ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕೊಲೆ ಮಾಡಿದೆ: ದಿಂಗಾಲೇಶ್ವರ ಸ್ವಾಮೀಜಿ

Date:

ಅನ್ಯಾಯ ತಡೆಯುವಂತೆ ಮನವಿ ಮಾಡಿದರೆ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹೋರಾಟವನ್ನೇ ತಡೆಗಟ್ಟಲು ಮುಂದಾಗಿದೆ. ಶಿರಹಟ್ಟಿಯಲ್ಲಿ 144 ಸೆಕ್ಷನ್ ಜಾರಿ ಮಾಡಿರುವ ಪೊಲೀಸ್ ಇಲಾಖೆ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕೊಲೆ ಮಾಡಿದೆ ಎಂದು ಫಕೀರೇಶ್ವರ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆರೋಪಿಸಿದ್ದಾರೆ.

ತೋಂಟದಾರ್ಯ ಮಠವನ್ನು ಭಾವೈಕ್ಯತೆ ಮಠ ಮಾಡುವ ವಿಚಾರಕ್ಕೆ ಆಕ್ಷೇಪಿಸಿ ಫಕೀರೇಶ್ವರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಮಠದ ಸುತ್ತ ಪೊಲೀಸ್ ಸರ್ಪಗಾವಲು ಇಟ್ಟಿದ್ದು, ಭಕ್ತರನ್ನು ಮಠಕ್ಕೆ ಬಿಡುತ್ತಿಲ್ಲ. ರಾತ್ರೋರಾತ್ರಿ ನೋಟಿಸ್ ನೀಡಲಾಗಿದೆ. ಗದಗದಲ್ಲಿ ಹೋರಾಟ ಮಾಡಲು ನಿರ್ಧರಿಸಿದ್ದೆವು. ಆದರೆ, ಅಲ್ಲಿ 144 ಸೆಕ್ಷನ್ ಜಾರಿ ಮಾಡದೆ, ಶಿರಹಟ್ಟಿಯಲ್ಲಿ ಜಾರಿ ಮಾಡಿದ್ದಾರೆ. ಇದು ಅಕ್ಷಮ್ಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ತೋಂಟದಾರ್ಯ ಮಠ ವಿರಕ್ತ ಮಠವೇ ಹೊರತು ಭಾವೈಕ್ಯತೆ ಮಠವಲ್ಲ. ವಿರಕ್ತ ಮಠವನ್ನು ಭಾವೈಕ್ಯತೆ ಮಠ ಮಾಡುವುದು ಭಾವೈಕ್ಯತೆ ಹೊಂದಿರುವ ಮಠಕ್ಕೆ ಮಾಡುವ ಘೋರ ಅನ್ಯಾಯ. ಇಂತಹ ಜಾತಿವಾದಿ ಸ್ವಾಮಿಗಳಿಗೆ ಮಣೆ ಹಾಕಬಾರದು. ಸದ್ಯ ನಮ್ಮ ಮೇಲೆ ಆಗುತ್ತಿರುವ ಅನ್ಯಾಯವನ್ನು ಮಾಧ್ಯಮಗಳ ಮೂಲಕ ಸರ್ಕಾರದ ಗಮನಕ್ಕೆ ತರುತ್ತಿದ್ದೇವೆ. ಭಾವೈಕ್ಯತೆ ಹೋರಾಟ ಮುಂದುವರೆಸುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...