ಕೊಡಗು | ಕವಿತೆಗೂ ಸಮಾಜವನ್ನು ತಿದ್ದುವ ಶಕ್ತಿ ಇದೆ: ಮಾಜಿ ಸ್ಪೀಕರ್ ಬೋಪಯ್ಯ

Date:

ಕವಿತೆಗೂ ಸಮಾಜವನ್ನು ತಿದ್ದುವ ಶಕ್ತಿ ಇದೆ. ಪತ್ರಕರ್ತರು ಸಾಹಿತ್ಯ ಕ್ಷೇತ್ರದಲ್ಲಿ ಮುಂದುವರಿಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೆ.ಜಿ ಬೋಪಯ್ಯ ಹೇಳಿದ್ದಾರೆ.

ಗೋಣಿಕೊಪ್ಪದ ಕಾವೇರಿ ಕಾಲೇಜಿನಲ್ಲಿ ಕೊಡಗು ಪ್ರೆಸ್‌ಕ್ಲಬ್ ಮತ್ತು ಪತ್ರಕರ್ತರ ಸಂಘ ಯೋಜಿಸಿದ್ದ, ಪತ್ರಕರ್ತ ಕೆ.ಬಿ ಜಗದೀಶ್ ಜೋಡುಬೀಟಿ ಅವರ ‘ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ’ ಕವನ ಸಂಕಲನ ಜನಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಪುಸ್ತಕಗಳು ಸಮಾಜದ ಆಗು-ಹೋಗುಗಳನ್ನು ಬಿಂಬಿಸುವ ಕಾರ್ಯ ಮಾಡುತ್ತವೆ. ಕವನಗಳು ಕೂಡ ಸಮಾಜವನ್ನು ತಿದ್ದುವಷ್ಟು ಶಕ್ತಿ ಹೊಂದಿರುತ್ತದೆ. ಪತ್ರಕರ್ತರು ಸಾಹಿತ್ಯ ಕ್ಷೇತ್ರದಲ್ಲಿ ಮುಂದುವರಿಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ಕಾರ್ಯ ಮೆಚ್ಚುವಂತದ್ದಾಗಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕವಿ ಟಿ ಸತೀಶ್ ಜವರೇಗೌಡ ಮಾತನಾಡಿ, “ಕನ್ನಡ ಸಾಹಿತ್ಯ ಪರಂಪರೆ ಗಟ್ಟಿಯಾಗಿ ತಳವೂರಲು ಕಾವ್ಯಗಳ ಪಾತ್ರ ದೊಡ್ಡದು. ಚುಟುಕು, ಹನಿಗವನಗಳ ಮೂಲಕ ಕಾವ್ಯ ಸಾಹಿತ್ಯಗಳು ಹುಟ್ಟಿಕೊಳ್ಳುವುದರಿಂದ ಮಹಾ ಕಾವ್ಯಗಳು ಸಾಹಿತ್ಯ ಪರಂಪರೆ ರಕ್ಷಣೆಯ ಭಾಗವಾಗಿದೆ. ಕಾವ್ಯ ಪರಂಪರೆ ಬತ್ತಲು ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ಪ್ರತೀ ವರ್ಷ ಬಿಡುಗಡೆಯಾಗುವ ಸುಮಾರು 3 ಸಾವಿರ ಪುಸ್ತಕಗಳಲ್ಲಿ ಕಾವ್ಯಗಳೇ ಸಿಂಹಪಾಲು ಹೊಂದಿದೆ. ಕಾವ್ಯ ಪ್ರಕಾಶನಗಳು ಕೂಡ ಜನಪ್ರಿಯಗೊಳ್ಳುತ್ತಿದೆ” ಎಂದರು.

ಪ್ರೆಸ್‌ಕ್ಲಬ್‌ ಬೆಳ್ಳಿಮಹೋತ್ಸವ ಆಚರಣಾ ಸಮಿತಿ ಸದಸ್ಯ ಜಿ. ರಾಜೇಂದ್ರ ಮಾತನಾಡಿ, “ಧನಾತ್ಮಕ ಭಾವನೆಗಳು ಕವನಗಳ ರೂಪದಲ್ಲಿ ಮೂಡಿಬರುವುದರಿಂದ ಸಮಾಜಕ್ಕೆ ಸಾಕಷ್ಟು ಬೆಳವಣಿಗೆಗೆ ಅವಕಾಶ ನೀಡಿದಂತಾಗುತ್ತದೆ. ಅನುಭವ ಹಂಚಿಕೊಳ್ಳಬೇಕೆಂಬ ಅಭಿಪ್ರಾಯಗಳಿದ್ದಾಗ ಉತ್ತಮ ಕವನಗಳು ಮೂಡಿಬರಲಿದೆ. ಪ್ರಕೃತಿಗೆ ಪೂರಕ ಕವನಗಳು ಸಾಮಾಜಿಕ ಕಳಕಳಿಯಾಗಿ ರೂಪುಗೊಳ್ಳಬೇಕು” ಎಂದರು.

ಸಾಹಿತಿ ಸೋಮೆಯಂಡ ಕೌಸಲ್ಯ ಸತೀಶ್ ಪುಸ್ತಕದ ಕುರಿತು ಮಾತನಾಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ಕಾವೇರಿ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಕುಲ್ಲಚಂಡ ಬೋಪಣ್ಣ, ಕವಿ ಜಗದೀಶ್ ಜೋಡುಬೀಟಿ ಇದ್ದರು.
ಕಲಾವಿದೆ ಪುತ್ತಾಮನೆ ವಿದ್ಯಾ ಜಗದೀಶ್ ಪ್ರಾರ್ಥಿಸಿದರು. ಕಿಶೋರ್ ರೈ ಕತ್ತಲೆಕಾಡು ನಿರೂಪಿಸಿದರು. ಚನ್ನನಾಯಕ್, ಮಂಡೇಡ ಅಶೋಕ್, ದರ್ಶನ್ ದೇವಯ್ಯ ಅತಿಥಿಗಳ ಪರಿಚಯ ಮಾಡಿದರು. ಸಿಂಗಿ ಸತೀಶ್ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...