ಧರ್ಮಸ್ಥಳದಲ್ಲಿ ಸ್ವತಂತ್ರ ಪತ್ರಕರ್ತರ ಮೇಲೆ ಯೋಜಿತ ಸಂಘಟಿತ ದಾಳಿ ಖಂಡನೀಯ: ಕೆಪಿಆರ್‌ಎಸ್

Date:

ಧರ್ಮಸ್ಥಳದಲ್ಲಿ ಆ. 6ರಂದು ಸ್ವತಂತ್ರ ಪತ್ರಕರ್ತರ ಮೇಲೆ ನೂರಾರು ಜನ ಸಾಮೂಹಿಕ ದಾಳಿಗಿಳಿದು ಮಾರಣಾಂತಿಕ ಹಲ್ಲೆ ನಡೆಸಿರುವ ಗುಂಡಾವರ್ತನೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ಬಲವಾಗಿ ಖಂಡಿಸಿದೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘದ ಅಧ್ಯಕ್ಷ ಯು.ಬಸವರಾಜ ಮತ್ತು ಪ್ರಧಾನ ಕಾರ್ಯದರ್ಶಿ ಟಿ ಯಶವಂತ “ಮೇಲ್ನೋಟಕ್ಕೆ ಇದೊಂದು ಯೋಜಿತ ಹಾಗು ಸಂಘಟಿತ ದಾಳಿಯಾಗಿರುವುದು ಸ್ಪಷ್ಟವಾಗಿ ಕಂಡು ಬರುತ್ತದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹಾಗು ಸ್ವತಂತ್ರ ಪತ್ರಿಕೋದ್ಯಮದ ಮೇಲೆ ನಡೆದ ಸರ್ವಾಧಿಕಾರಿ ದುಂಡಾವರ್ತನೆಯಾಗಿದೆ” ಎಂದು ಹೇಳಿದೆ.

“ಧರ್ಮಸ್ಥಳವೆಂಬ ಚಿಕ್ಕ ಗ್ರಾಮದಲ್ಲಿ ದಶಕಗಳಿಂದ ನಡೆದಿರುವ, ನೂರಾರು ಅತ್ಯಾಚಾರ ಹಾಗು ಅಸಹಜ ಸಾವುಗಳು, ಕೊಲೆಗಳು, ಭೂಕಬಳಿಕೆಗಳು, ಸುಲಿಗೆಗಳ ವಿಚಾರಗಳ ಬೆಳಕಿನಲ್ಲಿ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾದಳ (SIT) ಕಾಡಿನಲ್ಲಿ ಸಾಕ್ಷಿ ದೂರದಾರರೊಬ್ಬರು ತೋರಿದ ಶವದ ಕುಣಿಗಳನ್ನು ಅಗೆದು ತನಿಖೆಗೆ ಕ್ರಮವಹಿಸಿರುವ ವಿಚಾರ ಈಗ ಜಾಗತಿಕ ಗಮನ ಸೆಳೆದಿದೆ. ಅಲ್ಲಿ ನಡೆದಿರುವ ಪಾಳೆಯಗಾರಿ ಕ್ರೌರ್ಯವನ್ನು ಅಲ್ಲಿನ ಜನ ಹಾಗು ದೌರ್ಜನ್ಯಕ್ಕೊಳಗಾದವರು, ನೊಂದವರು, ದಶಕಗಳ ತಮ್ಮ ನೋವಿಗೆ ಪರಿಹಾರ ಹುಡುಕಿ ತಾವಾಗಿಯೇ ವಿಶೇಷ ತನಿಖಾದಳದ ಮುಂದೆ ಬರುತ್ತಿರುವುದು ನಡೆದಿದೆ. ಕಳೆದ ಒಂದು ತಿಂಗಳಿಂದ ಅಲ್ಲಾಗುತ್ತಿರುವ ದಿನ ನಿತ್ಯದ ಬೆಳವಣಿಗೆಗಳು ಮಾಧ್ಯಮದ ಮೂಲಕ ಹೊರ ಜಗತ್ತಿನ ಗಮನ ಸೆಳೆದಿವೆ. ಅಲ್ಲಿ ಬಹಿರಂಗಗೊಳ್ಳುತ್ತಿರುವ ದೌರ್ಜನ್ಯದ ಸರಣಿಗಳಿಂದ, ಧರ್ಮಸ್ಥಳದ ಜೊತೆ ಸಾಂಸ್ಕೃತಿಕ ನಂಟನ್ನು ಹೊಂದಿರುವ ರಾಜ್ಯವೇ ಬೆಚ್ಚಿ ಬೀಳುವಂತಾಗಿದೆ. ಆತಂಕದಿಂದ ಈ ತನಿಖೆಯನ್ನು ಎದುರು ನೋಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂತಹ ಸಂದರ್ಭದಲ್ಲಿ ಹಾಗು ಅತ್ಯಾಚಾರಕ್ಕೊಳಗಾಗಿ ಕೊಲ್ಲಲ್ಪಟ್ಟ ಸೌಜನ್ಯ ಎಂಬ ವಿದ್ಯಾರ್ಥಿನಿಯ ಕುರಿತ ವಿವರಗಳನ್ನು ಪಡೆಯುತ್ತಿರುವಾಗ ಸ್ವತಂತ್ರ ಪತ್ರಿಕೋದ್ಯಮದ ಪತ್ರಕರ್ತರ ಮೇಲೆ ಯೋಜಿತ ಸಾಮೂಹಿಕ ಮಾರಣಾಂತಿಕ ದಾಳಿ ನಡೆದಿರುವುದು, ಈ ತನಿಖೆಯ ಕ್ರಮ ಮತ್ತು ಮಾದ್ಯಮಗಳ ವರದಿಗಳಿಂದ ಭಯಭೀತರಾದ ಕ್ರೌರ್ಯ ಮೆರೆದ ಶಕ್ತಿಗಳೆ ಈ ದಾಳಿಯ ಸಂಚಿನ ಹಿಂದಿರುವುದರ ಕಡೆ ಬೆರಳು ತೋರುತ್ತಿದೆ ಮತ್ತು ಅದು ಹೆಚ್ಚು ಹೆಚ್ಚು ಸ್ಥಳೀಯ ಸಾಕ್ಷಿಗಳು ಮುಂದೆ ಬರುವುದನ್ನು ತಡೆಯುವ ದುರುದ್ದೇಶ ಹೊಂದಿರುವುದು ಕಂಡು ಬರುತ್ತಿದೆ.

ಆದ್ದರಿಂದ, ರಾಜ್ಯ ಸರಕಾರ ಈ ಯೋಜಿತ ಸಾಮೂಹಿಕ ಗೂಂಡಾಗಿರಿಯನ್ನು ಗಂಭೀರವಾಗಿ ಪರಿಗಣಿಸಿ, ಭಾಗಿಯಾದ ಎಲ್ಲರನ್ನು ಮತ್ತು ಅದರ ಹಿಂದಿರುವ ಗೂಂಡಾಗಳನ್ನು ಬಂಧಿಸಬೇಕು ಮತ್ರು ಬಹು ದೊಡ್ಡ ತನಿಖಾ ಸಂಸ್ಥೆ ತನಿಖೆಯ ಕಾರ್ಯಾಚರಣೆಯಲ್ಲಿರುವಾಗ, ಅದನ್ನೆಲ್ಲ ನಿಗ್ರಹಿಸಬಲ್ಲೆನೆಂಬ ಅಹಮಿಕೆಯಿಂದ ನಡೆದ ಸಂಘಟಿತ ದಾಳಿಯನ್ನು ಭೇದಿಸಲು ವಿಶೇಷ ತನಿಖೆಗೆ ಕ್ರಮವಹಿಸುವಂತೆ ರಾಜ್ಯ ಸರಕಾರವನ್ನು ರೈತ ಸಂಘ ಆಗ್ರಹಿಸುತ್ತದೆ.

ಇಂತಹದ್ದೆ ಪಾಳೆಯಗಾರಿ ಕ್ರೌರ್ಯದ ವಿರುದ್ದ ಹೋರಾಟ ನಡೆಸಿದ ರೈತ ಸಂಘದ ಬೆಳ್ತಂಗಡಿ ತಾಲ್ಲೂಕು ಅಧ್ಯಕ್ಷರಾಗಿದ್ದ ಕಾಂ.ದೇವಾನಂದರ ಮಗಳಾದ ಪದ್ಮಲತಾ, ಸೌಜನ್ಯ, ವೇದವಲ್ಲಿ ಮುಂತಾದವರ ಕೊಲೆಗಳ ಮರುತನಿಖೆಗೂ ಕ್ರಮವಹಿಸಬೇಕು ಹಾಗು ಸಂಘಟಿತ ಹಲ್ಲೆಗೊಳಗಾದ ಪತ್ರಕರ್ತರಿಗೆ ಉಚಿತ ಚಿಕಿತ್ಸೆ ಮತ್ತು ಪರಿಹಾರವನ್ನು ಪ್ರಕಟಿಸಬೇಕು” ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...