ಕಲಬುರಗಿ | ನಿಶ್ಚಿತ ಪಿಂಚಣಿ ಜಾರಿಗೊಳಿಸಲು ಪಿಂಚಣಿ ವಂಚಿತ ಸಂಘ ಆಗ್ರಹ

Date:

ಪಿಂಚಣಿ ವಂಚಿತ ಕರ್ನಾಟಕ ರಾಜ್ಯ ಸರ್ಕಾರಿ, ಖಾಸಗಿ (ಪದವಿ ಪೂರ್ವ) ವೃತ್ತಿ ಶಿಕ್ಷಣ (ಜೆ.ಓಸಿ) ಹಾಗೂ ವಿವಿಧ ಇಲಾಖೆಯಿಂದ ವಿಲೀನಗೊಂಡ ನೌಕರರಿಗೆ ಸೇವೆಗೆ ಸೇರಿದ ದಿನಾಂಕ ಪರಿಗಣಿಸಿ ನಿಶ್ಚಿತ ಪಿಂಚಣಿ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.

ಪಿಂಚಣಿ ವಂಚಿತ ಕರ್ನಾಟಕ ರಾಜ್ಯ ಪದವಿ ಪೂರ್ವ (ಜೆ.ಓ.ಸಿ.) ವೃತ್ತಿ ಶಿಕ್ಷಣ ಇಲಾಖೆಯಿಂದ ವಿವಿಧ ಇಲಾಖೆ ವಿಲೀನಗೊಂಡ ನೌಕರರ ಸಂಘದ ಅಧ್ಯಕ್ಷ ಮಲ್ಲಿನಾಥ ಕಳಸ್ಕರ್ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

“ರಾಜ್ಯದಲ್ಲಿ ಸುಮಾರು 20-25 ವರ್ಷಗಳಿಂದ ವೃತ್ತಿ ಶಿಕ್ಷಣ ಸರಕಾರಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದವರನ್ನು ಸರಕಾರ 2010-11ರಲ್ಲಿ ವಿಶೇಷ ಕಾನೂನು ಜಾರಿ ಮಾಡಿ ಆಯಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ನೌಕರರನ್ನು ಖಾಯಂಗೊಳಿಸಲಾಗಿದೆ. ಆದರೆ ಖಾಯಂಗೊಂಡ ನೌಕರದಾರರಿಗೆ ನಿವೃತ್ತಿ ಹೊಂದಿದ ನಂತರ ಯಾವುದೇ ಸೇವಾ ಭದ್ರತೆ ಸಿಕ್ಕಿರುವುದಿಲ್ಲ. ನಿವೃತ್ತಿಯಾದ ನೌಕರರು ನಿವೃತ್ತಿ ವೇತನದಿಂದ ವಂಚಿತರಾಗಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತಿಯಾದ ನೌಕರರಲ್ಲಿ ಹಲವು ಜನ ಮೃತಪಟ್ಟಿದ್ದಾರೆ, ಸೇವೆ ಸಲ್ಲಿಸುವ ಸಂದರ್ಭದಲ್ಲಿಯೂ ಕೂಡಾ ಮೃತಪಟ್ಟಿದ್ದಾರೆ. ಆದರೆ ಇವರಿಗೆ ಸರಕಾರಿ ನೌಕರರಿಗೆ ಸಿಗುವ ಯಾವುದೇ ಸೌಲಭ್ಯಗಳು ಸಿಕ್ಕಿರುವುದಿಲ್ಲ. ನಿವೃತ್ತಿ ಹೊಂದಿದ ಮತ್ತು ಸೇವೆಯಲ್ಲಿ ಮೃತಪಟ್ಟ ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಸದರಿ ನೌಕರರಿಗೆ ಸರಕಾರಿ ನೌಕರರಿಗೆ ಸಿಗುವ ಎಲ್ಲಾ ಸವಲತ್ತುಗಳು ಸಿಗಬೇಕು” ಎಂದು ಒತ್ತಾಯಿಸಿದರು.

“ಈಗಾಗಲೇ ನಿವೃತ್ತಿ ಹೊಂದಿದ ನೌಕರರಿಗೆ ನಿವೃತ್ತಿ ವೇತನ ಸೌಲಭ್ಯ ಒದಗಿಸಿಕೊಡಬೇಕು. ಸೇವೆ ಸಲ್ಲಿಸುವ ವೇಳೆ ಮೃತಪಟ್ಟ ಕುಟುಂಬದ ಸದಸ್ಯರಿಗೆ ಅನುಕಂಪ ಆಧಾರದ ಮೇಲೆ ಸರಕಾರಿ ಹುದ್ದೆಗೆ ನೇಮಕ ಮಾಡಿಕೊಳ್ಳಬೇಕು. ಮಾನವಿಯತೆಯ ಆಧಾರದ ಮೇಲೆ ಸದರಿ ನೌಕರರಿಗೆ ಮತ್ತು ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅನಾಥ ಮಕ್ಕಳ ತಂಗುದಾಣ ವಿರುದ್ಧ ಪ್ರಕರಣ ದಾಖಲು

ಈ ಸಂದರ್ಭದಲ್ಲಿ ಎನ್.ಎಸ್.ಪೂಜಾರಿ, ಜಗನ್ನಾಥ ಮೋದಿ, ಕಾಶಿಂ ಪಟೇಲ್, ಕಾಡಾದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...