ಪ್ರಧಾನಿಯನ್ನು ಗಲ್ಲಿಗಲ್ಲಿ ಸುತ್ತಿಸಿದ್ದೇ ಬಿಜೆಪಿ ಸೋಲಿಗೆ ಕಾರಣ : ರೇಣುಕಾಚಾರ್ಯ ಹೊಸ ಬಾಂಬ್

Date:

ಪ್ರಧಾನಿ ನರೇಂದ್ರ ಮೋದಿ ನಮ್ಮ ಪ್ರಕಾರ ವಿಶ್ವದ ನಾಯಕ. ಆದರೆ ರಾಜ್ಯದ ಚುನಾವಣೆಯ ಸಂದರ್ಭ ಅವರನ್ನು ರಾಜ್ಯದ ಗಲ್ಲಿಗಲ್ಲಿ ಸುತ್ತಿಸಿ ಒಂದು ರೀತಿಯಲ್ಲಿ ಅವಮಾನ ಮಾಡಿದಂಗಾಗಿತ್ತು. ಇದು ಕೂಡ ಜನರ ಆಕ್ರೋಶಕ್ಕೆ ಕಾರಣವಾಗಿ ಬಿಜೆಪಿ ಸೋಲಿಗೆ ಕಾರಣವಾಯಿತು ಎಂದು ಹೊನ್ನಾಳಿ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ಹೊನ್ನಾಳಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಯಡಿಯೂರಪ್ಪನವರನ್ನು ಕೆಳಗಿಳಿಸಿದ್ದೇ ನಮ್ಮ ಸೋಲಿಗೆ ಕಾರಣ. ಸರ್ಕಾರದ ಕೆಲವೊಂದು ತಪ್ಪು ನಿರ್ಧಾರಗಳು ಕೂಡ ಸೋಲಿಗೆ ಕಾರಣವಾಯಿತು ಎಂದು ಬಿಜೆಪಿ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.’

ಒಳ ಮೀಸಲಾತಿಗೆ ಕೈಹಾಕಬೇಡಿ ಎಂದು ಹೇಳಿದರೂ ನಾಯಕರು ಕೈಹಾಕಿದರು‌.
ಮೀಸಲಾತಿ ಗೊಂದಲದ ನಿರ್ಣಯಗಳೇ ಬಿಜೆಪಿಗೆ ಮುಳುವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2023 06 27 at 3.19.00 PM 1

ಗುಜರಾತ್ ಮಾದರಿಯನ್ನು ಟೀಕಿಸಿ, ಪರೋಕ್ಷವಾಗಿ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಬೆಟ್ಟು ಮಾಡಿದ ರೇಣುಕಾಚಾರ್ಯ, ಜಗದೀಶ್ ಶೆಟ್ಟರ್ ಹಾಗೂ ಈಶ್ವರಪ್ಪನವರಿಗೆ ಟಿಕೆಟ್ ತಪ್ಪಿಸಿದ್ದನ್ನು ಹಾಗೂ ಯಡಿಯೂರಪ್ಪನವರನ್ನು ಕೆಳಗಿಳಿಸಿದ್ದನ್ನು ಉಲ್ಲೇಖಿಸಿದರು.

‘ಬಿಜೆಪಿ ರಾಜ್ಯಾಧ್ಯಕ್ಷರು ಗೊಂದಲ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಶೆಟ್ಟರ್, ಈಶ್ವರಪ್ಪ ಸೇರಿ ಹಲವು ನಾಯಕರಿಗೆ ಟಿಕೆಟ್ ತಪ್ಪಿಸಿದರು. ಈಶ್ವರಪ್ಪನವರು ಓಡಾಟ ಮಾಡ್ತಾ ಇರಲಿಲ್ವಾ. ಜಗದೀಶ್ ಶೆಟ್ಟರ್ ಅವರಿಗೆ ಬಹಳ ವಯಸ್ಸಾಗಿತ್ತಾ? ಗುಜರಾತ್ ಮಾದರಿ ಎಂದು ಹೇಳಿ ಬಹಳಷ್ಟು ಹೊಸ ಮುಖಗಳಿಗೆ ಟಿಕೆಟ್ ಕೊಟ್ಟು ಹಿರಿಯರನ್ನು ಕಡೆಗಣಿಸಿ ಬಹಳ ದೊಡ್ಡ ತಪ್ಪು ಮಾಡಿದ್ದಾರೆ. ಜನರ ಆಕ್ರೋಶವೂ ಹೆಚ್ಚಾಗಿತ್ತು. ಇವೆಲ್ಲವೂ ಚುನಾವಣೆಯಲ್ಲಿ ಸೋಲಿಗೆ ಕಾರಣವಾಯಿತು’ ಎಂದು ಹೊನ್ನಾಳಿಯ ಮಾಜಿ ಶಾಸಕ ರೇಣುಕಾಚಾರ್ಯ ಸಪಕ್ಷೀಯರ ವಿರುದ್ಧವೇ ಕಿಡಿಕಾರಿದರು.

ಎನ್‌ಪಿಎಸ್‌ ಕುರಿತು ಸರ್ಕಾರ ಮನವಿ ಸ್ವೀಕರಿಸಿ ಎಂದು ಕೇಳಿದರೂ ನಾಯಕರು ಸ್ವೀಕರಿಸಲಿಲ್ಲ. ಚುನಾವಣಾ ಪ್ರಣಾಳಿಕೆ ಸಮಿತಿಗೆ ಡಾ.ಕೆ.ಸುಧಾಕರ್ ಅವರನ್ನು ತಂದು ಕೂರಿಸಿದರು. ಡಾ.ಕೆ.ಸುಧಾಕರ್​ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ದಾರೆ ಎಂದು ‘ಬಾಂಬೆ ಬಾಯ್ಸ್‌’ ಬಳಗದ ಸುಧಾಕರ್ ವಿರುದ್ಧವೂ ಹೊನ್ನಾಳಿ ಶಾಸಕ ಆಕ್ರೋಶ ಹೊರಹಾಕಿದರು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನೂ ಸಮರ್ಥನಿದ್ದೇನೆ. ಶಾಸಕ, ಸಚಿವನಾಗಿ ಅನುಭವ ಇದೆ, ಅದರೆ ಒತ್ತಡ ಹೇರುವುದಿಲ್ಲ. ವಿ.ಸೋಮಣ್ಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ದು ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತು ಬಿಜೆಪಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಬಳಿಕ, ಬಿಜೆಪಿಯೊಳಗಡೆ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ಇದರ ಹೊಸ ಭಾಗವಾಗಿ ಇಂದು ರೇಣುಕಾಚಾರ್ಯ ಈ ಹೇಳಿಕೆಗಳನ್ನು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...