ಬೆಳಗಾವಿ | ಸಮಾಜ ಬದಲಾವಣೆಗೆ ಕಾವ್ಯ ರಚನೆಯಾಗಲಿ: ನಿರ್ಮಲಾ ಬಟ್ಟಲ

Date:

  • ಸಾಹಿತ್ಯ ಯಾರ ಸ್ವತ್ತು ಅಲ್ಲ, ಅದಕ್ಕೆ ಪದವಿಗಳ ಅಗತ್ಯವೂ ಇಲ್ಲ
  • ಜನಪದರು ಅನಕ್ಷರಸ್ಥರಾಗಿದ್ಧರೂ ಶ್ರೇಷ್ಠ ಕಾವ್ಯಗಳನ್ನು ರಚಿಸಿದ್ಧರು

ಕವಿಯು ಸಮಾಜದ ಕಣ್ಣಾಗಿ ತನ್ನ ಸುತ್ತಲು ನಡೆಯುವ ಘಟನೆಗಳನ್ನು ಅಕ್ಷರಗಳಲ್ಲಿ ಹಿಡಿದಿಟ್ಟು ಸಾಮಾಜಿಕ ಬದಲಾವಣೆಗೆ ಅಣಿಯಾಗಬೇಕು ಎಂದು ರಾಣಿ‌ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೆಟ್ ಸದಸ್ಯೆ ನಿರ್ಮಲಾ ಬಟ್ಟಲ ಹೇಳಿದರು

ಬೆಳಗಾವಿ ಜಿಲ್ಲೆ ರಾಮದುರ್ಗದ ಸಿ ಎಸ್ ವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತುಹಾಗೂ ಕರ್ನಾಟಕ ಸಂಘ ಕಾಲೇಜಿನ ಐಕ್ಯೂಎಸಿ ಸಂಯುಕ್ತಾಶ್ರಯದಲ್ಲಿ ಜರುಗಿದ ಕವಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕವನ ರಚಿಸಲು ವಿಶ್ವವಿದ್ಯಾಲಯದ ಪದವಿ, ಪಿಎಚ್ ಡಿ ಗಳೇ ಬೇಕಾಗಿಲ್ಲ, ಸಾಹಿತ್ಯ ಯಾರ ಸ್ವತ್ತು ಅಲ್ಲ, ಅಕ್ಷರಜ್ಞಾನದ ಮೇಲೆ ಹಿಡಿತವಿದ್ದರೆ ಸಾಕು ಯಾರು ಬೇಕಾದರೂ ಕವಿತೆ ರಚಿಸಬಹುದು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ಧ ಕಸಾಪ ತಾಲೂಕು ಅಧ್ಯಕ್ಷ ಪಾಂಡುರಂಗ ಜಟ್ಟಗನ್ನವರ ಮಾತನಾಡಿ, “ಹೊಸ ತಲೆಮಾರಿನ ಯುವ ಪೀಳಿಗೆ ಸೇರಿದಂತೆ ಹಿರಿಯ ಸಾಹಿತ್ಯ ಆಸಕ್ತರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಾಲೂಕಿನಾದ್ಯಂತ ಕವಿಗೋಷ್ಠಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಆಯೋಜಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕವಿಗೋಷ್ಠಿಗಳನ್ನು ನಡೆಸಲಾಗುವುದು” ಎಂದು ಹೇಳಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪನ್ಯಾಸಕ ಪ್ರೊ. ಎಸ್ ಎಮ್ ಸಕ್ರಿ ಮಾತನಾಡಿ ,” ಕಾವ್ಯಕ್ಕೆ ಹರಿತವಾದ ಶಕ್ತಿಯಿದೆ. ಇದಕ್ಕೆ ಉದಾಹರಣೆಗೆ ತ್ರಿಪದಿಗಳು, ವಚನಗಳು ಇಂದಿಗೂ ಪ್ರಸ್ತುತವಾಗಿವೆ” ಎಂದು ಹೇಳಿದರು.

ಕರ್ನಾಟಕ ಸಂಘದ ಎಚ್.ಪಿ ಕಾರ್ಯಾಧ್ಯಕ್ಷ ಹಾಲೊಳ್ಳಿ ಮಾತನಾಡಿ, “ಕನ್ನಡ ನಾಡಿನ ಜನಪದ ಕವಿಗಳು ಅನಕ್ಷರಸ್ಥರಾಗಿದ್ಧರೂ ಕೂಡ ಶ್ರೇಷ್ಠವಾದ ಕಾವ್ಯಗಳನ್ನು ರಚಿಸಿದ್ಧರು. ಇಂದಿನ ಯುವ ಸಮೂಹ ಹೆಚ್ಚಿನ ಅಧ್ಯಯನ ಮೈಗೂಡಿಸಿಕೊಂಡರೆ ಸಾಹಿತ್ಯ‌ ರಚಿಸಲು ಸಾಧ್ಯ” ಎಂದರು

ಕಾರ್ಯಕ್ರಮದಲ್ಲಿ ಪ್ರೋ .ಎಸ್ ಎಸ್ ಸುಲ್ತಾನಪೂರ ಮಾತನಾಡಿದರು. ಸುಮಾರು 30 ಕವಿಗಳು ಸ್ವರಚಿತ ಕವಿತೆ ವಾಚಿಸಿದರು. ಕಾರ್ಯದರ್ಶಿ ರಮೇಶ ಬಿಕ್ಕನ್ನವರ, ಕಲ್ಲಪ್ಪ ಪೂಜಾರ, ಡಾ ಎಸ್.ಬಿ.ಸಂಗಮ, ಪ್ರಕಾಶ ತೆಗ್ಗಿಹಳ್ಳಿ, ಪಿ.ಎಂ.ಸಿಂಗಾರಗೊಪ್ಪ, ಸುರೇಶ ಹುಚ್ಚನ್ನವರ ಸೇರಿದಂತೆ ಇತರರು ಉಪಸ್ಥಿತರಿದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...