ಪೊಲೀಸ್‌ ಎನ್ನುವ ಸಮಾಜದ ಆಯುಧ ತುಕ್ಕು ಹಿಡಿಯದಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು: ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌

Date:

ಡ್ರಗ್ಸ್‌ ದಾಸರ ಕುರಿತು ಅಥವಾ ಡ್ರಗ್ಸ್‌ ಇರುವುದನ್ನು ಕಂಡವರು ತಮ್ಮ ಪಾಡಿಗೆ ತಾವು ಇರುವುದೇ ಅನಾಹುತಗಳಿಗೆ ಕಾರಣವಾಗಿದೆ. ನಮ್ಮ ಕರ್ತವ್ಯದ ಜತೆಗೆ ಸಮಾಜದ ಒಳಿತಿಗಾಗಿ ದುಡಿಯುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿದ್ದೇವೆ, ಅದರಿಂದ ಪೊಲೀಸ್‌ ಎನ್ನುವಂತಹ ಒಂದು ಸಮಾಜದ ಆಯುಧ ತುಕ್ಕು ಹಿಡಿಯದಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌ ಹೇಳಿದರು.

ಹಾಸನ ಜಿಲ್ಲೆಯ ಸಕಲೇಶಪುರ ನಗರದಲ್ಲಿ ಹಮ್ಮಿಕೊಂಡಿದ್ದ ʼಡ್ರಗ್ಸ್‌ ಮುಕ್ತ ಸಕಲೇಶಪುರʼ ಎರಡನೇ ವರ್ಷದ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಡ್ರಗ್ಸ್‌ ಸಂಬಂಧಿತ ವಿಷಗಳು ಕಂಡುಬಂದರೆ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸದೆ, ಮೌನ ವಹಿಸಿದರೆ ಪರೋಕ್ಷವಾಗಿ ನೀವೂ ಕೂಡ ಡ್ರಗ್ಸ್‌ ಸೇವನೆಗೆ ಪ್ರಚೋದಿಸಿದಂತಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಇಲಾಖೆಯೊಂದಿಗೆ ಸಹಕರಿಸಬೇಕು” ಎಂದು ಸಾರ್ವಜನಿಕರಲ್ಲಿ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಇಒ ಪುಷ್ಪ ಮಾತನಾಡಿ, “ನನ್ನ ಸ್ನೇಹಿತರ ಮನೆಯಲ್ಲಿಯೇ ಅವರ ಮಗ ನಶೆಗೆ ದಾಸನಾಗಿದ್ದು, ತಂದೆ ತಾಯಿಯನ್ನು ವಿಪರೀತವಾಗಿ ಕಾಡುತ್ತಿರುವುದನ್ನು ನೋಡುತ್ತಿದ್ದೇವೆ. ಹಾಗಾಗಿ ನಾವೂ ಕೂಡ ಪ್ರತಿ ಶಾಲೆಗಳಲ್ಲಿಯೂ ವ್ಯಸನ ಮುಕ್ತದ ಕುರಿತು ಶಿಕ್ಷಣ ನೀಡುವಂತಹ ಕಾರ್ಯಗಳನ್ನು ಕೈಗೊಂಡಿದ್ದೇವೆ. ಅದೇ ರೀತಿ ಮನೆಯಲ್ಲಿಯೂ ಕೂಡ ಪೋಷಕರು ಮಕ್ಕಳೊಂದಿಗೆ ಉತ್ತಮ ಒಡನಾಟ ಇಟ್ಟುಕೊಳ್ಳುವ ಮೂಲಕ ವ್ಯಸನಮುಕ್ತಗೊಳಿಸಲು ಮುಂದಾಗಬೇಕು” ಎಂದು ಹೇಳಿದರು.

ಅಲಿಬಾಬಾ ಮಾತನಾಡಿ, “ನಮ್ಮ ಸಮಾಜದಲ್ಲಿ ಒಳ್ಳೆಯವರು ಸುಮ್ಮನಿದ್ದು, ಕೆಟ್ಟವರಿಗೆ ಪರೋಕ್ಷವಾಗಿ ಪ್ರೋತ್ಸಾಹಿಸುತ್ತಿರುವುದರಿಂದಲೇ ಇಂದು ಹೆಚ್ಚಿನ ಯುವಜನರು ನಶೆಗೆ ದಾಸರಾಗಿದ್ದಾರೆ. ಸಂವಿಧಾನದ ಪೀಠಿಕೆಯಲ್ಲಿ ಸ್ವಾತಂತ್ರ್ಯ ಸಮಾನತೆ, ಭ್ರಾತೃತ್ವ ಎನ್ನುವಂತಹ ಅಂಶಗಳಿವೆ. ಆದರೆ ವ್ಯಸನಗಳಿಗೆ ದಾಸರಾದಾಗ ಈ ಮೂರೂ ಪದಗಳ, ಸಂಬಂಧಗಳ ಅರ್ಥವೇ ಇಲ್ಲದಂತಾಗುತ್ತದೆ. ವ್ಯಸನಿಗಳಿಗೆ ಇದರ ಅರಿವೇ ಇಲ್ಲದಂತಾಗುತ್ತದೆ” ಎಂದರು.

“ಕಾನೂನಾತ್ಮ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಡ್ರಗ್ಸ್‌ ಮಾರಾಟಗಾರರಿಗೆ ಮತ್ತು ವ್ಯಸನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ವ್ಯಸನ ಮುಕ್ತ ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಅತಿಥಿಗಳು ಉಪವಿಭಾಗಾಧಿಕಾರಿ ಎಚ್‌ ಡಿ ರಾಜೇಶ್‌, ತಹಶೀಲ್ದಾರ್‌ ಸುಪ್ರೀತ, ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌, ಕಾರ್ಯನಿರ್ವಹಣಾಧಿಕಾರಿ ಗಂಗಾಧರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ, ‌ಧರ್ಮಸ್ಥಳ ನಶಾ ಮುಕ್ತ ಕೇಂದ್ರದ ಡಾ. ನವೀನ್‌ ಚಂದ್ರಶೇಕರ್ ಇದ್ದರು. ಪತ್ರಕರ್ತ ಮಲ್ನಾಡ್‌ ಮೆಹಬೂಬ್‌ ಸ್ವಾಗತಿಸಿದರು, ಜೈ ಭೀಮ್‌ ಮಂಜು ಕಾರ್ಯಕ್ರಮದ ನಿರೂಪಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...