಮಸ್ಯೆ ಬಗೆಹರಿದಿದೆ ಎಂದು ಸಾರಿಗೆ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ವಾಯವ್ಯ ಸಾರಿಗೆಯ ಎಲ್ಲಾ 4,581ಬಸ್‌ಗಳಿಗೆ ಯುಪಿಐ ಪಾವತಿ ವ್ಯವಸ್ಥೆಯನ್ನು ವಿಸ್ತರಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. ಬಸ್‌ಗಳಲ್ಲಿ ಚಿಲ್ಲರೆಗಾಗಿ ಹೊಡೆದಾಟ-ಬಡಿದಾಟ, ಅಥವಾ ಚಿಲ್ಲರೆ ಇಲ್ಲ ಎಂದು ಬಸ್​ನಿಂದ ಇಳಿಸುವುದು, ಟಿಕೆಟ್ ನೀಡಿದ ಬಳಿಕ ಚಿಲ್ಲರೆ ಇಲ್ಲ ಎಂದು ಪ್ರಯಾಣಿಕರಿಗೆ ಚಿಲ್ಲರೆ ನೀಡದೆ ಮರೆಯುವಂತಹ ಅನೇಕ ಘಟನೆಗಳು ಪ್ರತಿ ದಿನ ನಡೆಯುತ್ತಿದ್ದವು. ಸದ್ಯ ಈಗ ಸಾರಿಗೆ ಇಲಾಖೆಯ ಈ ಮಹತ್ವದ ಹೆಜ್ಜೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಿದೆ ಎನ್ನುವುದು ಇಲಾಖೆಯ ಅಭಿಪ್ರಾಯ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...