ಧಾರವಾಡ | ಗ್ರಾಹಕಿಗೆ ಠೇವಣಿ ಹಣ ಹಿಂದಿರುಗಿಸದ ಸೊಸೈಟಿಗೆ ದಂಡ

Date:

ಗ್ರಾಹಕರೊಬ್ಬರು ಠೇವಣಿ ಇರಿಸಿದ್ದ ಹಣವನ್ನು, ಅವಧಿ ಮುಗಿದರೂ ಹಿಂದಿರುಗಿಸದೆ ನಿರ್ಲಕ್ಷ್ಯ ಧೋರಣೆ ಪ್ರದರ್ಶಿಸಿದ್ದ ಧಾರವಾಡದ ವಿಕಾಸ್ ಅರ್ಬನ್ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸೊಸೈಟಿಗೆ ಗ್ರಾಹಕ ಆಯೋಗ ದಂಡ ವಿಶಿದಿದೆ. ಠೇವಣಿ ಹಣ ಮತ್ತು ಅದಕ್ಕೆ 13.5% ಬಡ್ಡಿ ಸೇರಿಸಿ ಕೊಡುವಂತೆ ಆದೇಶಿಸಿದೆ.

ಧಾರವಾಡದ ಕಮಲಾಪುರ ನಿವಾಸಿ ಅನ್ನಪೂರ್ಣಾಹುಲ್ಲಮನಿ ಎಂಬವರು ಸೊಸೈಟಿಯಲ್ಲಿ 2020ರಲ್ಲಿ 1.5 ಲಕ್ಷ ರೂ. ಮತ್ತು 2021ರಲ್ಲಿ 1 ಲಕ್ಷ ರೂ. ಹಣವನ್ನು ಒಂದು ವರ್ಷದ ಅವಧಿಗೆ ಠೇವಣಿ ಇಟ್ಟಿದ್ದರು. ಎರಡೂ ಠೇವಣಿಗಳ ಅವಧಿ ಮುಗಿದ ಬಳಿಕ, ಹಣ ಮತ್ತು ಬಡ್ಡಿಯ ಕೊತ್ತವನ್ನು ನೀಡುವಂತೆ ಸೊಸೈಟಿಗೆ ಕೇಳಿದ್ದರು. ಆದರೆ, ಸೊಸೈಟಿ ಹಣ ನೀಡಿರಲಿಲ್ಲ. ಹೀಗಾಗಿ, ಅನ್ನಪೂರ್ಣ ಅವರು ಸೊಸೈಟಿ ವಿರುದಧ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ನೀಡಿದ್ದರು.

ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯೆ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ ಅವರು ಪ್ರಕರಣದ ವಿಚಾರಣೆ ನಡೆಸಿದ್ದು, ಸೊಸೈಟಿಗೆ ದಂಡ ವಿಧಿಸಿದ್ದಾರೆ. “ಕರಾರಿನಂತೆ ಬಡ್ಡಿ ಸಮೇತ ಠೇವಣಿ ಹಣವನ್ನು ಹಿಂದಿರುಗಿಸುವುದು ಸೊಸೈಟಿ ಕರ್ತವ್ಯ. ಆದರೆ, ಅವಧಿ ಮುಗಿದು ಎರಡು ವರ್ಷಗಳೇ ಕಳೆದಿದ್ದರೂ ಹಣ ನೀಡದೇ ಇರುವುದು ಅಕ್ಷಮ್ಯವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೊಸೈಟಿಯು ಎರಡೂ ಠೇವಣಿಗಳ ಒಟ್ಟು 2.5 ಲಕ್ಷ ರೂ. ಮತ್ತು ಠೇವಣಿ ಇಟ್ಟಾಗಿನಿಂದ ಇಂದಿನವರೆಗೆ 13.5% ಬಡ್ಡಿದರದಲ್ಲಿ ಬಡ್ಡಿಯನ್ನೂ ದೂರುದಾರ ಗ್ರಾಹಕಿಗೆ ನೀಡಬೇಕು. ಅಲ್ಲದೆ, ಆಕೆಯ ಅನುಭವಿಸಿರುವ ಮಾನಸಿಕ ಹಿಂಸೆಗೆ ಪರಿಹಾರವಾಗಿ 25,000 ರೂ. ಹಾಗೂ ಪ್ರಕರಣದ ವೆಚ್ಚಕ್ಕಾಗಿ 10,000 ರೂ. ನೀಡಬೇಕು” ಎಂದು ಆದೇಶ ಹೊರಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...