ರಾಜ್ಯದಲ್ಲಿ ಬಿರು ಬೇಸಿಗೆಗೆ ಜನ ಕಂಗಾಲು; ಕೊಡಗಿನಲ್ಲಿ ಮಳೆಯ ಸಿಂಚನ

Date:

ರಾಜ್ಯದಲ್ಲಿ ಬಿರು ಬೇಸಿಗೆಯಿಂದ ಜನ ಕಂಗಾಲಾಗಿದ್ದು, ಸುಡುವ ಬಿಸಿಲು, ಬತ್ತಿದ ನದಿ, ಕೆರೆ, ಕೊಳವೆಬಾವಿಗಳಲ್ಲಿಯೂ ನೀರಿಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ತಂದೊಡ್ಡಿದೆ. ಇದೆಲ್ಲದರ ನಡುವೆ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ಅದಕ್ಕೆ ತಕ್ಕಂತೆ ಕೊಡಗು ಜಿಲ್ಲೆಯಲ್ಲಿ ಬುಧವಾರ ಮಳೆಯಾಗಿರುವುದು ಅಚ್ಚರಿ ಮೂಡಿಸಿದ್ದರೂ ಸಂತಸಕ್ಕೆ ಕಾರಣವಾಗಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕಿಗ್ಗಾಲು, ಕಾಕೋಟಪರಂಬುವಿನಲ್ಲಿ ಬುಧವಾರ ಕೆಲ ಸಮಯ ಮಳೆಯಾಗಿದ್ದು, ಕಾದಿದ್ದ ಭೂಮಿಗೆ ತಂಪೆರದಿದೆ.

ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಬಗ್ಗೆ ಮುನ್ಸೂಚನೆ ಇದ್ದು, ಮಾರ್ಚ್ 20ರ ಬಳಿಕ ಕೊಡಗು, ಪಶ್ಚಿಮ ಘಟ್ಟಗಳ ಭಾಗದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿತ್ತು. ಆದರೆ ಅಂದುಕೊಂಡಿದ್ದ ಸಮಯಕ್ಕೂ ಮುನ್ನವೇ ಕೊಡಗು ಜಿಲ್ಲೆಯ ಕಿಗ್ಗಾಲುವಿನಲ್ಲಿ ಮಳೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್‌ ನಿನೋ ಪ್ರಭಾವ ಕಡಿಮೆಯಾಗುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಜಾಗತಿಕವಾಗಿ ತಾಪಮಾನ ಸಹಜ ಸ್ಥಿತಿಗೆ ಮರಳಲಿದೆ. ಈ ಬಾರಿ ರಾಜ್ಯದಲ್ಲಿ ಕೂಡ ಉತ್ತಮ ಮುಂಗಾರು ಮಳೆಯ ನಿರೀಕ್ಷೆ ಇದೆ” ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೇ-ಜೂನ್ ವೇಳೆಗೆ ರಾಜ್ಯದಲ್ಲಿ ಉತ್ತಮ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ಜೂನ್ ವೇಳೆಗೆ ರಾಜ್ಯದಲ್ಲಿ ನೀರಿನ ಸಮಸ್ಯೆ ನಿವಾರಣೆಯಾಗಲಿದೆ” ಎಂದು ನಿರೀಕ್ಷಿಸಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | 5, 8, 9ನೇ ತರಗತಿಯ ಪಬ್ಲಿಕ್ ಪರೀಕ್ಷೆ ಈ ವರ್ಷ ಬೇಡ; ಎಐಡಿಎಸ್‌ಒ ಮನವಿ

ಈ ಬಾರಿ ರಾಜ್ಯದಲ್ಲಿ ಮುಂಗಾರು ಕೈಕೊಟ್ಟರೆ ಭೀಕರ ಬರಗಾಲ ಎದುರಾಗಲಿದೆ. ಆದರೆ ಹವಾಮಾನ ತಜ್ಞರು ಉತ್ತಮ ಮಳೆಯಾಗುವ ಮುನ್ಸೂಚನೆ ಕೊಟ್ಟಿರುವುದು ಸದ್ಯ ಸಮಾಧಾನ ತರಿಸಿದೆ. ಆದರೆ ಮಳೆಗಾಲ ಆರಂಭಕ್ಕೆ ಇನ್ನು ಮೂರು ತಿಂಗಳು ಸಮಯ ಇದ್ದು ಅದುವರೆಗೂ ಸುಡು ಬಿಸಿಲಿನ ನಡುವೆ, ನೀರಿನ ಕೊರತೆ ನಡುವೆ ದಿನ ಕಳೆಯುವುದು ಸವಾಲಾಗಿದೆ.

ಎಲ್‌ ನಿನೋ ಕಾರಣದಿಂದಾಗಿ ದೇಶದ ಹಲವು ರಾಜ್ಯಗಳಲ್ಲಿ ಕಳೆದ ವರ್ಷ ಮಳೆ ಸಂಪೂರ್ಣವಾಗಿ ಕೈಕೊಟ್ಟಿತ್ತು. ಪ್ರಮುಖ ಜಲಾಶಯಗಳು ಅರ್ಧ ಕೂಡ ತುಂಬದೇ ಇರುವುದು ಕೃಷಿ ಚಟುವಟಿಕೆ ಮೇಲೆಯೂ ಪರಿಣಾಮ ಬೀರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...