ಹುಮನಾಬಾದ್‌ | ವಿಕಲಚೇತನರು ಸಂಘಟಿತರಾಗಿ ಹಕ್ಕುಗಳಿಗೆ ಹೋರಾಡಿ

Date:

ಸಮಾಜದಲ್ಲಿ ವಿಕಲಚೇತನರನ್ನು ಅಶಕ್ತರೆಂದು ಕೀಳಿರಿಮೆಯಿಂದ ನೋಡದೇ ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು. ವಿವಿಧ ಕ್ಷೇತ್ರಗಳಲ್ಲಿರುವ ಸೌಲಭ್ಯಗಳನ್ನು ಪಡೆಯಲು ಸಂಘಟಿತರಾಗಿ ಹೋರಾಡಬೇಕು ಎಂದು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಹುಮನಾಬಾದ್ ತಾಲೂಕು ಸಂಯೋಜಕ ಪ್ರದೀಪ ಹೇಳಿದರು.

ಹುಮನಾಬಾದ್ ಪಟ್ಟಣದ ಆರ್ಬಿಟ್ ಸಂಸ್ಥೆಯ ಸಭಾಂಗಣದಲ್ಲಿ ಆರ್ಬಿಟ್ ಸಂಸ್ಥೆ ಹಾಗೂ ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ನಡೆದ ಮಾನಸಿಕ ಅಸ್ವಸ್ಥರ ಹಾಗೂ ವಿಕಲಚೇತನರಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಸಂಯೋಜಕ ಪ್ರವೀಣ್ ಮಾತನಾಡಿ, ʼಡಾ.ಬಿ.ಆರ್.ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ತತ್ವಗಳು ಮೈಗೂಡಿಕೊಂಡು ನಾವೆಲ್ಲರೂ ಹೆಚ್ಚಿನ ಅಧ್ಯಯನ ಮಾಡಬೇಕು. ಸಂಘಟನಾತ್ಮಕದಿಂದ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕುʼ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್ಬಿಟ್ ಸಂಸ್ಥೆಯ ನಿರ್ದೇಶಕ ಫಾದರ್ ವಿಕ್ಟರ್ ವಾಸ್‌ ಮಾತನಾಡಿ‌, ʼ ಸಂಘಟನಾತ್ಮಕ ಸಾಮರ್ಥ್ಯದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ಸರ್ಕಾರ ಅನೇಕ ಯೋಜನೆಗಳು ರೂಪಿಸಿದರೂ ಅದು ಸಂಘಟನಾತ್ಮಕ ಶಕ್ತಿಯ ಕೊರತೆಯಿಂದ ಜನಸಾಮಾನ್ಯರಿಗೆ ಸಮಪರ್ಕವಾಗಿ ತಲುಪಿತ್ತಿಲ್ಲʼ ಎಂದರು.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಸಾವಿನಲ್ಲೂ ಒಂದಾದ ದಂಪತಿ

ಕಾರ್ಯಕ್ರಮದಲ್ಲಿ ಬಿಆರ್‌ಸಿ ಚಂದ್ರಕಲಾ, ಬಿಲಾಲ್ ಹಾಗೂ ಎಪಿಎಫ್ ಸಂಸ್ಥೆಯ ಪ್ರತಿನಿಧಿಗಳಾದ ವೀರೇಶ್, ಆರ್ಬಿಟ್ ಸಂಸ್ಥೆಯ ನಿರ್ದೇಶಕರು, ಸಿಬ್ಬಂದಿ ಮತ್ತು 70 ಜನ ವಿಕಲಚೇತನ ಫಲಾನುಭವಿಗಳು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...