ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ

Date:

ಪ್ರಧಾನಿ ನರೇಂದ್ರ ಮೋದಿಯವರು ಬಂದ ಬಳಿಕ ಹೆಚ್ಚು ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಅವರೇ ಅನ್ನುವುದರಲ್ಲಿ ಅನುಮಾನವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯಾದಗಿರಿ ನಗರದಲ್ಲಿ ಶನಿವಾರ ನಡೆದ ‘ಆರೋಗ್ಯ ಆವಿಷ್ಕಾರ’ ಕಾರ್ಯಕ್ರಮದಡಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

‘ವರ್ಷಕ್ಕೆ ₹5,000 ಕೋಟಿ ಕೆ.ಕೆ.ಆರ್‌.ಡಿ.ಬಿ ಗೆ ಕೊಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದೆವು. ನಮ್ಮ ಭರವಸೆಯಂತೆ ಇಲ್ಲಿಯವರೆಗೂ ₹13,000 ಕೋಟಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ ₹5,300 ಕೋಟಿ ಮೊತ್ತ ಖರ್ಚಾಗಿದ್ದು, ಹಲವು ಕಾಮಗಾರಿಗಳ ಫಲ ಜನರಿಗೆ ತಲುಪಿದೆ. ಕೆಕೆಆರ್‌ಡಿಬಿಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಈ ಭಾಗಕ್ಕೆ ಇಲಾಖಾವಾರು ಕಾರ್ಯಕ್ರಮಗಳಿಗಾಗಿ ಅನುದಾನ ನೀಡುತ್ತಲಿದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಡಿ.ಎಂ.ನಂಜುಂಡಪ್ಪ ಅವರ ವರದಿಯ ಆಶಯಗಳನ್ನು ನಮ್ಮ ಸರ್ಕಾರ ಈಡೇರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧಿಸುವ ಜೊತೆಗೆ ಮೂಲಭೂತ ಸೌಕರ್ಯಗಳ ಈಡೇರಿಕೆಗೆ ಹಣ ವಿನಿಯೋಗ ಮಾಡಲು ಸೂಚನೆ ನೀಡಿದ್ದೇನೆ. ಇದರ ಪ್ರಕಾರ ಅಕ್ಷರ ಆವಿಷ್ಕಾರ ನಡೆದು ಈಗ ₹440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಉದ್ಘಾಟನೆಯಾಗಿದೆ’ ಎಂದರು.

’42 ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ, ಹೊಸ ಆಸ್ಪತ್ರೆಗಳ ನಿರ್ಮಾಣ ಆಗುತ್ತಿದೆ. ಈ ಭಾಗದ ಆರೋಗ್ಯ ಸವಲತ್ತು ವಿಸ್ತರಿಸಲು ಒಟ್ಟು ₹847 ಕೋಟಿ ಕೊಡಲು ಸರ್ಕಾರ ಯೋಜನೆ ರೂಪಿಸಿದೆ. ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿಯ ಎಲ್ಲಾ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ನಾವು ಅಭಿವೃದ್ಧಿಗೆ ಕೊಟ್ಟಿರುವ ಹಣ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ’ ಎಂದರು.

‘ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371(ಜೆ) ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371(ಜೆ) ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂ‌ಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371(ಜೆ) ಜಾರಿ ಮಾಡಿದರು. ಅವರ ಶ್ರಮ‌ ಮತ್ತು ಹೋರಾಟ 371ಜೆ ಜಾರಿ ಹಿಂದೆ ಕೆಲಸ ಮಾಡಿದೆ’ ಎಂದರು.

ಇದನ್ನೂ ಓದಿ : ಯಾದಗಿರಿ: ಕಲ್ಯಾಣ ಕರ್ನಾಟಕ ಆರೋಗ್ಯ ಸುಧಾರಣೆಗೆ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

‘ಬಸವಣ್ಣನವರ ಆಶಯದ ಪ್ರಕಾರ ನುಡಿದಂತೆ ನಡೆಯುವರು. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು ಸೇರಿ 200 ಭರವಸೆಗಳು ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ. ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಆರ್ಥಿಕವಾಗಿ ರಾಜ್ಯ ಪ್ರಗತಿ ಪಥದಲ್ಲಿರುವುದಕ್ಕೆ ಸಾಕ್ಷಿ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...