ಸರಗೂರು | ಸಮೀಕ್ಷೆಯಲ್ಲಿ ಬೌದ್ಧ ಧರ್ಮ ಎಂದು ನಮೂದಿಸಿ : ಜ್ಞಾನಪ್ರಕಾಶ ಸ್ವಾಮೀಜಿ

Date:

ಮೈಸೂರು ಜಿಲ್ಲೆ, ಸರಗೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯದ ಭವನದಲ್ಲಿ ಭಾನುವಾರದಂದು ಬಲಗೈ ಸಮಾಜದ ಪರಿಶಿಷ್ಟ ಜಾತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಧರ್ಮದ ಕಾಲಂನಲ್ಲಿ ‘ಬೌದ್ಧ’ ಎಂದು ನಮೂದಿಸುವಂತೆ ಕರೆಕೊಟ್ಟರು.

“ರಾಜ್ಯ ಸರಕಾರ ಸೆ.22 ರಿಂದ ಅ.7 ರವರೆಗೆ ನಡೆಸಲಿರುವ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಅಭಿಮಾನಿಗಳು ಹಾಗೂ ಅನುಯಾಯಿಗಳು ಧರ್ಮದ ಕಾಲಂನಲ್ಲಿ ಬೌದ್ಧ ಹಾಗೂ ಜಾತಿ ಕಾಲಂನಲ್ಲಿ ಹೋಲಯ ಎಂದು ಬರೆಸುವಂತೆ ವಿನಂತಿಸಿದರು. ಪರಿಶಿಷ್ಟ ಜಾತಿಯವರು ಬೌದ್ಧ ಎಂದು ಬರೆಸಿದಲ್ಲಿ ಕೇಂದ್ರ ಸರಕಾರದ ಆದೇಶದಂತೆ ಮೀಸಲಾತಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈ ಬಗ್ಗೆ ದಲಿತಪರ ಸಂಘಟನೆಗಳು ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ಮಾಡಿ ಸಮೀಕ್ಷೆಯ ಕಾಲಂ 8 ರಲ್ಲಿನ 6ನೇ ಕ್ರಮ ಸಂಖ್ಯೆಯಲ್ಲಿ ಬೌದ್ಧ ಎಂದು ತಪ್ಪದೇ ಬರೆಸಲು ಮಾರ್ಗದರ್ಶನ ಮಾಡಬೇಕು” ಎಂದು ತಿಳಿಸಿದರು.

ಇದೇ‌ ತಿಂಗಳ 22 ರಿಂದ ಸಮೀಕ್ಷೆ ನಡೆಸಲಾಗುತ್ತಿದ್ದು, ಅಂಬೇಡ್ಕರ್ ಅವರ ಅನುಯಾಯಿಗಳಾದ ನಾವು ಅಂಬೇಡ್ಕರ್ ಅವರು ಹಿಂದೂ ಧರ್ಮ ತ್ಯಜಿಸಿ ನಮ್ಮ ಮೂಲ ಧರ್ಮವಾದ ಬೌದ್ಧ ಧರ್ಮ ಅಪ್ಪಿಕೊಂಡರು. ಹಾಗಾಗಿ, ಅವರ ಮಾರ್ಗದಲ್ಲಿ ನಾವೆಲ್ಲರೂ ಸಾಗುತ್ತಾ ಅಂಬೇಡ್ಕರ್ ಆಶಯದಂತೆ ನಮ್ಮ ಧರ್ಮಕ್ಕೆ ಮರಳಿ ಹೋಗಬೇಕಿದೆ. ಈ ಹಿಂದೆ ನಡೆದ ಸಮೀಕ್ಷೆಯಲ್ಲಿ ಗೊಂದಲ ಉಂಟಾಗಿತ್ತು. ಜಾಗೃತಿ ಮೂಡಿಸುವಲ್ಲಿ ವಿಫಲರಾದೆವು. ಈಗಿನ ಸಮೀಕ್ಷೆಯಲ್ಲಿ ಧರ್ಮದ ಕಾಲಂ 6ರಲ್ಲಿ ಬೌದ್ಧ ಧರ್ಮ ಎಂದು ಜಾತಿಯ ಕಾಲಂನಲ್ಲಿ ಹೊಲಯ ಎಂದು ದಾಖಲಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ನಗರಪಾಲಿಕೆ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ “ಈ ಹಿಂದೆ ನಡೆದ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ನಮಗೆ ಅನ್ಯಾಯವಾಗಿದೆ. ಅತಿ ಹೆಚ್ಚಾಗಿ ರಾಜ್ಯದಲ್ಲಿ ಬಲಗೈ ಸಮುದಾಯ ವಾಸಿಸುತ್ತಿದೆ. ಪಟ್ಟಣ ಪ್ರದೇಶದಲ್ಲಿ ವಾಸಿಸುವ ಜನರು ತಮ್ಮ ಜಾತಿ ಹೇಳಲು ಹಿಂಜರಿದ ಪರಿಣಾಮ ದಾಖಲೆಯಲ್ಲಿ ಬಲಗೈ ಸಮುದಾಯದ ಜನಸಂಖ್ಯೆ ಕಡಿಮೆ ಬಂದಿದೆ. ಈ ಸಮೀಕ್ಷೆಯಲ್ಲಿ ಹಾಗೆ ಆಗಬಾರದು. ಈ ಹಿಂದೆ ಹಿಂದೂ ಧರ್ಮ ಎಂದು ಬರೆಸಿದ್ದರು, ಹಿಂದೂ ಪದವನ್ನು ಬದಲಾಯಿಸಿ ಇನ್ನು ಮುಂದೆ ಸಮೀಕ್ಷೆಯಲ್ಲಿ ಜನರು ಧರ್ಮದ ಕಾಲಂನಲ್ಲಿ ಬೌದ್ಧ ಧರ್ಮ ಎಂದು ಬರೆಸಬೇಕು. ಧರ್ಮದ ಕಾಲಂನಲ್ಲಿ ಬೌದ್ಧ ಧರ್ಮ ಎಂದು ಬರೆಸಿದರೆ ಯಾವುದೇ ತೊಂದರೆಗಳು ಆಗುವುದಿಲ್ಲ. ಸರ್ಕಾರದಿಂದ ಸಿಗುವ ಸೌಲಭ್ಯಗಳು ಮತ್ತು ಮೀಸಲಾತಿ ಮುಂದುವರೆಯುತ್ತದೆ” ಎಂದು ಹೇಳಿದರು.

ಅಂಬೇಡ್ಕರ್ ಚಿಂತಕ ಮಲ್ಕುಂಡಿ ಮಹದೇವಸ್ವಾಮಿ ಮಾತನಾಡಿ ‘ಒಂದು ವೇಳೆ ಪೂರ್ಣ ಪ್ರಮಾಣದಲ್ಲಿ ಬೌದ್ದರೆಂದು ಘೋಷಣೆ ಮಾಡುಕೊಳ್ಳಲು ಇಚ್ಛಿಸುವವರು, ಧರ್ಮದ ಕಾಲಂ ಮತ್ತು ಜಾತಿ ಕಾಲಂನಲ್ಲಿಯೂ ಬೌದ್ಧ ಎಂದೇ ನಮೂದಿಸಬಹುದು. ಈ ಮೂಲಕ ಧಾರ್ಮಿಕ ಸ್ವಾತಂತ್ರ್ಯವನ್ನು ಬಳಸಿಕೊಂಡು ಶಿಕ್ಷಣ, ಉದ್ಯೋಗ, ರಾಜಕೀಯ ಮೀಸಲಾತಿ ಹಕ್ಕುಗಳನ್ನು ಪಡೆಯಬಹುದಾಗಿದೆ. ಜಾತಿ, ಅಸ್ಪೃಶ್ಯತೆಯ ಕರಾಳತೆಯಿಂದ ಮುಕ್ತರಾಗಿ, ಗೌರವಯುತ ಬದುಕು ಕಟ್ಟಿಕೊಳ್ಳಲು ಅವಕಾಶ ಲಭ್ಯವಾಗಲಿದೆ’ ಎಂದು ತಿಳಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಜಾನಪದ ತವರೂರು ಚಾಮರಾಜನಗರದಲ್ಲಿಲ್ಲ ಈ ಬಾರಿಯ ದಸರಾ; ಕಲಾವಿದರ ಮರೆತ ಸರ್ಕಾರ

ಸಭೆಯಲ್ಲಿ ಹೈರಿಗೆ ಶಿವರಾಜು, ಇಟ್ನ ರಾಜಣ್ಣ, ಅಂತರಸಂತೆ ಬುದ್ಧ ವಿಹಾರ ಗೌತಮ ಬಂತೇಜಿ, ಪುರಸಭೆ ಸದಸ್ಯ ಎಚ್. ಸಿ. ನರಸಿಂಹಮೂರ್ತಿ, ನಂಜಪ್ಪ, ತುಂಬಲ ರಾಮಣ್ಣ, ಮಹಾಸಭಾ ಕಾರ್ಯದರ್ಶಿ ಭೀಮನಹಳ್ಳಿ ಸೋಮೇಶ್, ಮಾಜಿ ಅಧ್ಯಕ್ಷ ಶಿವಣ್ಣ, ಮುದ್ದಮಲ್ಲಯ್ಯ, ಸೊಗಳ್ಳಿ ಶಿವಣ್ಣ, ಪುಟ್ಟಯ್ಯ, ಬಸವರಾಜು, ಸದಾಶಿವ, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಸಣ್ಣಸ್ವಾಮಿ, ದಸಂಸ ಅಂಬೇಡ್ಕರ್ ವಾದ ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು, ಅನುಷಾ, ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ನಾಗರಾಜ್, ಕಾಡು ಮನೆ ಪ್ರಸನ್ನ, ಚನ್ನೀಪುರ ಮಲ್ಲೇಶ್, ತುಂಬಸೋಗೆ ನಾಗಣ್ಣ, ಅಣ್ಣಯ್ಯ ಸ್ವಾಮಿ, ಹುನಗಹಳ್ಳಿ ಗೋವಿಂದ, ಮಲ್ಲೇಶ್, ರಮೇಶ್, ಚೌಡಹಳ್ಳಿ ಜವರಯ್ಯ, ಮೂರ್ತಿ, ಗೋಪಾಲ್, ಚಿಕ್ಕದೇವ, ರವಿನೆನಪು, ಈಶ್ವರ್,ಜಿವಿಕ ಉಮೇಶ್, ಎಂ ಡಿ ಮಂಚಯ್ಯ, ಚನ್ನ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...